Wednesday, May 6, 2026
Wednesday, May 6, 2026

Rashtriya Lok Adalat ಸೆಪ್ಟೆಂಬರ್ 9 ರಂದು ಶಿವಮೊಗ್ಗ ಜಿಲ್ಲೆಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್

Date:

Rashtriya Lok Adalat ಕರ್ನಾಟಕ ರಾಜ್ಯ ಕಾನೂನು ಪ್ರಾಧಿಕಾರ, ಬೆಂಗಳೂರು ಇವರ ನಿರ್ದೇಶನದಲ್ಲಿ ಇಡೀ ರಾಜ್ಯಾದ್ಯಾಂತರ ದಿ: 09.09.2023 ರಂದು ರಾಷ್ಟ್ರೀಯ ಲೋಕ ಅದಾಲತ್‌ನ್ನು ನಡೆಸಲಾಗುತ್ತದೆ. ಶಿವಮೊಗ್ಗ ಜಿಲ್ಲಾದ್ಯಂತ ಎಲ್ಲಾ ತಾಲ್ಲೂಕುಗಳನ್ನು ಒಳಗೊಂಡ0ತೆ ಎಲ್ಲಾ ನ್ಯಾಯಾಲಯಗಳಲ್ಲೂ ಏಕ ಕಾಲದಲ್ಲಿ ರಾಷ್ಟ್ರೀಯ ಲೋಕ ಅದಾಲತ್‌ನ್ನು ಹಮ್ಮಿಕೊಳ್ಳಲಾಗಿದೆ.

ಈ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ವಿವಿಧ ಸಿವಿಲ್ ವ್ಯಾಜ್ಯಗಳು, ಬಗೆಹರಿಸಬಹುದಾದ ಕ್ರಿಮಿನಲ್, ಚೆಕ್ ಬೌನ್ಸ್, ಬ್ಯಾಂಕ್ ವಸೂಲಾತಿ, ಮೋಟಾರು ವಾಹನಗಳ, ಕೌಟುಂಬಿಕ, ಭೂ ಸ್ವಾಧೀನ, ಕಂದಾಯ, ಜನನ ಮತ್ತು ಮರಣ ನೊಂದಣಿ, ಜೀವನಾಂಶ ಪ್ರಕರಣಗಳು ಹಾಗೂ ಇನ್ನಿತರೆ ಲಘು ಕ್ರಿಮಿನಲ್ ಪ್ರಕರಣಗಳಿಗೆ ಸಂಬ0ಧಿಸಿದ0ತೆ ಮತ್ತು ವ್ಯಾಜ್ಯ ಪೂರ್ವ ಬ್ಯಾಂಕು ಸಾಲ ಮರುಪಾವತಿಯ ಪ್ರಕರಣಗಳನ್ನು ಇತ್ಯಾರ್ಥ ಪಡಿಸಿಕೊಳ್ಳಲು ಅವಕಾಶ ಇದ್ದು, ಸಂಬ0ಧಪಟ್ಟ ಕಕ್ಷಿದಾರರು ವಕೀಲರ ಮೂಲಕ ಅಥವಾ ಖುದ್ದಾಗಿ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯಾರ್ಥ ಪಡಿಸಿಕೊಳ್ಳಬಹುದಾಗಿದೆ. ಇದರ ಸದುಪಯೋಗ ಕಕ್ಷಿಗಾರರು ಪಡೆಯ ಬಹುದಾಗಿದೆ.

ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ನಲ್ಲಿ ದಿ:11-2-2023ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯಿಸುವಂತೆ ಸಂಚಾರಿ ಇ -ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯತಿ ನೀಡಿ ಸರ್ಕಾರವು ಆದೇಶ ಹೊರಡಿಸಿರುತ್ತದೆ. ಈ ರೀತಿಯು ದಿ:09-09-2023ರವರೆಗೆ ಇತ್ಯಾರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗಲಿದೆ.

Rashtriya Lok Adalat ರಾಜೀ ಪ್ರಕ್ರಿಯೆಯಿಂದ ಸಮಯ ಮತ್ತು ಹಣವನ್ನು ಉಳಿಸಬಹುದಾಗಿದೆ. ಹಾಗೂ ಉಭಯ ಪಕ್ಷಗಾರರ ನಡುವಿನ ಬಾಂಧವ್ಯವು ವೃದ್ಧಿಸುವುದು. ಆದುದರಿಂದ ಕಕ್ಷಿಗಾರರು ಲೋಕ ಅದಾಲತ್‌ನಲ್ಲಿ ಪಾಲ್ಗೊಳುವ ಅನುಕೂಲವನ್ನು ಪಡೆಯುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಸಿ.ಎನ್. ಚಂದನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

K. R. Periyakaruppan ಒಂದೇ ಒಂದು ಮತದ ಅಂತರದಲ್ಲಿ ಸೋತ (ಮಂತ್ರಿ) ಡಿಎಂಕೆ ಅಭ್ಯರ್ಥಿ ಪೆರಿಯಾಕರುಪ್ಪನ್.

ಒಂದು ಮತ ತಾನೆ. ಎಂಬ ನಿರ್ಲಕ್ಷ್ಯ ಬಹಳ ಅಭ್ಯರ್ಥಿಗಳಲ್ಲಿದೆ. ಆದರೆ ಆ...

Ballari News ಪಾರಾಗುವ ಬಗೆ ಹೇಗೆ?. ಬಳ್ಳಾರಿ ಜಿಲ್ಲಾ ವೈದ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ನೀಡಿರುವ ಮಾಹಿತಿ ಎಲ್ಲರಿಗೂ ಅನ್ವಯ

Ballari News ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ...

S.N. Channabasappa ಪಶುವೈದ್ಯಕೀಯ ಮತ್ತು‌ ಮೀನುಗಾರಿಕೆ ವಿಜ್ಞಾನ ವಿವಿಗಳ ನೌಕರರಿಗೆ ನೀಡುತ್ತಿರುವ ಎನ್ ಪಿ ಎ ಕಡಿತ: ಶಾಸಕ ಚೆನ್ನಿ ಅವರಿಂದ ಖಂಡನೆ

S.N. Channabasappa "ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ...

Summer ಬೇಸಿಗೆಯ ಬಿರುಬಿಸಿಲು!. ಜಾನುವಾರು ರಕ್ಷಣೆಗೆ ಪಶುವೈದ್ಯಕೀಯ ಕಾಲೇಜಿನ ತಜ್ಞರ ಮಾರ್ಗದರ್ಶನ – ಮಾಹಿತಿ ಇಲ್ಲಿದೆ.

Summer ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಮೇ ತಿಂಗಳಲ್ಲಿ ಬಿಸಿಲ ಧಗೆ ಹೆಚ್ಚಾಗುವ...