Saturday, April 4, 2026
Saturday, April 4, 2026

National Film Award 69 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಕನ್ನಡದ ಪ್ರಾದೇಶಿಕ ಉತ್ತಮ ಚಿತ್ರ- ಚಾರ್ಲಿ777

Date:

National Film Award ಕೇಂದ್ರ ಸರಕಾರ ನೀಡುವ 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದೆ.

ಅತ್ಯುತ್ತಮ ಪ್ರಾದೇಶಿಕ ಚಿತ್ರಕ್ಕಾಗಿ ಮೀಸಲಿಟ್ಟ ರಾಷ್ಟ್ರೀಯ ಪ್ರಶಸ್ತಿಯು ಈ ಬಾರಿ ರಕ್ಷಿತ್ ಶೆಟ್ಟಿ ನಟನೆಯ, ಕಿರಣ್ ರಾಜ್ ನಿರ್ದೇಶನದ ಚಾರ್ಲಿ 777 ಚಿತ್ರಕ್ಕೆ ದೊರೆತಿದೆ.

ನಾನ್ ಫೀಚರ್ ಫಿಲ್ಮ್ ವಿಭಾಗದಲ್ಲಿ ಕನ್ನಡದ ಅನಿರುದ್ಧ ಜತ್ಕರ್ ನಿರ್ದೇಶನದ ಬಾಳೆ ಬಂಗಾರ ಪ್ರಶಸ್ತಿ ಪಡೆದಿದೆ. ಅತ್ಯುತ್ತಮ ಸಿನಿಮಾ ಪ್ರಶಸ್ತಿಯು ಪಾಲಾಗಿದೆ. ಉಳಿದಂತೆ ಪ್ರಶಸ್ತಿಗಳು ಘೋಷಣೆ ಆಗುತ್ತಿವೆ.

ಭಾರತದಲ್ಲಿ ತಯಾರಾಗುವ ಅಷ್ಟೂ ಸಿನಿಮಾಗಳೂ ಈ ಸ್ಪರ್ಧೆಗೆ ಸ್ಪರ್ಧಿಸಬಹುದಾಗಿದ್ದು, ಜೊತೆಗೆ ಪ್ರಾದೇಶಿಕ ಸಿನಿಮಾಗಳಿಗೂ ಪ್ರತ್ಯೇಕವಾಗಿ ಪ್ರಶಸ್ತಿಗಳು ಮೀಸಲಿವೆ.

ಕೋವಿಡ್ ಕಾರಣದಿಂದಾಗಿ 2021ರಲ್ಲಿ ರಿಲೀಸ್ ಆಗಿರುವ ಚಿತ್ರಗಳಿಗೆ ಪ್ರಶಸ್ತಿ ಘೋಷಣೆ ಆಗಿರಲಿಲ್ಲ. ಇದೀಗ ಆ ವರ್ಷ ರಿಲೀಸ್ ಆಗಿರುವ ಚಿತ್ರಗಳಿಗೆ ಮಾತ್ರ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

2022ನೇ ಸಾಲಿನ ಚಿತ್ರಗಳನ್ನು ಇನ್ನೂ ಆಹ್ವಾನಿಸಿಲ್ಲ. ಕೇಂದ್ರ ಸರಕಾರ ಇದೇ ಮೊದಲ ಬಾರಿಗೆ ತಡವಾಗಿ ಪ್ರಶಸ್ತಿ ಘೋಷಣೆ ಮಾಡುತ್ತಿದೆ.

National Film Award ಅಲ್ಲು ಅರ್ಜುನ್ ಅತ್ಯುತ್ತಮ ನಟ: ಆರ್.ಮಾಧವನ್ ನಿರ್ದೇಶಿಸಿರುವ ರಾಕೆಟ್ರಿ ದಿ ನಟಿಸಿ, ನಂಬಿ ಎಫೆಕ್ಟ್ ಅತ್ಯುತ್ತಮ ಫೀಚರ್ ಫಿಲ್ಮ ಪ್ರಶಸ್ತಿ ಪಡೆದಿದೆ.

‘ಪುಷ್ಪ’ ಚಿತ್ರದಲ್ಲಿನ ನಟನೆಗಾಗಿ ನಟ ಅಲ್ಲು ಅರ್ಜುನ್ ಅತ್ಯುತ್ತಮ ನಟ ಪ್ರಶಸ್ತಿ ಪಡೆದಿದ್ದಾರೆ. ‘ಗ೦ಗೂ ಬಾಯಿ ಕಾರಿ ಯಾ ವಾಡಿ ಚಿತ್ರದಲ್ಲಿನ ನಟನೆಗಾಗಿ ಆಲಿಯಾ ಭಟ್ ಹಾಗೂ ‘ಮಿಮಿ’ ಚಿತ್ರದಲ್ಲಿನ ನಟನೆಗಾಗಿ ಕೃತಿ ಸೆನನ್ ಅತ್ಯುತ್ತಮ ನಟಿ ಪ್ರಶಸ್ತಿ ಹಂಚಿಕೊಂಡಿದ್ದಾರೆ.

ವಿವೇಕ್ ರಂಜನ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ್ > ಫೈಲ್ಸ್’ ರಾಷ್ಟ್ರೀಯ ಭಾವೈಕ್ಯ ಸಾರುವ 1 ಅತ್ಯುತ್ತಮ ಸಿನಿಮಾ ಪ್ರಶಸ್ತಿ ಪಡೆದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನಗರದ ಜನತೆಗೆ ಕುಡಿಯುವ ನೀರಿನ ಸೌಲಭ್ಯದಲ್ಲಿ ಯಾವುದೇ ವ್ಯತ್ಯಯವಾಗಬಾರದು- ಎಸ್.ಎನ್.ಚನ್ನಬಸಪ್ಪ

S.N. Channabasappa ಕುಡಿಯುವ ನೀರಿನ ಪಂಪ್ ಹೌಸ್‌ಗೆ ಶಾಸಕ ಎಸ್.ಎನ್. ಚನ್ನಬಸಪ್ಪ...

Klive Special Article ಶ್ರೀಬಿಷ್ಟಪ್ಪಯ್ಯನವರು

ಲೇ: ಪ್ರಸಾದ್ ಶ್ರೀವತ್ಸ. Klive Special Article ಭಾರತವೆಂದರೆ ಅದು ಕೇವಲ ದೇಶವಲ್ಲ ಅದೆಷ್ಟೋ...

B.Y. Vijayendra ದಾವಣಗೆರೆ ಚುನಾವಣೆ: ಬಿಜೆಪಿ ಅಭ್ಯರ್ಥಿಗೇ ಗೆಲುವು- ಬಿ.ವೈ.ವಿಜಯೇಂದ್ರ.

B.Y. Vijayendra  ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾಧ್ಯಮ ಮಿತ್ರರೊಂದಿಗೆ...

Drinking water supply ಗಮನಿಸಿ!.ಏಪ್ರಿಲ್ 4 & 5 ರಂದುಶಿವಮೊಗ್ಗ ನಗರದಲ್ಲಿ ಹಲವೆಡೆ ನೀರು ಸರಬರಾಜು ವ್ಯತ್ಯಯ.

Drinking water supply ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಮಾಡುವ...