Saturday, May 16, 2026
Saturday, May 16, 2026

Advocate post ಜಿಲ್ಲೆಯಲ್ಲಿ ಸರ್ಕಾರಿ ಅಭಿಯೋಜಕ/ವಕೀಲರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಆಯ್ಕೆಗೆ ಅರ್ಜಿ ಆಹ್ವಾನ

Date:

Advocate post ಸರ್ಕಾರದ ಸೂಚನೆಯನ್ವಯ ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಸರ್ಕಾರಿ ಅಭಿಯೋಜಕರು-ವ-ಸರ್ಕಾರಿ ವಕೀಲರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

Advocate post ವಕೀಲ ವೃತ್ತಿಯನ್ನು ಪೂರೈಸಿದ ಅನುಭವ ಹೊಂದಿರುವ ಅರ್ಹ ನ್ಯಾಯವಾದಿಗಳು ವೈಯಕ್ತಿಕ ಮಾಹಿತಿಯೊಂದಿಗೆ ಅರ್ಜಿ ಸಿದ್ದಪಡಿಸಿ ದಿನಾಂಕ: 14-08-2023 ರ ಸಂಜೆ 5 ಗಂಟೆಯೊಳಗೆ ಸರ್ಕಾರಿ ಅಭಿಯೋಜಕರು, ಸರ್ಕಾರಿ ಅಭಿಯೋಜಕರ ಕಚೇರಿ, 4ನೇ ಮಹಡಿ, ಹೆಚ್ಚುವರಿ ನ್ಯಾಯಾಲಯಗಳ ಸಂಕೀರ್ಣ, ಬಾಲರಾಜ ಅರಸ್ ರಸ್ತೆ, ಶಿವಮೊಗ್ಗ ಈ ಕಚೇರಿಗೆ ಸಲ್ಲಿಸಬೇಕು.

ಅರ್ಜಿಯ ಜೊತೆ ಸ್ವಯಂ ದೃಢೀಕರಿಸಿದ ಎಸ್‍ಎಸ್‍ಎಲ್‍ಸಿ/ತತ್ಸಮಾನ ಅಂಕಪಟ್ಟಿ ಪ್ರತಿ, ಎಲ್‍ಎಲ್‍ಬಿ ಪದವಿಯ ಪ್ರತೀ ವರ್ಷದ/ಸೆಮಿಸ್ಟರ್‍ನ ಅಂಕಪಟ್ಟಿಗಳ ಪ್ರತಿಗಳು, ವಕೀಲರಾಗಿ ಕಾರ್ಯ ನಿರ್ವಹಿಸುತ್ತಿರುವ ವಕೀಲರಾಗಿ ನೋಂದಣಿ ಆದ ಬಾರ್ ಕೌನ್ಸಿಲ್‍ರವರು ನೀಡಿದ ಸನ್ನದಿನ ಪ್ರತಿ, ವಕೀಲರಾಗಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ವಕೀಲರ ಸಂಘದಿಂದ ಪಡೆದ ಪ್ರಮಾಣ ಪತ್ರದ ಪ್ರತಿ, ನ್ಯಾಯಾಲಯದ ಪೀಠಾಸೀನ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರದ ಪ್ರತಿ, ಮೀಸಲಾತಿಗೆಸಂಬಂಧಿಸಿದ ಜಾತಿ/ಪ್ರವರ್ಗಕ್ಕೆ ಸೇರಿದ ಬಗ್ಗೆ ಸಂಬಂಧಪಟ್ಟ ಪ್ರಾಧಿಕಾರವು ನೀಡಿದ ಜಾತಿ/ಆದಾಯ ಪ್ರಮಾಣ ಪತ್ರ ಇತರೆ ದಾಖಲಾತಿಗಳನ್ನು ಸಲ್ಲಿಸುವುದು.

ಹೆಚ್ಚಿನ ಮಾಹಿತಿಗೆ ದೂ.ಸಂ: 9448544214/7892311800 ನ್ನು ಸಂಪರ್ಕಿಸಬಹುದೆಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...