Sunday, August 2, 2026
Sunday, August 2, 2026

Soujanya Murder Case: ಸೌಜನ್ಯ ಪ್ರಕರಣ ಸೂಕ್ತ ತನಿಖೆ ನಡೆಸಲು ಒತ್ತಾಯ

Date:

Soujanya Murder Case: ಉಜಿರೆ ಕಾಲೇಜಿನ ಸೌಜನ್ಯ ಅತ್ಯಾಚಾರ ಪ್ರಕರಣವನ್ನು ಸೂಕ್ತ ತನಿಖೆ ನಡೆಸಿ ನೊಂದಿರುವ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ನೇಚರ್ ಕನ್ಸರ್‌ವೇಷನ್ ಟ್ರಸ್ಟ್ ಅಧ್ಯಕ್ಷ ಡಾ. ಕೆ.ಸುಂದರಗೌಡ ರಾಜ್ಯಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಸಂಬoಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಂಚೆ ಮೂಲಕ ಮನವಿ ಸಲ್ಲಿಸಿ ಪತ್ರಿಕಾ ಹೇಳಿಕೆ ನೀಡಿದ ಅವರು ಪ್ರಕರಣ ಸಂಬoಧ ಮಾನವ ಹಕ್ಕುಗಳ ಆಯೋಗದ ಮುಖಾಂತರ ಸುಪ್ರಿಂ ಕೋರ್ಟ್ ನ್ಯಾಯಾ ಧೀಶರು ಮತ್ತು ಹೈಕೋರ್ಟ್ನ ನ್ಯಾಯಾಧೀಶರಿಗೆ ಪತ್ರಮುಖೇನ ನ್ಯಾಯಕ್ಕೆ ಒತ್ತಾಯಿಸಲಾಗಿದೆ ಎಂದಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಅತ್ಯಾಚಾರ ಮತ್ತು ಕೊಲೆಗಳ ಸಂಖ್ಯೆ ಹೆಚ್ಚಾಗುತ್ತಿರುವುದು ನಾಗರೀಕ ಸಮಾಜ ತಲೆ ತಗ್ಗಿಸುವಂತಾಗಿದೆ. ಕೇವಲ ಎರಡು ವರ್ಷಗಳಲ್ಲಿ ಅತಿಹೆಚ್ಚು ಮಹಿಳೆಯರು ಮತ್ತು ಮಕ್ಕಳು ಕಳೆದುಹೋಗಿರುವ ದಾಖಲೆಗಳಿವೆ. ಸತ್ಯ ಕಂಡುಹಿಡಿಯಲು ಭ್ರಷ್ಟ ಮತ್ತು ಒತ್ತಡದ ಸಮಾಜದಲ್ಲಿ ಬಡವರು ನ್ಯಾಯವನ್ನು ಎಷ್ಟರ ಮಟ್ಟಿಗೆ ಸಾಧ್ಯ ಎಂಬುದಾಗಿ ಪ್ರಶ್ನಿಸಬೇಕಾಗಿರುವುದು ಪ್ರತಿಯೊಬ್ಬರ ನಾಗರೀಕರ ಹಕ್ಕಾಗಿದೆ ಎಂದಿದ್ದಾರೆ.

Soujanya Murder Case: ಕೂಡಲೇ ಪ್ರಕರಣವನ್ನು ಕೂಲಂಕುಷವಾಗಿ ಪರಿಶೀಲನೆ ನಡೆಸಿ ನ್ಯಾಯ ವಂಚಿತರಾದ ಸೌಜನ್ಯಳ ಪೋಷ ಕರಿಗೆ ನ್ಯಾಯ ಒದಗಿಸುವ ಮೂಲಕ ಸಂತೋಷ್‌ರಾವ್ ಕುಟುಂಬಕ್ಕೆ ಮಾನವೀಯತೆ ದೃಷ್ಟಿಯಿಂದ ಆಗಿರುವ ನಷ್ಟವನ್ನು ನೀಡುವ ಜೊತೆಗೆ ನಿಜವಾದ ಅಪರಾಧಿಗಳ ಆಸ್ತಿ ಮುಟ್ಟುಗೋಲು ಹಾಕುವ ಮೂಲಕ ನಾಗರೀಕ ಹಕ್ಕುಗಳನ್ನು ನಿರಾಕರಿಸಿ ಸಮಾಜದಿಂದ ಬಹಿಷ್ಕರಿಸಬೇಕು ಎಂದು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...