Tuesday, August 25, 2026
Tuesday, August 25, 2026

ಓಮಿಕ್ರಾನ್: ತಡೆಗೆ ಮುಖ್ಯಮಂತ್ರಿ ಸಮಾಲೋಚನೆ

Date:

ವಿಶ್ವಾದ್ಯಂತ ಆತಂಕಕ್ಕೆ ಕಾರಣವಾಗಿರುವ ಕೊರೊನಾ ವೈರಸ್ ನ ಹೊಸ ರೂಪಾಂತರಿ ಓಮಿಕ್ರಾನ್ ರಾಜ್ಯದಲ್ಲೂ ಲಗ್ಗೆಯಿಟ್ಟ ಬೆನ್ನಲ್ಲೇ ಸರ್ಕಾರ ಎಚ್ಚೆತ್ತುಕೊಂಡಿದೆ.
ವಿವಿಧ ರಾಷ್ಟ್ರಗಳಿಂದ ಇಲ್ಲಿಯವರೆಗೂ ದೇಶಕ್ಕೆ ಆಗಮಿಸಿದ 16 ಸಾವಿರ ಪ್ರಯಾಣಿಕರ ಆರ್ ಟಿ-ಪಿಸಿಆರ್ ಟೆಸ್ಟ್ ಮಾಡಲಾಗಿದೆ. ಈ ಪೈಕಿ 18 ಪ್ರಯಾಣಿಕರಲ್ಲಿ ಸೋಂಕು ದೃಡಪಟ್ಟಿದೆ. ಇವರ ಸ್ಯಾಂಪಲ್ ಅನ್ನು ಜಿನೋಮ್ ಸಿಕ್ವೆನ್ಸಿಂಗ್ ಗೆ ಕಳುಹಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಸಂಸತ್ತಿಗೆ ತಿಳಿಸಿದ್ದಾರೆ.
ದಿಲ್ಲಿಯಿಂದ ಬೆಂಗಳೂರಿಗೆ ಹಿಂದಿರುಗಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಚಿವರಾದ ಗೋವಿಂದ ಕಾರಜೋಳ, ಡಾ.ಸಿ‌.ಎನ್. ಅಶ್ವಥ್ ನಾರಾಯಣ್, ಡಾ.ಕೆ.ಸುಧಾಕರ್, ಆರ್, ಅಶೋಕ್ ಹಾಗೂ ತಜ್ಞ ವೈದ್ಯರು, ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ವೇಳೆ ವೈರಸ್ ಹರಡುವಿಕೆ ತಡೆಗೆ ಕ್ರಮ ಜೊತೆಗೆ ಆರೋಗ್ಯ ಮೂಲಸೌಕರ್ಯ, ಚಿಕಿತ್ಸೆಗೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ವಿಸ್ತೃತ ಚರ್ಚೆ ನಡೆಸಲಾಯಿತು.
18 ಸಾವಿರ ದಾದಿಯರಿಗೆ ಒಂದು ತಿಂಗಳ ತರಬೇತಿ, ಮಕ್ಕಳ ಐಸಿಯು ಸಿದ್ಧತೆ ಸೇರಿದಂತೆ ಸಂಭವನೀಯ ಕೋವಿಡ್ 3ನೇ ಅಲೆಗೆ ವೈದ್ಯಕೀಯ ಕಾಲೇಜುಗಳಲ್ಲಿ ಅಗತ್ಯ ಸಿದ್ಧತೆಗೆ ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...