Friday, April 3, 2026
Friday, April 3, 2026

Job Vacancy ಜಿಲ್ಲೆಯಲ್ಲಿ ಪುರುಷ ಮತ್ತು ಮಹಿಳಾ ಗೃಹರಕ್ಷಕ ದಳದ ಖಾಲಿ ಹುದ್ದೆಗಳಿಗೆ ನೇಮಕಾತಿ ಅರ್ಜಿ ಆಹ್ವಾನ

Date:

Job Vacancy ಸರ್ಕಾರದ ಸ್ವತಂತ್ರವಾದ ಶಿಸ್ತುಬದ್ದ ಹಾಗೂ ಸಮವಸ್ತ್ರದಾರಿ ಸ್ವಯಂಸೇವಕರನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆಯಾದ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಖಾಲಿ ಸ್ಥಾನಗಳನ್ನು ತುಂಬಲು ಅರ್ಜಿ ಆಹ್ವಾನಿಸಲಾಗಿದೆ.

ಪುರುಷ ಒಟ್ಟು 115 ಮತ್ತು ಮಹಿಳೆ 07 ಸ್ಥಾನಗಳಿಗೆ ಅರ್ಜಿಗಳನ್ನು ದಿ: 25-08-2023 ರಿಂದ 10-09-2023 ರೊಳಗೆ ಸಲ್ಲಿಸಬಹುದು. ಅರ್ಜಿಗಳು ಸಮಾದೇಷ್ಟರ ಕಾರ್ಯಾಲಯ, ಗೃಹರಕ್ಷಕ ದಳ, ಶಾಂತ ಮ್ಯಾನ್ಶನ್, ಎರಡನೇ ಮಹಡಿ, ಗಾಂಧಿನಗರ ಮುಖ್ಯ ರಸ್ತೆ, ಶಿವಮೊಗ್ಗ ಹಾಗೂ ಕೆಳಗೆ ತಿಳಿಸಲಾದ ಗೃಹರಕ್ಷಕ ದಳ ಘಟಕ/ಉಪ ಘಟಕಗಳ ಕಚೇರಿಗಳಲ್ಲಿ ದೊರೆಯಲಿದೆ.

ಶಿವಮೊಗ್ಗದಲ್ಲಿ ಪುರುಷ 29, ಮಹಿಳೆ 05 ಸಂಪರ್ಕಿಸಬೇಕಾದ ಘಟಕಾಧಿಕಾರಿ ಜಿ.ಇ.ಶಿವಾನಂದಪ್ಪ ಮೊ.ಸಂ: 9880705966. ಹಾರನಹಳ್ಳಿ ಪುರುಷ 07 ಘಟಕಾಧಿಕಾರಿ ಸಿ.ಮಧು 9686631428. ಭದ್ರಾವತಿ ಪುರುಷ 14, ಮಹಿಳೆ 02 ಘಟಕಾಧಿಕಾರಿ ಜಗದೀಶ್ 9900283490. ಹೊಳೆಹೊನ್ನೂರು ಪುರುಷ 07 ಘಟಕಾಧಿಕಾರಿ ಹೆಚ್.ಎಸ್.ಸುನೀಲ್ ಕುಮಾರ್ 8105840345. ತೀರ್ಥಹಳ್ಳಿ ಪುರುಷ 10, ಘಟಕಾಧಿಕಾರಿ ಹೆಚ್.ಪಿ.ರಾಘವೇಂದ್ರ 9535388472. ಸಾಗರ ಪುರುಷ 03 ಘಟಕಾಧಿಕಾರಿ ಎಂ.ರಾಘವೇಂದ್ರ 9632614031. ಜೋಗ ಪುರುಷ 04 ಘಟಕಾಧಿಕಾರಿ ಡಿ.ಸಿದ್ದರಾಜು 9449699459. ಆನಂದಪುರ ಪುರುಷ 07 ಘಟಕಾಧಿಕಾರಿ ಎಂ.ರಾಘವೇಂದ್ರ 9632614031. ಶಿಕಾರಿಪುರ ಪುರುಷ 04 ಡಾ.ಸಂತೋಷ್ ಎಸ್ ಶೆಟ್ಟಿ 9845402789. ಶಿರಾಳಕೊಪ್ಪ ಪುರುಷ 05 ಘಟಕಾಧಿಕಾರಿ ಸೈಯದ್ ಇಸಾಕ್ 8861492078. ಹೊಸನಗರ ಪುರುಷ 10 ಘಟಕಾಧಿಕಾರಿ ಕೆ.ಅಶೋಕ್ 9241434669. ರಿಪ್ಪನ್‍ಪೇಟೆ ಪುರುಷ 03 ಘಟಕಾಧಿಕಾರಿ ಟಿ.ಶಶಿಧರಾಚಾರ್ಯ 9741477689. ಸೊರಬ ಪುರುಷ 08 ಘಟಕಾಧಿಕಾರಿ ಬಿ.ರೇವಣಪ್ಪ 9945066084.

Job Vacancy ಗೃಹರಕ್ಷಕರಾಗಲು ಭಾರತೀಯ ಪ್ರಜೆಯಾಗಿರಬೇಕು. 19 ವರ್ಷ ಮೇಲ್ಪಟ್ಟು 45 ಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು. 10ನೇ ತರಗತಿ ಉತ್ತೀರ್ಣರಾಗಿರಬೇಕು. ವೈದ್ಯಕೀಯವಾಗಿ ಸಶಕ್ತರಾಗಿರಬೇಕು. ಪೊಲೀಸ್ ಠಾಣೆಯಲ್ಲಿ ಯಾವುದೇ ಕ್ರಿಮಿನಲ್ ಮೊಕದ್ದಮೆ/ಆರೋಪ ಅಥವಾ ಅಪರಾಧಿ ಎಂದು ನಿರ್ಣಯಿಸಲಾಗಿರದಿದ್ದಲ್ಲಿ/ದಾಖಲಾಗಿರದಿದ್ದಲ್ಲಿ ಅಂತಹವರು ಹಾಗೂ ಘಟಕ ಇರುವ ಸ್ಥಳದಿಂದ ಸುಮಾರು 8 ರಿಮದ 12 ಕಿ.ಮೀ ಅಂತರದಲ್ಲಿರುವವರು ಅರ್ಜಿಗಳನ್ನು ಸಲ್ಲಿಸಬಹುದು ಎಂದು ಗೃಹರಕ್ಷಕದಳಜಿಲ್ಲಾ ಗೌರವ ಸಮಾದೇಷ್ಟರಾದ ಚಂದನ್ ಪಟೇಲ್ ಎಂ ಪಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಶ್ರೀಬಿಷ್ಟಪ್ಪಯ್ಯನವರು

ಲೇ: ಪ್ರಸಾದ್ ಶ್ರೀವತ್ಸ. Klive Special Article ಭಾರತವೆಂದರೆ ಅದು ಕೇವಲ ದೇಶವಲ್ಲ ಅದೆಷ್ಟೋ...

B.Y. Vijayendra ದಾವಣಗೆರೆ ಚುನಾವಣೆ: ಬಿಜೆಪಿ ಅಭ್ಯರ್ಥಿಗೇ ಗೆಲುವು- ಬಿ.ವೈ.ವಿಜಯೇಂದ್ರ.

B.Y. Vijayendra  ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾಧ್ಯಮ ಮಿತ್ರರೊಂದಿಗೆ...

Drinking water supply ಗಮನಿಸಿ!.ಏಪ್ರಿಲ್ 4 & 5 ರಂದುಶಿವಮೊಗ್ಗ ನಗರದಲ್ಲಿ ಹಲವೆಡೆ ನೀರು ಸರಬರಾಜು ವ್ಯತ್ಯಯ.

Drinking water supply ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಮಾಡುವ...

Hanuman Jayanti ಪಾರಂಪರಿಕ ಶ್ರದ್ದಾಭಕ್ತಿಗಳಿಂದ ದಾವಣಗೆರೆಯಲ್ಲಿ ಹನುಮ ಜಯಂತಿ

Hanuman Jayanti  ದಾವಣಗೆರೆ.ಏ.2. ನಗರದ ಜಯದೇವ ವೃತ್ತದಲ್ಲಿರುವ ಅಧ್ಯಾತ್ಮ ಮಂದಿರದಲ್ಲಿ ಶ್ರೀ...