Monday, May 18, 2026
Monday, May 18, 2026

ಅನಿವಾರ್ಯ ಆದರೆ ಶಾಲೆಗಳು ಬಂದ್- ಸಚಿವರು

Date:

ಕೊರೋನಾ ಮೇಲೆ ಸರ್ಕಾರ ನಿಗಾ ವಹಿಸಿದೆ. ಒಂದು ವೇಳೆ ಶಾಲೆಗಳು ಮುಚ್ಚಬೇಕಾದ ಪರಿಸ್ಥಿತಿ ಎದುರಾದರೆ ಅಥವಾ ಪರೀಕ್ಷೆಗಳನ್ನು ಸ್ಥಗಿತಗೊಳಿಸುವ ಸಂದರ್ಭ ಉಂಟಾದರೆ ಆ ವಿಷಯದಲ್ಲಿ ಹಿಂದೇಟು ಹಾಕುವುದಿಲ್ಲ ಎಂದು ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ತಿಳಿಸಿದ್ದಾರೆ.

ಸದ್ಯ ಅಂತ ಯಾವುದೇ ಪರಿಸ್ಥಿತಿ ಇಲ್ಲ. ಪೋಷಕರು ಆತಂಕಕ್ಕೆ ಒಳಗಾಗುವುದು ಬೇಡ. ಮಕ್ಕಳ ಮೇಲೆ ಕೊಮಿಡಿ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ತಜ್ಞರು ಸ್ಪಷ್ಟಪಡಿಸಿದ್ದಾರೆ. ಆದರೂ ನಮಗೆ ಮಕ್ಕಳ ಆರೋಗ್ಯ ತುಂಬಾ ಮುಖ್ಯ. ಪರಿಸ್ಥಿತಿ ಕೈಮೀರಿದರೆ ಪರ್ಯಾಯ ಏನು ಮಾಡಬೇಕು ಎಂದು ಯೋಚನೆ ಮಾಡುತ್ತೇವೆ. ತಜ್ಞರ ಸಲಹೆ ಪಡೆದ ನಂತರ, ಮುಖ್ಯಮಂತ್ರಿ ಅವರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಕೂಡ ಹೇಳಿದರು.

ವಸತಿ ಶಾಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚಿನ ಸಂಖ್ಯೆಯಲ್ಲಿ ದೃಢಪಟ್ಟಿದೆ. ಈ ಕುರಿತು ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಆಯುಕ್ತರ ಜೊತೆ ಸಮಾಲೋಚನೆ ನಡೆಸಿದ್ದೇನೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ವಿಧಾನಸೌಧದಲ್ಲಿ ಮಾಧ್ಯಮ ಮಿತ್ರರಿಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಜಾವಳ್ಳಿ ಬಳಿ ಭೀಕರ ಅಪಘಾತ: ಸಹ ಪ್ರಾಧ್ಯಾಪಕ ಸ್ಥಳದಲ್ಲೇ ದುರ್ಮರಣ.

Breaking News ಶಿವಮೊಗ್ಗ ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾವಳ್ಳಿ ಸಮೀಪ ಇಟ್ಟಿಗೆ...