Saturday, May 23, 2026
Saturday, May 23, 2026

G Seva Kendra ರೈತರು & ನಗರದ ನಿವಾಸಿಗಳಿಗೆ ಸರ್ಕಾರದ ಯೋಜನೆಗಳ ಲಾಭ ತಲುಪಿಸುವ ಜನಸ್ನೇಹಿ ಕೆಲಸ ಮಾಡಬೇಕು- ಶಾಸಕ ತಮ್ಮಯ್ಯ

Date:

G Seva Kendra ಚಿಕ್ಕಮಗಳೂರು ನಗರದ ನೇಕಾರ ಬೀದಿಯಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ‘ಜಿ ಸೇವಾ ಕೇಂದ್ರ’ ಮಳಿಗೆಯನ್ನು ಶಾಸಕ ಹೆಚ್.ಡಿ.ತಮ್ಮಯ್ಯ ಶುಕ್ರವಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಜಿ ಸೇವಾ ಕೇಂದ್ರದ ಮಳಿಗೆಯ ಸಿಬ್ಬಂದಿಗಳು ರೈತರು ಹಾಗೂ ನಗರದ ನಿವಾಸಿಗಳಿಗೆ ಸರ್ಕಾರದಿಂದ ಉಪಯೋಗವಾಗುವ ಎಲ್ಲಾ ಯೋಜನೆಗಳನ್ನು ಒದಗಿಸಿಕೊಡುವ ಮೂಲಕ ಜನಸ್ನೇಹಿ ಕೆಲಸ ಮಾಡಿ ಜನಮನ್ನಣೆಗೆ ಪಾತ್ರರಾಗಬೇಕು ಎಂದರು.

G Seva Kendra ಜಿ.ಪಂ. ಮಾಜಿ ಅಧ್ಯಕ್ಷ ಎ.ಎನ್.ಮಹೇಶ್ ಮಾತನಾಡಿ ವಿಕಲಚೇತನರಿಗೆ ಗುರುತಿನ ಚೀಟಿ, ಬಸ್‌ಪಾಸ್, ಪಹಣ , ಆಧಾರ್ ಕಾರ್ಡ್, ರೇಷನ್ ಕಾರ್ಡ್, ಚುನಾವಣಾ ಗುರುತಿಸಿ ಕಂಪ್ಯೂಟರ್ ಟೈಪಿಂಗ್, ನೋಟರಿ, ಪಾನ್ ಕಾರ್ಡ್ ಹಾಗೂ ಸರ್ಕಾರದ ಇನ್ನಿತರೆ ಸೌಲಭ್ಯಗಳನ್ನು ನೀಡುತ್ತಿದ್ದು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಬೇಕು ಎಂದು ಹೇಳಿದರು.

ಈ ಸಂದರ್ಭದಲಿ ಕಂಟ್ರಾಕ್ಟರ್ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಎಸ್.ಶಾಂತೇಗೌಡ, ಜಿ ಸೇವಾ ಕೇಂದ್ರದ ಮಾಲೀಕರಾದ ಚಂದ್ರಶೇಖರ್, ಕೃಷ್ಣಮೂರ್ತಿ, ವಕೀಲ ಡಿ.ಸಿ.ಪುಟ್ಟೇಗೌಡ, ಮುಖಂಡರುಗಳಾದ ಶಿವಾನಂದ ಸ್ವಾಮಿ, ಪಿಡಿಓ ಲಕ್ಷ್ಮಣ್, ವಿಕಲಚೇತನರ ಕಲ್ಯಾಣಾಧಿಕಾರಿ ಪೃಥ್ವಿಜಿತ್, ಸೋಮಶೇಖರ್, ಮೋಹನ್‌ಕುಮಾರ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...