Wednesday, February 4, 2026
Wednesday, February 4, 2026

Soujanya Murder Case: ಸೌಜನ್ಯ ಪ್ರಕರಣ ಸೂಕ್ತ ತನಿಖೆ ನಡೆಸಲು ಒತ್ತಾಯ

Date:

Soujanya Murder Case: ಉಜಿರೆ ಕಾಲೇಜಿನ ಸೌಜನ್ಯ ಅತ್ಯಾಚಾರ ಪ್ರಕರಣವನ್ನು ಸೂಕ್ತ ತನಿಖೆ ನಡೆಸಿ ನೊಂದಿರುವ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ನೇಚರ್ ಕನ್ಸರ್‌ವೇಷನ್ ಟ್ರಸ್ಟ್ ಅಧ್ಯಕ್ಷ ಡಾ. ಕೆ.ಸುಂದರಗೌಡ ರಾಜ್ಯಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಸಂಬoಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಂಚೆ ಮೂಲಕ ಮನವಿ ಸಲ್ಲಿಸಿ ಪತ್ರಿಕಾ ಹೇಳಿಕೆ ನೀಡಿದ ಅವರು ಪ್ರಕರಣ ಸಂಬoಧ ಮಾನವ ಹಕ್ಕುಗಳ ಆಯೋಗದ ಮುಖಾಂತರ ಸುಪ್ರಿಂ ಕೋರ್ಟ್ ನ್ಯಾಯಾ ಧೀಶರು ಮತ್ತು ಹೈಕೋರ್ಟ್ನ ನ್ಯಾಯಾಧೀಶರಿಗೆ ಪತ್ರಮುಖೇನ ನ್ಯಾಯಕ್ಕೆ ಒತ್ತಾಯಿಸಲಾಗಿದೆ ಎಂದಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಅತ್ಯಾಚಾರ ಮತ್ತು ಕೊಲೆಗಳ ಸಂಖ್ಯೆ ಹೆಚ್ಚಾಗುತ್ತಿರುವುದು ನಾಗರೀಕ ಸಮಾಜ ತಲೆ ತಗ್ಗಿಸುವಂತಾಗಿದೆ. ಕೇವಲ ಎರಡು ವರ್ಷಗಳಲ್ಲಿ ಅತಿಹೆಚ್ಚು ಮಹಿಳೆಯರು ಮತ್ತು ಮಕ್ಕಳು ಕಳೆದುಹೋಗಿರುವ ದಾಖಲೆಗಳಿವೆ. ಸತ್ಯ ಕಂಡುಹಿಡಿಯಲು ಭ್ರಷ್ಟ ಮತ್ತು ಒತ್ತಡದ ಸಮಾಜದಲ್ಲಿ ಬಡವರು ನ್ಯಾಯವನ್ನು ಎಷ್ಟರ ಮಟ್ಟಿಗೆ ಸಾಧ್ಯ ಎಂಬುದಾಗಿ ಪ್ರಶ್ನಿಸಬೇಕಾಗಿರುವುದು ಪ್ರತಿಯೊಬ್ಬರ ನಾಗರೀಕರ ಹಕ್ಕಾಗಿದೆ ಎಂದಿದ್ದಾರೆ.

Soujanya Murder Case: ಕೂಡಲೇ ಪ್ರಕರಣವನ್ನು ಕೂಲಂಕುಷವಾಗಿ ಪರಿಶೀಲನೆ ನಡೆಸಿ ನ್ಯಾಯ ವಂಚಿತರಾದ ಸೌಜನ್ಯಳ ಪೋಷ ಕರಿಗೆ ನ್ಯಾಯ ಒದಗಿಸುವ ಮೂಲಕ ಸಂತೋಷ್‌ರಾವ್ ಕುಟುಂಬಕ್ಕೆ ಮಾನವೀಯತೆ ದೃಷ್ಟಿಯಿಂದ ಆಗಿರುವ ನಷ್ಟವನ್ನು ನೀಡುವ ಜೊತೆಗೆ ನಿಜವಾದ ಅಪರಾಧಿಗಳ ಆಸ್ತಿ ಮುಟ್ಟುಗೋಲು ಹಾಕುವ ಮೂಲಕ ನಾಗರೀಕ ಹಕ್ಕುಗಳನ್ನು ನಿರಾಕರಿಸಿ ಸಮಾಜದಿಂದ ಬಹಿಷ್ಕರಿಸಬೇಕು ಎಂದು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...