Thursday, September 17, 2026
Thursday, September 17, 2026

DVS Committee Shivamogga ಲಕ್ಷಾಂತರ ಜನರ ತ್ಯಾಗ ಬಲಿದಾನದ ಫಲವೇ ನಮಗೆ ಸ್ವಾತಂತ್ರ್ಯ- ಸಿ.ಮಂಜುನಾಥ್

Date:

DVS Committee Shivamogga ಭಾರತ ದೇಶಕ್ಕೆ ಸ್ವಾತಂತ್ರ‍್ಯ ಸಿಗುವಲ್ಲಿ ಅಸಂಖ್ಯಾತ ರಾಷ್ಟ್ರ ಭಕ್ತರ ಕೊಡುಗೆ ಅಪಾರ ಇದ್ದು, ಲಕ್ಷಾಂತರ ದೇಶಭಕ್ತರ ತ್ಯಾಗ ಬಲಿದಾನದಿಂದ ಭಾರತ ದೇಶ ಸ್ವಾತಂತ್ರ‍್ಯವಾಯಿತು ಎಂದು ಹಿರಿಯ ಉಪನ್ಯಾಸಕ ಸಿ.ಮಂಜುನಾಥ್ ಹೇಳಿದರು.

ದೇಶಿಯ ವಿದ್ಯಾಶಾಲಾ ಸಮಿತಿ ವತಿಯಿಂದ ಸಂಸ್ಥೆಯ ಆವರಣದಲ್ಲಿ ಆಯೋಜಿಸಿದ್ದ ೭೭ನೇ ಸ್ವಾತಂತ್ರ‍್ಯ ಮಹೋತ್ಸವ ಸಂಭ್ರಮಾಚರಣೆ ಕರ‍್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಮಹಾತ್ಮ ಗಾಂಧೀಜಿ ಸೇರಿದಂತೆ ಸಾವಿರಾರು ಸ್ವಾತಂತ್ರ‍್ಯ ಹೋರಾಟದಲ್ಲಿ ಭಾಗಿಯಾದ ನಾಯಕರು ತಮ್ಮದೇ ಆದ ಮರ‍್ಗಗಳಲ್ಲಿ ಹೋರಾಟ ನಡೆಸಿದರು. ಎಲ್ಲರ ಹೋರಾಟದಿಂದ ದೇಶಕ್ಕೆ ಸ್ವಾತಂತ್ರ‍್ಯ ಲಭಿಸಿತು ಎಂದು ತಿಳಿಸಿದರು.

77ನೇ ಸ್ವಾತಂತ್ರ‍್ಯ ಮಹೋತ್ಸವ ಸಂಭ್ರಮಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿದ ದೇಶಿಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ, ದೇಶದ ಸ್ವಾತಂತ್ರ‍್ಯಯಕ್ಕಾಗಿ ಜೀವನ ಸರ‍್ಪಿಸಿದ ಹೋರಾಟಗಾರರ ಕೊಡುಗೆ ಸ್ಮರಿಸುವುದು ನಮ್ಮೆಲ್ಲರ ರ‍್ತವ್ಯ. ಪ್ರತಿಯೊಬ್ಬರು ಸಧೃಢ ಭಾರತ ನರ‍್ಮಾಣದಲ್ಲಿ ಕೈಜೋಡಿಸಬೇಕು. ದೇಶವನ್ನು ರಕ್ಷಣೆ ಮಾಡುತ್ತಿರುವ ಸೈನಿಕರಿಗೆ ಪ್ರತಿಯೊಬ್ಬರೂ ಗೌರವ ಸಲ್ಲಿಸಬೇಕು ಎಂದು ಸಂದೇಶ ತಿಳಿಸಿದರು.

DVS Committee Shivamogga ದೇಶಕ್ಕಾಗಿ ಸೇನೆಯಲ್ಲಿ ರ‍್ತವ್ಯ ನರ‍್ವಹಿಸಿದ ರಮೇಶ್ ಎನ್. ಹಾಗೂ ಬಸವರಾಜ ನಾಯ್ಕ ಎಲ್. ಅವರನ್ನು ಗೌರವಿಸಲಾಯಿತು. ವಿದ್ಯರ‍್ಥಿಗಳು ಸ್ವಾತಂತ್ರ‍್ಯ ಹೋರಾಟಗಾರರ ವೇಷಭೂಷಣ ಧರಿಸಿದ್ದರು.

ಸಭಾ ಕಾರ‍್ಯಕ್ರಮದ ನಂತರ ದೇಶಭಕ್ತಿ ಗೀತೆಗಳ ಗಾಯನ ಹಾಗೂ ನೃತ್ಯ ಕರ‍್ಯಕ್ರಮ ನಡೆಯಿತು.
ಡಿವಿಎಸ್ ಮಾಜಿ ಅಧ್ಯಕ್ಷ ಕೆ.ಬಸಪ್ಪಗೌಡ, ದೇಶಿಯ ವಿದ್ಯಾಶಾಲಾ ಸಮಿತಿ ಕರ‍್ಯರ‍್ಶಿ ಎಸ್.ರಾಜಶೇಖರ್, ಸಹ ಕರ‍್ಯರ‍್ಶಿ ಡಾ. ಎ.ಸತೀಶ್ ಕುಮಾರ್ ಶೆಟ್ಟಿ, ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚರ‍್ಯ ಡಾ. ಎಂ.ವೆಂಕಟೇಶ್, ಎ.ಇ.ರಾಜಶೇಖರ್, ಆರ್.ಲಕ್ಷ್ಮೀದೇವಿ, ಹರೀಶ್, ಎನ್‌ಎಸ್‌ಎಸ್, ರೇಂಜರ‍್ಸ್, ರೋವರ‍್ಸ್ ಘಟಕದ ಪ್ರತಿನಿಧಿಗಳು, ಬೋಧಕ ಸಿಬ್ಬಂದಿ, ಬೋಧಕೇತರ ಸಿಬ್ಬಂದಿ, ವಿದ್ಯರ‍್ಥಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...