Thursday, February 5, 2026
Thursday, February 5, 2026

Shivamogga Dasara Festival ಸಕ್ರೆಬೈಲಿನಿಂದ ಮೂರು ಪಳಗಿದ ಆನೆಗಳು ಶಿವಮೊಗ್ಗ ದಸರಾ ಉತ್ಸವದಲ್ಲಿ ಹೆಜ್ಜೆ ಹಾಕಲಿವೆ

Date:

Shivamogga Dasara Festival ಈ ಬಾರಿ ನಾಡ ಹಬ್ಬ ದಸರಾ ಹಬ್ಬವನ್ನು ಶಿವಮೊಗ್ಗ ನಗರದಲ್ಲಿ ಅದ್ದೂರಿಯಾಗಿ ನಡೆಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಇದಕ್ಕಾಗಿ ಅಂಬಾರಿ ಉತ್ಸವ ಮೆರವಣಿಗೆಗೆ ಅಗತ್ಯವಿರುವ ಪಳಗಿರುವ ಮೂರು ಆನೆಗಳ ಪೂರೈಕೆಗಾಗಿ ಶಿವಮೊಗ್ಗ ಮಹಾನಗರ ಪಾಲಿಕೆಯ ಮೇಯರ್ ಶಿವಕುಮಾರ್ ಹಾಗೂ ಉಪಮೇಯರ್ ಲಕ್ಷ್ಮಿ ಶಂಕರ್ ನಾಯ್ಕ ನೇತೃತ್ವದಲ್ಲಿ ಸರ್ವ ಪಕ್ಷ ನಿಯೋಗ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ರವರನ್ನು ಭೇಟಿ ಮಾಡಿ ಮನವಿ ಮಾಡಿದರು.

ಮಹಾನಗರ ಪಾಲಿಕೆ ಸರ್ವ ಪಕ್ಷ ಸದಸ್ಯರ ಮನವಿಗೆ ತತಕ್ಷಣ ಅರಣ್ಯ ಸಚಿವರು ಅರಣ್ಯ ಇಲಾಖೆಯ ಸಂಬಂಧ ಪಟ್ಟ ಮೇಲೆ ಅಧಿಕಾರಿಗಳಿಗೆ ಸೂಚಸಿ ಶಿವಮೊಗ್ಗ ಸಕ್ರಬೈಲಿನ ಆನೆ ಬಿಡಾರದಿಂದ ಮೂರು ಪಳಗಿರುವ ಆನೆಗಳನ್ನು ಬಾರಿ ಉತ್ಸವಕ್ಕೆ ಒದಗಿಸಲು ಆದೇಶಿಸಿದ್ದಾರೆ.

ಸರ್ವ ಪಕ್ಷದ ಸದಸ್ಯರ ಮನವಿಗೆ ತಕ್ಷಣ ಸ್ಪಂದಿಸಿದ ಅರಣ್ಯ ಸಚಿವರಿಗೆ ಶಿವಮೊಗ್ಗ ಮಹಾನಗರ ಪಾಲಿಕೆಯಿಂದ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಕೃತಜ್ಞತೆ ಸಲ್ಲಿಸಿದ್ದಾರೆ.

Shivamogga Dasara Festival ಈ ಸಂದರ್ಭದಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆಯ ಆಡಳಿತ ಪಕ್ಷದ ನಾಯಕ ಜ್ಞಾನೇಶ್ವರ್‌ ಪಾಲಿಕೆ ಸದಸ್ಯರಾದ ಹೆಚ್‌.ಸಿ. ಯೋಗೀಶ್‌, ನಾಗರಾಜ ಕಂಕಾರಿ,ಸುವರ್ಣ ಶಂಕರ್‌,ಭಾನುಮತಿ ವಿನೋದ್‌ , ಧೀರರಾಜ್‌ ಹೊನ್ನವಿಲೆ, ವಿಶ್ವಾಸ್ , ಎಸ್ ಜಿ ರಾಜು, ಆರ್‌.ಸಿ. ನಾಯ್ಕ್, ಹಾಗೂ ಪ್ರಮುಖರಾದ ಶಂಕರ ನಾಯ್ಕ, ಕೆ ರಂಗನಾಥ್ ಇನ್ನಿತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...