Sunday, May 17, 2026
Sunday, May 17, 2026

ಸಾವಯವ ಸಿರಿಧಾನ್ಯ ಮೇಳ

Date:

ಅಧಿಕಾರಿಗಳಲ್ಲಿಯೂ ಕೃಷಿ ಬಗ್ಗೆ ಆಸಕ್ತಿ ರೈತೋಪಯೋಗಿ ಭಾವನೆಯಿರುವುದು ಹೆಮ್ಮೆಯ ವಿಷಯವೆಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಶ್ಲಾಘಿಸಿದ್ದಾರೆ. ಬೆಂಗಳೂರಿನಲ್ಲಿ ಕೆಎಎಸ್ ಅಧಿಕಾರಿಗಳ ಸಂಘದಿಂದ ಕೃಷಿ ಇಲಾಖೆ,ಕೃಷಿಕ ಸಮಾಜದ ಸಹಯೋಗದಲ್ಲಿ “ಸಾವಯವ ಮತ್ತು ಸಿರಿಧಾನ್ಯ” ಮೇಳವನ್ನು ಉದ್ಘಾಟಿಸಿ ಮಾತನಾಡಿದರು.

ಬಹುತೇಕ ಕೆಎಎಸ್ ಅಧಿಕಾರಿಗಳೆಲ್ಲ ನಮ್ಮ ಮಣ್ಣಿನ ಮಕ್ಕಳೇ.ಅಧಿಕಾರಿಗಳಲ್ಲಿಯೂ ಕೃಷಿ ಅದರಲ್ಲಿಯೂ ಸಿರಿಧಾನ್ಯ ಸಾವಯವ ಬಗ್ಗೆ ಆಸಕ್ತಿ ಬಂದಿರುವುದು ಸಂತಸದ ವಿಚಾರ‌.ಸಿರಿಧಾನ್ಯದ ಸಿರಿತನ ಹೆಚ್ಚುತ್ತಿದೆ.ಸಿರಿಧಾನ್ಯ ಬಳಕೆ ಆರೋಗ್ಯಕ್ಕೆ ಆಹಾರದ ಸಿದ್ಧ ಔಷಧಿಯಾಗಿದೆ.ಸಾವಯವ ಬಿಟ್ಟು ಹೆಚ್ಚು ರಾಸಾಯನಿಕ ವಸ್ತು ಬಳಕೆಯಿಂದ ರೈತರು ಹೆಚ್ಚು ಆರೋಗ್ಯಕ್ಕೆ ಖರ್ಚು ಮಾಡುವಂತಹ ಸ್ಥಿತಿ ಉದ್ಭವಿಸಿದೆ.ಸಾವಯವ ಕೃಷಿ ಮತ್ತು ನೈಸರ್ಗಿಕ ಕೃಷಿಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಮಹತ್ವ ಸಿಗುತ್ತಿದ್ದು,ಸರ್ಕಾರ ಕೂಡ ಈ ಜನರ ಆರೋಗ್ಯದ ಹಿತದೃಷ್ಟಿಯಿಂದ ಬಹುಪಯೋಗಿ ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದರು.
ಕೃಷಿ ಖುಷಿಯಾಗಬೇಕು.ಈ ನಿಟ್ಟಿನಲ್ಲಿ ಎಲ್ಲರೂ ಮುಂದಾಗಬೇಕೆಂದರು.

ಮೇಳದಲ್ಲಿ ಕೃಷಿ ತೋಟಗಾರಿಕಾ ವಿಶ್ವವಿದ್ಯಾಲಯಗಳಿಂದ ವಿದ್ಯಾರ್ಥಿನಿಗಳು ಪ್ರದರ್ಶನಕ್ಕಿಟ್ಟ ಸಾವಯವ ಕೋಕಮ್ ಸೇರಿದಂತೆ ಮತ್ತಿತ್ತರ ಸಿರಿಧಾನ್ಯದ ಖಾದ್ಯಗಳ ಸ್ವಾದಿಸಿ ಪ್ರೋತ್ಸಾಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...