Monday, February 2, 2026
Monday, February 2, 2026

Rotary Club Shivamogga ಪ್ರತಿಭಾ ಪರೀಕ್ಷೆ: ಮಕ್ಕಳ ಕಲಿಕಾ ಸಾಮರ್ಥ್ಯ ವೃದ್ಧಿಸಲು ಸಹಕಾರಿ- ಶೇಷಾಷಲ

Date:

Rotary Club Shivamogga ಮಕ್ಕಳಿಗೆ ವಿದ್ಯಾಭ್ಯಾಸದ ಜತೆಯಲ್ಲಿ ಸಾಮಾನ್ಯ ಜ್ಞಾನದ ಅವಶ್ಯಕತೆ ಅತ್ಯಂತ ಮುಖ್ಯ ಆಗಿದ್ದು, ಸಾಧನೆಯ ಹಾದಿಯಲ್ಲಿ ಮುನ್ನಡೆಯಲು ನೆರವಾಗುತ್ತದೆ ಎಂದು ವಾಸವಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಶೇಷಾಚಲ ಹೇಳಿದರು.

ಶಿವಮೊಗ್ಗ ನಗರದ ವಾಸವಿ ವಿದ್ಯಾಲಯದಲ್ಲಿ ಜೆಸಿಐಯ ಸಹ್ಯಾದ್ರಿ ಸಂಸ್ಥೆ ಹಾಗೂ ಇಂಡಿಯಾ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ ಪ್ರತಿಭಾ ಪರೀಕ್ಷೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಕಲಿಕಾ ಸಾಮಾರ್ಥ್ಯ ವೃದ್ಧಿಸುವ ದೃಷ್ಠಿಯಲ್ಲಿ ಇಂತಹ ಪರೀಕ್ಷೆಗಳು ಸಹಕಾರಿ ಆಗುತ್ತವೆ ಎಂದು ತಿಳಿಸಿದರು.

ರೋಟರಿ ವಲಯ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಮಾತನಾಡಿ, ಮಕ್ಕಳ ಶಿಕ್ಷಣದ ಜತೆಯಲ್ಲಿ ರಾಷ್ಟ್ರಮಟ್ಟದ ಪರೀಕ್ಷೆಗಳು ಹೊಸ ವಿಚಾರಗಳ ಕಲಿಕೆಗೆ ನೆರವು ಆಗಲಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆಯಾಗಲಿದೆ. ಅವಕಾಶಗಳನ್ನು ವಿದ್ಯಾರ್ಥಿಗಳು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.

Rotary Club Shivamogga ಇದೇ ಸಂದರ್ಭದಲ್ಲಿ ಜೆಸಿಐ ಶಿವಮೊಗ್ಗ ಸಹ್ಯಾದ್ರಿಯ ಅಧ್ಯಕ್ಷೆ ಹಾಗೂ ತರಬೇತುದಾರರಾದ ಡಾ. ಸುಷ್ಮಾ ಹಿರೇಮಠ್ ಮಾತನಾಡಿ, ರಾಷ್ಟ್ರಮಟ್ಟದ ಪ್ರತಿಭಾನ್ವೇಷಣೆ ಕಾರ್ಯಕ್ರಮ ಇದಾಗಿದ್ದು, ಪರೀಕ್ಷೆಯಲ್ಲಿ ವಿಜೇತರಾದವರಿಗೆ 50 ಸಾವಿರ ರೂ. ನಗದು ಬಹುಮಾನ ಪ್ರಥಮ ಸ್ಥಾನ, 40 ಸಾವಿರ ರೂ. ನಗದು ಬಹುಮಾನ ದ್ವಿತೀಯ, 30 ಸಾವಿರ ರೂ. ನಗದು ಬಹುಮಾನ ತೃತೀಯ ಹಾಗೂ ಪ್ರಮಾಣ ಪತ್ರ ನೀಡಲಾಗುವುದು ಎಂದು ತಿಳಿಸಿದರು.

ದೆಹಲಿಯಿಂದ ಪ್ರಶ್ನೆ ಪತ್ರಿಕೆಗಳು ಬಂದಿದ್ದು, ರಾಷ್ಟçಮಟ್ಟದಲ್ಲಿ 500ಕ್ಕೂ ಹೆಚ್ಚು ಕೇಂದ್ರಗಳಲ್ಲಿ 1,33,642 ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ. ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಇಂತಹ ಸ್ಪರ್ಧೆ ಸಹಕಾರಿ ಆಗುತ್ತದೆ ಎಂದು ತಿಳಿಸಿದರು.

ಶಿವಮೊಗ್ಗ ನಗರದ ವಾಸವಿ ಶಾಲೆ, ರೋಟರಿ ಶಾಲೆ, ಸಹ್ಯಾದ್ರಿ ಪ್ರೌಢಶಾಲೆ, ಗಂಗೋತ್ರಿ ಪಿಯು ಕಾಲೇಜುಗಳಲ್ಲಿ ರಾಷ್ಟ್ರೀಯ ಮಟ್ಟದ ಪ್ರತಿಭಾ ಪರೀಕ್ಷೆ ನಡೆಸಲಾಯಿತು. ಜೆಸಿಐನ ಸುಷ್ಮಾ ಅರವಿಂದ್, ಸ್ವಪ್ನ ಬದರೀನಾಥ್, ವಿದ್ಯಾ, ಶ್ರೀಯಾ ಪರೀಕ್ಷಿತ್, ಸ್ಫೂರ್ತಿ, ಹರ್ಷ, ಜೆಸಿಐ ವಲಯ ಉಪಾಧ್ಯಕ್ಷ ಸತೀಶ ಚಂದ್ರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...