Saturday, September 28, 2024
Saturday, September 28, 2024

District Court ಪತ್ನಿ ಮತ್ತು ಪ್ರಿಯಕರನ ಕೊಲೆಗೈದ ಪತಿ ಹಾಗೂ ಸಹಚರರಿಗೆ ಶಿಕ್ಷೆ ವಿಧಿಸಿದ ಕೋರ್ಟ್

Date:

District Court ಹೆಂಡತಿ ಹಾಗೂ ಆಕೆಯ ಪ್ರೇಮಿಯನ್ನು ಕೊಲೆ ಮಾಡಿದ ಗಂಡ ಮತ್ತು ಆತನ ಗೆಳೆಯರಿಗೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಕಾರಾಗೃಹ ವಾಸ ಶಿಕ್ಷೆ ಮತ್ತು ತಲಾ ರೂ.1 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದೆ.

ಶಿವಮೊಗ್ಗ ನಗರದ ವೆಂಕಟೇಶ್ವರ ನಗರದ 5ನೇ ಕ್ರಾಸ್ ನಿವಾಸಿ ಕೃಷ್ಣಮೂರ್ತಿರವರ ಮಗ ಕಾರ್ತಿಕ್ ಕೆ ವಯಸ್ಸು 28 ವರ್ಷ ಇವರು ಶ್ರೀರಾಮನಗರದ ವಾಸಿ ಆರ್.ಪೊನ್ನುಸ್ವಾಮಿ ಇವರ ಸಾಕುಮಗಳು ರೇವತಿ, 21 ವರ್ಷ ಶಿವಮೊಗ್ಗ ಇವರನ್ನು ದಿನಾಂಕ: 04-09-2017 ರಂದು ಮದುವೆಯಾಗಿದ್ದರು.

ಪತ್ನಿ ರೇವತಿ ಕಾರ್ತಿಕನೊಂದಿಗೆ ಜಗಳ ಆಡಿಕೊಂಡು ಮನೆ ಬಿಟ್ಟು ಹೋಗಿದ್ದಳು. ತನ್ನ ಪತ್ನಿ ರೇವತಿಯು ತನ್ನ ಮನೆಯ ಎದುರು ಇರುವ ವಿಜಯ ಎಂಬುನನ್ನು ಪ್ರೀತಿಸುತ್ತಿದ್ದರಿಂದ ಮನೆ ಬಿಟ್ಟು ಹೋಗಿರುತ್ತಾಳೆಂದು ಆರೋಪಿ ಕಾರ್ತಿಕ ತನ್ನ ಗೆಳೆಯರಾದ 2ನೇ ಆರೋಪಿ ಭರತ್ ವಿ, 23 ವರ್ಷ, 3ನೇ ಆರೋಪಿ ಸತೀಶ್ 26 ವರ್ಷ ಮತ್ತು 4ನೇ ಆರೋಪಿ ಸಂದೀಪ 21 ವರ್ಷ ಇವರೊಂದಿಗೆ ಸೇರಿಕೊಂಡು ತನ್ನ ಪತ್ನಿ ಮತ್ತು ವಿಜಯನನ್ನು ವಡ್ಡಿನಕೊಪ್ಪಕ್ಕೆ ಕರೆಸಿಕೊಂಡು ಮಚ್ಚು, ಲಾಂಗು ಮತ್ತು ಕಲ್ಲಿನಿಂದ ಕೊಲೆ ಮಾಡಿರುತ್ತಾರೆ.

District Court ಈ ಬಗ್ಗೆ ಶಿವಮೊಗ್ಗ ತುಂಗಾ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖಾಧಿಕಾರಿ ಮಹಾಂತೇಶ್ ಬಿ ಹೊಳಿ, ಪೊಲೀಸ್ ಸರ್ಕಲ್ ಇನ್ಸ್‍ಪೆಕ್ಟರ್ ರವರು ತನಿಖೆ ಪೂರೈಸಿ ಆರೋಪಿಗಳಾದ ಕಾರ್ತಿಕ್, ಭರತ್, ಸತೀಶ್, ಸಂದೀಪ್ ಇವರುಗಳ ವಿರುದ್ದ ಭಾ.ದಂ.ಸಂಹಿತೆ ಕಲಂ 302, 120(ಬಿ)ಸಹವಾಚಕ 34 ರಡಿಯಲ್ಲಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಈ ಪ್ರಕರಣವು ಶಿವಮೊಗ್ಗದ ಮಾನ್ಯ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ದಾಖಲಾಗಿ ವಿಚಾರಣೆ ನಡೆದು, ಆರೋಪಗಳು ದೃಢಪಟ್ಟಿರುವುದರಿಂದ 3 ಆರೋಪಿತರಿಗೆ 1ನೇ ಮತ್ತು 3ನೇ ಅಪರ ಜಿಲ್ಲಾ ಮತ್ತು ನ್ಯಾಯಾಧೀಶರಾದ ಕೆ.ಎಸ್. ಮಾನು ರವರು ಜೀವಾವಧಿ ಕಾರಾಗೃಹ ವಾಸ ಶಿಕ್ಷೆ ಹಾಗೂ ತಲಾ ಒಂದು ಲಕ್ಷ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಈ ಪ್ರಕರಣದ 3ನೇ ಆರೋಪಿ ಸತೀಶ್ ಬಿನ್ ಗೋವಿಂದರಾಜ ತಲೆಮರೆಸಿಕೊಂಡಿರುವುದರಿಂದ ಈತನನ್ನು ಪ್ರಕರಣದಿಂದ ಪ್ರತ್ಯೇಕಿಸಿ, ಪ್ರತ್ಯೇಕ ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಿದ್ದು ಈತನ ಮೇಲಿನ ವಿಚಾರಣೆ ಬಾಕಿ ಇರುತ್ತದೆ.

ಸರ್ಕಾರಿ ಅಭಿಯೋಜಕರಾದ ಜೆ.ಶಾಂತರಾಜ್ ಸರ್ಕಾರದ ಪರವಾಗಿ ಸಾಕ್ಷಿಗಳ ವಿಚಾರಣೆ ಮಾಡಿ ವಾದವನ್ನು ಮಂಡಿಸಿದ್ದರೆಂದು ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shikaripura News ಅಹಿಂದ ಸಂಘಟನೆ ಕರೆ ನೀಡಿದ್ದ ಶಿಕಾರಿಪುರ ಬಂದ್ ಯಶಸ್ವಿ

Shikaripura News ನಾಡಿನ ಅಹಿಂದ ವರ್ಗಕ್ಕೆ ಸೇರಿದ ಜನರ ಹಿತ ಕಾಯುವ...

New Delhi News ಅಪಹರಣಕ್ಕೊಳಗಾಗಿದ್ದ ಬಾಲಕನೇ ಇಂದು ವಕೀಲನಾಗಿ ಅದೇ ಕಿಡ್ನಾಪರ್ಸ್ ಗೆ ಶಿಕ್ಷೆ ಕೊಡಿಸಿದ

New Delhi News ಈ ಹಿಂದೆ 7 ವರ್ಷದವನಾಗಿದ್ದಾಗ ಅಪಹರಣಕ್ಕೊಳಗಾಗಿದ್ದ ಬಾಲಕ...

Kasturi Rangan Comittee Report ಕಸ್ತೂರಿ ರಂಗನ್ ವರದಿ ತಿರಸ್ಕಾರ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

Kasturi Rangan Comittee Report ಜುಲೈನಲ್ಲಿ ಕೇಂದ್ರ ಸರ್ಕಾರ 6ನೇ ಕರಡು...

Hosanagara News ಇಸ್ಪೀಟ್ ಅಡ್ಡೆಗೆ ಪೊಲೀಸರ ದಾಳಿ – 11 ಜನರ ಬಂಧನ 17,640 ರೂಪಾಯಿ ವಶ

Hosanagara News ಹೊಸನಗರ ತಾಲ್ಲೂಕು ಮಾರುತೀಪುರ ಗ್ರಾಮ ಪಂಚಾಯಿತಿಯ ಹಳೆಬಾಣಿಗ ರಸ್ತೆಯ...