Wednesday, July 8, 2026
Wednesday, July 8, 2026

Rotary Shimoga East ಶಿಕ್ಷಣವೆಂದರೆ ಜ್ಞಾನವೃದ್ಧಿ ,ಜೀವನ ಮೌಲ್ಯಗಳ ಅಳವಡಿಕೆ-ವಸಂತ ನಾಯಕ್

Date:

Rotary Shimoga East ಶಿಕ್ಷಣ ಎಂದರೆ ಪದವಿ ಪಡೆಯುವ ಜತೆಯಲ್ಲಿ ತಿಳವಳಿಕೆ, ಜ್ಞಾನ ವೃದ್ಧಿಸಿಕೊಳ್ಳುವುದು, ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡು ಮುನ್ನಡೆಯುವುದು ಎಂದು ಧನಂಜಯರಾವ್ ಗಾಡ್ಗಿಲ್ ಇನ್ಸ್ಟಿಟ್ಯೂಟ್ ಆಫ್ ಕೋಆಪರೇಟಿವ್ ಮ್ಯಾನೇಜ್‌ಮೆಂಟ್ ಮಾಜಿ ನಿರ್ದೇಶಕ ಬಿ.ವಸಂತ ನಾಯಕ ಹೇಳಿದರು.

ಶಿವಮೊಗ್ಗ ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಾಯಕತ್ವದಲ್ಲಿ ಶಿಕ್ಷಣದ ಪಾತ್ರ ವಿಷಯ ಕುರಿತು ಮಾತನಾಡಿ, ಪ್ರತಿಯೊಬ್ಬರಿಂದ ನಾಯಕತ್ವ ಗುಣವನ್ನು ನಾವು ಕಲಿಯುತ್ತೇವೆ. ನಿರಂತರ ಕಲಿಕೆ ಹಾಗೂ ಸಮರ್ಥವಾಗಿ ನಿರ್ವಹಿಸುವ ಗುಣ ನಾಯಕತ್ವ ಮನೋಭಾವ ಹೆಚ್ಚಿಸುತ್ತದೆ ಎಂದು ತಿಳಿಸಿದರು.

ಶಿಕ್ಷಣ ತರಬೇತಿಗೂ ತುಂಬಾ ವ್ಯತ್ಯಾಸ ಇದ್ದು, ತರಬೇತಿಯಲ್ಲಿ ವಿವಿಧ ಕೌಶಲ್ಯಗಳನ್ನು ಕಲಿಯುತ್ತೇವೆ. ಆದರೆ ಮನೋಭಾವ ಸದೃಢವಾದರೆ, ಆತ್ಮವಿಶ್ವಾಸದಿಂದ ವರ್ತಿಸಿದಾಗ ನಾಯಕನಾಗಲು ಸಾಧ್ಯ. ದೂರದೃಷ್ಠಿ ಆಲೋಚನೆ ಇರಬೇಕು. ಪ್ರಭಾವ ಬೀರುವ ಶಕ್ತಿ ಇರಬೇಕು. ಸವಾಲುಗಳನ್ನು ಎದುರಿಸುವ ಸಾಮಾರ್ಥ್ಯ ಹೊಂದಿರಬೇಕು ಎಂದರು.

ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್ ಚಂದ್ರ ಮಾತನಾಡಿ, ನಮ್ಮ ಸಂಸ್ಥೆಯು ಉತ್ತಮ ಕಾರ್ಯ ಚಟುವಟಿಕೆಗಳನ್ನು ನಡೆಸುತ್ತಿದ್ದು, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದೆ. ಆರೋಗ್ಯ ಶಿಬಿರಗಳನ್ನು ಆಯೋಜಿಸಲಾಗುತ್ತದೆ ಎಂದು ಹೇಳಿದರು.

Rotary Shimoga East ವಿದ್ಯಾರ್ಥಿಗಳಿಗೆ ನಾಯಕತ್ವ ಗುಣ ಸೇರಿದಂತೆ ವಿವಿಧ ಕೌಶಲ್ಯಗಳನ್ನು ಕಲಿಸುವ ಆಶಯದಿಂದ ಉಪನ್ಯಾಸ ಶಿಬಿರಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಶಾಲಾ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ತಿಳಿಸಿದರು.

ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕಿಶೋರ್ ಕುಮಾರ್, ಮಾಜಿ ಅಧ್ಯಕ್ಷ ಆದಿ ಮೂರ್ತಿ, ಮಂಜುನಾಥ್ ರಾವ್ ಕದಂ, ಪರಮೇಶ್ವರ್ ಶಿಗ್ಗಾವ್, ಚಂದ್ರಶೇಖರಯ್ಯ, ಶೇಷಗಿರಿ, ಗಣೇಶ್ ಪ್ರಕಾಶ್, ಶಾರದಾ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...