Tuesday, February 3, 2026
Tuesday, February 3, 2026

Physical Education Teachers Association Shivamogga ಯೋಗದಿಂದ ಆರೋಗ್ಯವೃದ್ಧಿ ಚದುರಂಗದಿಂದ ಏಕಾಗ್ರತೆ ವೃದ್ದಿ- ರಾ.ಹ.ತಿಮ್ಮೇನಹಳ್ಳಿ

Date:

Physical Education Teachers Association Shivamogga ಯೋಗ ಮತ್ತು ಚೆಸ್ ಒಂದೇ ದಿನದ ಎರಡು ಮುಖಗಳಿದ್ದಂತೆ, ಯೋಗದಿಂದ ಆರೋಗ್ಯ ವೃದ್ಧಿ ಆದರೆ, ಚದುರಂಗದಿಂದ ಬುದ್ಧಿ ಮತ್ತು ಏಕಾಗ್ರತೆ ಹೆಚ್ಚಾಗುತ್ತದೆ ಎಂದು ಅನುದಾನ ರಹಿತ ಶಾಲಾ ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷರಾದ ರಾ. ಹ. ತಿಮ್ಮೇನಹಳ್ಳಿ ಅಭಿಪ್ರಾಯಪಟ್ಟರು.

ಅವರು ಶಾಲಾ ಶಿಕ್ಷಣ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಶಿವಮೊಗ್ಗ ಹಾಗೂ ಅನುದಾನ ರಹಿತ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಗಾಡಿ ಕೊಪ್ಪದ ಸಾನ್ ತೋಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾಗಿದ್ದ ಅನುದಾನ ರಹಿತ ಹಿರಿಯ ಪ್ರಾಥಮಿಕ ಶಾಲೆಗಳ ಎ, ಬಿ ಮತ್ತು ಸಿ ವಲಯಗಳ ವಲಯ ಮಟ್ಟದ ಯೋಗ ಮತ್ತು ಚೆಸ್ ಪಂದಾವಳಿಗೆ ಚಾಲನೆ ನೀಡಿ ಮಾತನಾಡುತ್ತಾ, ಕ್ರೀಡೆಯಿಂದ ಶಿಸ್ತು ಸಂಯಮ ಬೆಳೆಯುವುದು, ಸೋಲು ಗೆಲುವು ಮುಖ್ಯವಲ್ಲ ಕ್ರೀಡಾ ಮನೋಭಾವದಿಂದ ಭಾಗವಹಿಸುವುದು ಮುಖ್ಯ. ಇಲ್ಲಿ ಭಾಗವಹಿಸಿದ ಮಕ್ಕಳು ಜಿಲ್ಲೆ, ರಾಜ್ಯ,ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸಿ ದೇಶಕ್ಕೆ ಕೀರ್ತಿ ತರಲೆಂದು ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

Physical Education Teachers Association Shivamogga ಇದೇ ಸಂದರ್ಭದಲ್ಲಿ ಚೆಸ್ ತೀರ್ಪುಗಾರರಾಗಿ ಆಗಮಿಸಿದ್ದ ,ರಾಷ್ಟ್ರೀಯ ತಿರುಪುಗಾರರಾದ ವಿಲ್ಸನ್ ಮಾತನಾಡುತ್ತಾ ಚದುರಂಗದಲ್ಲಿ ಶಿವಮೊಗ್ಗ ರಾಷ್ಟ್ರ ಮತ್ತು ಅಂತರಾಷ್ಟ್ರಮಟ್ಟದಲ್ಲಿ ಅನೇಕ ಕ್ರೀಡಾಪಟುಗಳನ್ನು ಕ್ಷೇತ್ರಕ್ಕೆ ನೀಡಿದೆ ಎಂದು ಸ್ಮರಿಸಿಕೊಂಡರು.

ಯೋಗಾಸನ ತೀರ್ಪುಗಾರರಾದ ಶ್ರೀಮತಿ ಸುನಿತಾ ಯೋಗಾಸನದ ನಿಯಮಗಳು ಮತ್ತು ಅದರಿಂದ ಆಗುವ ಪ್ರಯೋಜನಗಳ ಬಗ್ಗೆ ಮಾತನಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...