Saturday, May 16, 2026
Saturday, May 16, 2026

Rotary Shivamogga ಸಮಾಜ ಸೇವೆಯ ಜೊತೆ ವೈಯಕ್ತಿಕ ಪ್ರಗತಿ ಸಾಧ್ಯ-ವಿಲಿಯಂ ಡಿಸೋಜಾ

Date:

Rotary Shivamogga ಹೊಸ ವಿಚಾರಗಳ ನಿರಂತರ ಕಲಿಕೆ ಹಾಗೂ ಗುಣಾತ್ಮಕ ನಾಯಕತ್ವ ಗುಣದಿಂದ ಸಂಸ್ಥೆಯು ಬೆಳವಣಿಗೆ ಹೊಂದಲು ಸಾಧ್ಯವಿದೆ. ಸಂಸ್ಥೆಯ ಎಲ್ಲ ಸದಸ್ಯರ ಪಾಲ್ಗೊಳ್ಳುವಿಕೆಯು ಮುಖ್ಯ ಎಂದು ಹೊಯ್ಸಳ ಕಾಲೇಜ್ ಆಫ್ ಮ್ಯಾನೇಜ್‌ಮೆಂಟ್ ಪ್ರಾಚಾರ್ಯ ವಿಲಿಯಂ ಡಿಸೋಜ ಹೇಳಿದರು.

ಶಿವಮೊಗ್ಗ ರಾಜೇಂದ್ರ ನಗರದಲ್ಲಿರುವ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಸದಸ್ಯರು ಪರಸ್ಪರ ಒಡನಾಟ, ಸೇವಾ ಚಟುವಟಿಕೆ ಹಾಗೂ ಶಕ್ತಿ ಸಾಮರ್ಥ್ಯಗಳನ್ನು ಒಂದು ಸಂಸ್ಥೆಯಲ್ಲಿ ತೊಡಗಿಸಿಕೊಂಡು ಸಮಾಜ ಸೇವೆ ಮಾಡುವುದರ ಜೊತೆಗೆ ವೈಯಕ್ತಿಕವಾಗಿಯೂ ಪ್ರಗತಿ ಕಾಣಬಹುದು ಎಂದು ತಿಳಿಸಿದರು.

Rotary Shivamogga ಸಂಸ್ಥೆಯಲ್ಲಿ ಎಲ್ಲ ರೀತಿಯ ಸದಸ್ಯರು, ಅತ್ಯಂತ ಗಣ್ಯರು ಹಾಗೂ ಸಾಧಕರು ಇರುತ್ತಾರೆ. ಅಂತಹ ಸದಸ್ಯರ ಜತೆಯಲ್ಲಿ ನಾವು ಸದಸ್ಯರಾಗಿ ಇರುವುದೇ ಉತ್ತಮ ಅವಕಾಶ. ರೋಟರಿ ಸಂಸ್ಥೆಯಲ್ಲಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವ ಸದಸ್ಯರಿಗೆ ಹೃದಯಪೂರ್ವಕ ಧನ್ಯವಾದಗಳು. ವಿಶ್ವದಲ್ಲೇ ಪಲ್ಸ್ ನಿರ್ಮೂಲನೆಯಲ್ಲಿ ರೋಟರಿ ಸಂಸ್ಥೆಯು ಪ್ರಮುಖವಾಗಿದೆ ಎಂದರು.

ರೋಟರಿ ಸಂಸ್ಥೆಯ ಸದಸ್ಯರು ತಮ್ಮ ತಮ್ಮ ದೇಣಿಗೆಯನ್ನು ನೀಡಿ ಸೇವೆ ಮಾಡುತ್ತಿರುವುದು ಶ್ಲಾಘನೀಯ ವಾಗಿದೆ. ಒಂದು ಸಂಸ್ಥೆಯಲ್ಲಿ ಹೊಸ ವಿಚಾರ, ಪರಸ್ಪರ ಒಡನಾಟ, ಸೇವಾ ಮನೋಭಾವ, ನಮ್ಮ ಶಕ್ತಿ ಸಾಮರ್ಥ್ಯದ ಅರಿವು ಹಾಗೂ ಕಲಿಯಲು ಅನೇಕ ಅವಕಾಶಗಳು ಸಾಕಷ್ಟಿವೆ. ನಾಯಕನಾಗಿ ಆಸಕ್ತಿ ತೊಡಗಿಸಿಕೊಂಡು ಸಮಾಜ ಸೇವೆ ಮಾಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್ ಚಂದ್ರ ಮಾತನಾಡಿ, ರೋಟರಿ ಸಂಸ್ಥೆಯು ಅನೇಕ ಸಮಾಜಮುಖಿ ಅಭಿವೃದ್ಧಿಗೆ ಕೆಲಸ ಮಾಡುತ್ತಿದ್ದು, ಸದಸ್ಯರ ಪ್ರಗತಿಗಾಗಿಯೂ ಕೂಡ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಎಲ್ಲಾ ಸದಸ್ಯರು ಸ್ನೇಹದಿಂದ ಮುನ್ನಡೆದರೆ ಸಮಾಜ ಸೇವೆಗೆ ಬಹಳ ಅನುಕೂಲವಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕಿಶೋರ್ ಕುಮಾರ್, ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್ ಕುಮಾರ್, ವಸಂತ ಹೋಬಳಿದಾರ್, ಮಂಜುನಾಥ್ ಕದಂ, ಡಾ. ಪರಮೇಶ್ವರ್ ಶಿಗ್ಗಾವ್, ಶ್ರೀಕಾಂತ್, ಮಹೇಶ್ ಎ ಓ, ವೀಣಾ ಕಿಶೋರ್, ರೋಟರಿ ಶಿವಮೊಗ್ಗ ಪೂರ್ವ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...