Thursday, September 17, 2026
Thursday, September 17, 2026

Dr. Satyanarayana HS ಕನ್ನಡ ಕವಿಗಳ‌ ಋತು ವಿಲಾಸ ಅಭ್ಯಾಸ ಮಾಡುವುದೇ ಒಂದು ಸೊಗಸು- ಡಾ.ಸತ್ಯನಾರಾಯಣ

Date:

Dr. Satyanarayana HS ಮಳೆಯಿಲ್ಲದೆ ಇಳೆಯುಂಟೆ? ಭೂಮಿಯ ಮೇಲಿನ ಜೀವಕೋಟಿ ಬದುಕುಳಿಯಲು ಮಳೆ ಬೇಕು. ಹಾಗೆಂದೇ ಕನ್ನಡ ಕವಿಗಳು ವರ್ಷ ಋತುವನ್ನು ಬಣ್ಣಿಸಿರುವ ಪರಿ ಅನನ್ಯವಾಗಿದೆ. ಪಂಪ ರನ್ನ ಹರಿಹರ ಕುಮಾರವ್ಯಾಸ, ರತ್ನಾಕರವರ್ಣಿಯಿಂದ ಮೊದಲ್ಗೊಂಡು ಆಧುನಿಕ ಕವಿಗಳು ಮಳೆಯನ್ನಿ ಜೀವನಾಡಿಯಾಗಿ ಕಂಡಿರುವ ಬಗೆಯನ್ನು ವಿಮರ್ಶಕ ಡಾ.ಎಚ್.ಎಸ್. ಸತ್ಯನಾರಾಯಣ ವಿವರಿಸಿದರು.

ಭೂಮಿಕಾ ಆಯೋಜಿಸಿದ್ದ ಈ ಸಂಜೆಯ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು ಬಿಎಂಶ್ರೀ ಬೇಂದ್ರೆ ಕುವೆಂಪು ಪುತಿನ ಕೆ ಎಸ್ ನರಸಿಂಹಸ್ವಾಮಿ, ಜಿಎಸ್ ಶಿವರುದ್ರಪ್ಪ, ಕಣವಿ, ನಿಸಾರ್, ಸು ರಂ ಎಕ್ಕುಂಡಿ ಕಂಬಾರ, ಎಂ ಆರ್ ಕಮಲ, ಪ್ರತಿಭಾ ನಂದಕುಮಾರ್ ಮುಂತಾದವರ ಕವಿತೆಗಳಲ್ಲಿ ಚಿತ್ರಿತವಾಗಿರುವ ಮಳೆಯ ವರ್ಣನೆಯನ್ನು ಸಭೆಗೆ ಪರಿಚಯಿಸಿದರು.

Dr. Satyanarayana HS ಜನಪದರ ಅನೇಕ ಮಳೆಯ ಹಾಡುಗಳನ್ನು ಉಲ್ಲೇಖಿಸುತ್ತಾ ಕನ್ನಡದ ಸುಪ್ರಸಿದ್ಧ ಕವಿಗಳ ರಚನೆಗಳನ್ನು ಚರ್ಚಿಸಿದರು. ಅಧ್ಯಕ್ಷತೆ ವಹಿಸಿದ್ದ ಭೂಮಿಕಾ ಅಧ್ಯಕ್ಷ ಡಾ. ಕೃಷ್ಣ ಭಟ್ ಮಾತನಾಡಿ ಕನ್ನಡ ಕವಿಗಳು ಕಂಡ ಋತು ವಿಲಾಸವನ್ನು ಅಭ್ಯಸಿಸುವುದೇ ಒಂದು ಸೊಗಸೆಂದು ಬಣ್ಣಿಸಿದರು.

ಈ ಬಗೆಯ ಕಾರ್ಯಕ್ರಮದಿಂದಲಾದರೂ ವರುಣ ದೇವ ಮಳೆಯನ್ನು ಕರುಣಿಸಲೆಂದು ಆಶಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...