Assembly election ನಾವು ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಗರಣಗಳನ್ನು ತನಿಖೆ ಮಾಡಿಸುವ ಭರವಸೆ ನೀಡಿದ್ದೆವು. ನಾಡಿನ ಮತದಾರರು ನಮ್ಮ ಮಾತಿನ ಮೇಲೆ ನಂಬಿಕೆಯಿಟ್ಟು ಬಿಜೆಪಿಯ ಭ್ರಷ್ಟಾಚಾರ, ಕಮಿಷನ್ ಹಾವಳಿ, ತೆರಿಗೆ ಲೂಟಿಯ ವಿರುದ್ಧ ಮತ ಚಲಾಯಿಸಿ 135 ಸ್ಥಾನಗಳಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ ಸುಭದ್ರ, ಸುಸ್ಥಿರ ಸರ್ಕಾರ ರಚನೆಗೆ ಅವಕಾಶ ನೀಡಿದ್ದಾರೆ. ಈಗ ಜನರಿಗೆ ನೀಡಿದ್ದ ವಚನ ಪಾಲನೆ ನಮ್ಮ ಕರ್ತವ್ಯವಾಗಿದ್ದು ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು ತನಿಖೆಗೆ ಒಪ್ಪಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಟ್ವೀಟ್ ಖಾತೆಯಲ್ಲಿ ಹೇಳಿಕೆ ನೀಡಿದ್ದಾರೆ.
Assembly election ಬಿಜೆಪಿ ಆಡಳಿತದ ಅವಧಿಯ ಶೇ40 ಭ್ರಷ್ಟಾಚಾರ ಹಗರಣ ತನಿಖೆ- ಸಿದ್ಧರಾಮಯ್ಯ
Date: