Monday, May 4, 2026
Monday, May 4, 2026

Minister Krishna Bhairegowda ಮಾರ್ಗಸೂಚಿ ಅನ್ವಯ ಬರ ಪರಿಸ್ಥಿತಿ ಪಟ್ಟಿಯಲ್ಲಿ ರಾಜ್ಯದ 62 ತಾಲ್ಲೂಕುಗಳು- ಸಚಿವ ಕೃಷ್ಣ ಭೈರೇಗೌಡ

Date:

Minister Krishna Bhairegowda ಮಳೆ ಕೊರತೆ ಮತ್ತು ಬಿತ್ತನೆ ಪ್ರಮಾಣ ಕುಂಠಿತವಾಗಿರುವುದನ್ನು ಆಧರಿಸಿ 113 ತಾರೀಕುಗಳಲ್ಲಿ ಜಂಟಿ ಸಮೀಕ್ಷೆ ನಡೆಸಲಾಗಿತ್ತು. ಈ ಪೈಕಿ 62 ತಾಲೂಕುಗಳು ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಬರವನ್ನು ಎದುರಿಸುತ್ತಿವೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಹೇಳಿದ್ದಾರೆ.

ಬರ ಕುರಿತಂತೆ ನಡೆದ ಸಂಪುಟ ಉಪಸಮಿತಿ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ತಿಳಿಸಿದರು. 51 ತಾಲೂಕುಗಳಲ್ಲದೆ ಇನ್ನೂ 83 ತಾಲೂಕುಗಳಲ್ಲಿ ಬೆಳೆ ಸಮೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಕೇಂದ್ರದ ಮಾನದಂಡಗಳು ಕಠಿಣವಾಗಿರುವುದರಿಂದ ಜನರ ನಿರೀಕ್ಷೆಗೆ ತಕ್ಕಂತೆ ಬರ ಘೋಷಣೆ ಮಾಡಲು ಸಾಧ್ಯವಾಗಲ್ಲ. ಈ ಕಾರಣಕ್ಕಾಗಿ ಮಾನದಂಡ ಬದಲಿಸುವಂತೆ ಮನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿಯವರಿಗೆ ಪತ್ರ ಬರೆದಿದ್ದಾರೆ ಎಂದು ಹೇಳಿದರು.

   ಕೇಂದ್ರ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಯಾವುದೇ ತಾಲೂಕನ್ನು ಬರಪೀಡಿತ ಎಂದು ಘೋಷಿಸಬೇಕಾದರೆ ಶೇ. 60ರಷ್ಟು ಮಳೆ ಕೊರತೆ ಇರಬೇಕು. ಹಾಗೂ ಮೂರು ವಾರ ಶುಷ್ಕ ವಾತಾವರಣವಿರಬೇಕು. ಆದರೆ 51ಕ್ಕೂ ಅಧಿಕ ತಾಲೂಕುಗಳಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ.

Minister Krishna Bhairegowda ಮೊದಲ ಜಂಟಿ ಸಮೀಕ್ಷೆ ನಂತರ ಬೆಳೆ ಪರಿಸ್ಥಿತಿ ಮತ್ತೆ ಕುಸಿತಿದೆ ಎಂದು ಅಧಿಕಾರಿಗಳು, ರೈತರು ದೂರಿದ್ದಾರೆ.

ಆದ್ದರಿಂದ ಮತ್ತೊಮ್ಮೆ ಬೆಳೆ ಸಮೀಕ್ಷೆ ನಡೆಸಲು ಅವರು ಒತ್ತಾಯಿಸಿದ್ದಾರೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...