Monday, February 2, 2026
Monday, February 2, 2026

Dr. Satyanarayana HS ಕನ್ನಡ ಕವಿಗಳ‌ ಋತು ವಿಲಾಸ ಅಭ್ಯಾಸ ಮಾಡುವುದೇ ಒಂದು ಸೊಗಸು- ಡಾ.ಸತ್ಯನಾರಾಯಣ

Date:

Dr. Satyanarayana HS ಮಳೆಯಿಲ್ಲದೆ ಇಳೆಯುಂಟೆ? ಭೂಮಿಯ ಮೇಲಿನ ಜೀವಕೋಟಿ ಬದುಕುಳಿಯಲು ಮಳೆ ಬೇಕು. ಹಾಗೆಂದೇ ಕನ್ನಡ ಕವಿಗಳು ವರ್ಷ ಋತುವನ್ನು ಬಣ್ಣಿಸಿರುವ ಪರಿ ಅನನ್ಯವಾಗಿದೆ. ಪಂಪ ರನ್ನ ಹರಿಹರ ಕುಮಾರವ್ಯಾಸ, ರತ್ನಾಕರವರ್ಣಿಯಿಂದ ಮೊದಲ್ಗೊಂಡು ಆಧುನಿಕ ಕವಿಗಳು ಮಳೆಯನ್ನಿ ಜೀವನಾಡಿಯಾಗಿ ಕಂಡಿರುವ ಬಗೆಯನ್ನು ವಿಮರ್ಶಕ ಡಾ.ಎಚ್.ಎಸ್. ಸತ್ಯನಾರಾಯಣ ವಿವರಿಸಿದರು.

ಭೂಮಿಕಾ ಆಯೋಜಿಸಿದ್ದ ಈ ಸಂಜೆಯ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು ಬಿಎಂಶ್ರೀ ಬೇಂದ್ರೆ ಕುವೆಂಪು ಪುತಿನ ಕೆ ಎಸ್ ನರಸಿಂಹಸ್ವಾಮಿ, ಜಿಎಸ್ ಶಿವರುದ್ರಪ್ಪ, ಕಣವಿ, ನಿಸಾರ್, ಸು ರಂ ಎಕ್ಕುಂಡಿ ಕಂಬಾರ, ಎಂ ಆರ್ ಕಮಲ, ಪ್ರತಿಭಾ ನಂದಕುಮಾರ್ ಮುಂತಾದವರ ಕವಿತೆಗಳಲ್ಲಿ ಚಿತ್ರಿತವಾಗಿರುವ ಮಳೆಯ ವರ್ಣನೆಯನ್ನು ಸಭೆಗೆ ಪರಿಚಯಿಸಿದರು.

Dr. Satyanarayana HS ಜನಪದರ ಅನೇಕ ಮಳೆಯ ಹಾಡುಗಳನ್ನು ಉಲ್ಲೇಖಿಸುತ್ತಾ ಕನ್ನಡದ ಸುಪ್ರಸಿದ್ಧ ಕವಿಗಳ ರಚನೆಗಳನ್ನು ಚರ್ಚಿಸಿದರು. ಅಧ್ಯಕ್ಷತೆ ವಹಿಸಿದ್ದ ಭೂಮಿಕಾ ಅಧ್ಯಕ್ಷ ಡಾ. ಕೃಷ್ಣ ಭಟ್ ಮಾತನಾಡಿ ಕನ್ನಡ ಕವಿಗಳು ಕಂಡ ಋತು ವಿಲಾಸವನ್ನು ಅಭ್ಯಸಿಸುವುದೇ ಒಂದು ಸೊಗಸೆಂದು ಬಣ್ಣಿಸಿದರು.

ಈ ಬಗೆಯ ಕಾರ್ಯಕ್ರಮದಿಂದಲಾದರೂ ವರುಣ ದೇವ ಮಳೆಯನ್ನು ಕರುಣಿಸಲೆಂದು ಆಶಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...