Friday, March 20, 2026
Friday, March 20, 2026

Uttaradi Mutt ಸದ್ಗುಣಗಳ ಸಂಪತ್ತು ನಮ್ಮನ್ನು ಮೋಕ್ಷದವರೆಗೂ ಕೊಂಡೊಯ್ಯಬಲ್ಲವು- ಶ್ರೀಸತ್ಯಾತ್ಮ ತೀರ್ಥರು

Date:

Uttaradi Mutt ಮನುಷ್ಯನಿಗೆ ಎಲ್ಲ ಸದ್ಗುಣಗಳೂ ಸಂಪತ್ತು ಇದ್ದಂತೆ ಎಂದು ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರು ಹೇಳಿದರು.

ತಮ್ಮ 28ನೇ ಚಾತುರ್ಮಾಸ್ಯದ ಅಂಗವಾಗಿ ನಡೆದ ವಿದ್ವತ್ ಸಭೆಯಲ್ಲಿ ಶ್ರೀಪಾದಂಗಳವರು ಶ್ರೀ ಸತ್ಯಧರ್ಮರ ಭಾಗವತ ದಶಮ ಸ್ಕಂದ ವ್ಯಾಖ್ಯಾನಾಧಾರಿತ ಅನುಗ್ರಹ ಸಂದೇಶ ನೀಡಿದರು.

ಲೌಖಿಕವಾಗಿ ಯೋಚಿಸಿದರೆ ಸಂಪತ್ತು ಎಂದರೆ ಕೇವಲ ಹಣ ಮಾತ್ರ. ಅದು ಕೂಡ ಸಂಪತ್ತೇ ಮತ್ತು ಬದುಕಿಗೆ ಅವಶ್ಯಕ. ಆದರೆ ಜ್ಞಾನ, ಭಕ್ತಿ, ವೈರಾಗ್ಯ, ಶಮದಮಾದಿಗಳೂ ಕೂಡ ಅತ್ಯಂತ ಪ್ರಮುಖವಾದ ಸದ್ಗುಣಗಳ ಸಂಪತ್ತು. ಈ ಸಂಪತ್ತುಗಳು ನಮ್ಮನ್ನು ಮೋಕ್ಷದವರೆಗೆ ಕೊಂಡೊಯ್ಯಬಲ್ಲವು ಎಂದರು.

ಪ್ರವಚನ ನೀಡಿದ ಸೌರಭ ವಿದ್ಯಾಲಯದ ಪ್ರಾಚಾರ್ಯರಾದ ಪಂಡಿತ ಪ್ರಮೋದಾಚಾರ್ಯ ಪೂಜಾರ್, ಭಾಗವತ ನವಮ ಸ್ಕಂದ ನವವಿಧ ಭಕುತಿಯ ತಿಳಿಸುವ ಮತ್ತು ನವವಿಧ ದ್ವೇಷವ ಹೇಗೆ ಬಿಡಬೇಕೆಂದು ತಿಳಿಸುವ ಸ್ಕಂದ. ಇಲ್ಲಿ ನಾವು ದೇವರಿಗಿಂತ ರಾಜರ ಮತ್ತು ಋಷಿಗಳ ಬಗ್ಗೆ ಹೆಚ್ಚಾಗಿ ತಿಳಿಸುವ ಸ್ಕಂದ. ಕಾರಣ ಅವರು ಪುಣ್ಯದ ಕೀರ್ತಿಯನ್ನು ಪಡೆದವರು. ದೇವರ ಬಗ್ಗೆ ಅಪಾರ ಭಕ್ತಿಯನ್ನು ಹೊಂದಿದವರು ಎಂದರು.

Uttaradi Mutt ಒಬ್ಬೊಬ್ಬ ರಾಜರ ಕಥೆಯೂ ಅದ್ಭುತವಾಗಿದೆ. ನಮಗೆ ದೇವರ ಮೇಲೆ ಭಕ್ತಿ ಬರಬೇಕೆಂದರೆ ದೇವರ ಭಕ್ತರಾದ ರಾಜರಾದ ನಭ, ನರಿಶ್ಯಂತ, ದಿಷ್ಟ, ಮರುತ್ ಮೊದಲಾದವರ ಕಥೆಯನ್ನು ಕೇಳಬೇಕು ಎಂದರು.

ಪಂಡಿತ ಸುರೇಶಾಚಾರ್ಯ ರಾಯಚೂರು ಪ್ರಚವನ ನೀಡಿದರು. ಚಾತುರ್ಮಾಸ್ಯ ಸಮಿತಿಯ ಅಧ್ಯಕ್ಷ ನವರತ್ನ ಸುಬ್ಬಣ್ಣಾಚಾರ್ಯ, ಪಂಡಿತರಾದ ನವರತ್ನ ಶ್ರೀನಿವಾಚಾರ್ಯ, ನವರತ್ನ ಪುರುಷೋತ್ತಮಾಚಾರ್ಯ, ರಘೂತ್ತಮಾಚಾರ್ಯ ಸಂಡೂರು, ವಾದಿರಾಜ ಅಗ್ನಿಹೋತ್ರಿ, ಮಧುಸೂಧನ ನಾಡಿಗ್, ಸಿ.ಪಿ. ವಾದಿರಾಜ, ಗುರುರಾಜ ಕಟ್ಟಿಘಿ, ರಾಮಧ್ಯಾನಿ ಅನಿಲ್ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...