Sunday, August 23, 2026
Sunday, August 23, 2026

ZP Chikkamagaluru ಮೂಗ್ತಿಹಳ್ಳಿ ವ್ಯಾಪ್ತಿಯ ನಿವೇಶನ ರಹಿತರಿಗೆ ನಿವೇಶ‌ನ ನೀಡಲು ಆಗ್ರಹ

Date:

ZP Chikkamagaluru ಚಿಕ್ಕಮಗಳೂರು ತಾಲ್ಲೂಕಿನ ಮೂಗ್ತಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡಲು ಜಮೀನು ಮಂಜೂರು ಮಾಡಿಕೊಡಬೇಕು ಎಂದು ಮೂಗ್ತಿಹಳ್ಳಿ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯು ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಈ ಸಂಬಂಧ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅವರಿಗೆ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಮನವಿ ಸಲ್ಲಿಸಿ ನಿವೇಶನ ರಹಿತರಿಗೆ ಗ್ರಾಮದಲ್ಲಿ ಗುರುತಿಸಿರುವ ಜಮೀನನ್ನು ಮಂಜೂರು ಮಾಡಿಕೊಟ್ಟು ಸುಗಮ ಜೀವನಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಗ್ರಾ.ಪಂ. ಅಧ್ಯಕ್ಷ ಉಮೇಶ್‌ಶೆಟ್ಟಿ ಮೂಗ್ತಿಹಳ್ಳಿ ವ್ಯಾಪ್ತಿಯ ಕದ್ರಿಮಿದ್ರಿ ಮತ್ತು ಕೆಸವಿನಮನೆ ಗ್ರಾಮಗಳಲ್ಲಿ ಸುಮಾರು ೨೦೦ ಮಂದಿ ನಿವೇಶನ ರಹಿತರು ನಿರಂತರವಾಗಿ ನಿವೇಶನ ಹಂಚಿಕೆ ಮಾ ಡಲು ಪಂಚಾಯಿತಿಗಳಿಗೆ ಅರ್ಜಿಗಳನ್ನು ಸಲ್ಲಿಸಿದ್ದಾರೆ ಎಂದು ಹೇಳಿದರು.

ZP Chikkamagaluru ಕದ್ರಿಮಿದ್ರಿ ವಾರ್ಡ್ ಹಾಗೂ ಗ್ರಾಮ ಸಭೆಗಳಲ್ಲಿ ಪಂಚಾಯಿತಿ ವ್ಯಾಪ್ತಿಯಲ್ಲಿನ ನಿವೇಶನ ರಹಿತರಿಗೆ ಹಂಚಿಕೆ ಮಾಡಲು ಅವಶ್ಯಕತೆಯಿರುವ ಜಮೀನಿಗೆ ಪ್ರಸ್ತಾವನೆ ಸಲ್ಲಿಸಲು ನಿರ್ಣಯಿಸಿರುವ ಹಿನ್ನೆಲೆಯಲ್ಲಿ ನಿವೇಶನ ರಹಿತರಿಗೆ ಜಾಗವನ್ನು ಮಂಜೂರು ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಅಂಬಿಕಾ, ಸದಸ್ಯರುಗಳಾದ ನವೀನಕುಮಾರಿ, ಪ್ರಭಾಕರ್, ಮಂಜುನಾಥ್, ಕಮಲಾಕ್ಷಿ, ಮಾಜಿ ಸದಸ್ಯ ಜಗನ್ನಾಥ್, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ರಾಜ್‌ಕುಮಾರ್ ಹಾಗೂ ನಿವೇಶನ ರಹಿತರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...