Wednesday, March 25, 2026
Wednesday, March 25, 2026

Jci Shimoga Sahyadri ತಂಬಾಕು ಸೇವನೆಯಿಂದ ಪ್ರತಿವರ್ಷ 10 ಲಕ್ಷ ಜನ ಮರಣ-ಹೇಮಂತ್ ರಾಜ್ ಅರಸ್

Date:

Jci Shimoga Sahyadri ಶಿವಮೊಗ್ಗ ತಂಬಾಕು ಸೇವನೆಯಿಂದ ಪ್ರತಿ ವರ್ಷ 10 ಲಕ್ಷ ಜನರು ಸಾವನ್ನಪ್ಪುತ್ತಿದ್ದು, ಮಾದಕ ವಸ್ತುಗಳ ವ್ಯಸನದಿಂದ ದೂರ ಇರಬೇಕು ಎಂದು ಆರೋಗ್ಯ ಇಲಾಖೆಯ ಜಿಲ್ಲಾ ಸಲಹೆಗಾರ ಹೇಮಂತ್ ರಾಜ್ ಅರಸ್ ಹೇಳಿದರು.

ಶಿವಮೊಗ್ಗ ನಗರದ ಜ್ಞಾನಗಂಗೋತ್ರಿ ಪದವಿಪೂರ್ವ ಕಾಲೇಜಿನಲ್ಲಿ ಜೆಸಿಐ ಸಹ್ಯಾದ್ರಿ ಶಿವಮೊಗ್ಗ ವತಿಯಿಂದ ಆಯೋಜಿಸಿದ್ದ “ ತಂಬಾಕು ಹಾಗೂ ಮಾದಕ ವಸ್ತು ಸೇವನೆಯ ದುಷ್ಪರಿಣಾಮಗಳು” ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ಕೆಲವರು ತಂಬಾಕು, ಮಾದಕ ವಸ್ತುಗಳನ್ನು ತಿನ್ನುವ ಮೂಲಕ ದುಶ್ಚಟಗಳಿಗೆ ದಾಸರಾಗಿ ಜೀವನ ಹಾಳುಮಾಡಿಕೊಳ್ಳುತ್ತಿದ್ದಾರೆ. ತಂಬಾಕು, ಮಾದಕ ವಸ್ತುಗಳು ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟುಮಾಡುವ ಜತೆಯಲ್ಲಿ ಜೀವಕ್ಕೆ ಹಾನಿಯುಂಟು ಮಾಡುತ್ತದೆ ಎಂದು ತಿಳಿಸಿದರು.

ಯುವಜನರು ಮಾದಕ ವ್ಯಸನಿಗಳಾಗುವುದರಿಂದ ನರ ಮಂಡಲ ವ್ಯವಸ್ಥೆ ಮೇಲೆ ಪರಿಣಾಮ ಬೀರಿ ಮಾನಸಿಕವಾಗಿ ತೊಂದರೆ ಅನುಭವಿಸುತ್ತಾರೆ. ನೆನಪಿನ ಶಕ್ತಿ ಕಳೆದುಕೊಳ್ಳುತ್ತಾರೆ. ವಿದ್ಯಾರ್ಥಿಗಳು ಮಾದಕ ವ್ಯಸನಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿತುಕೊಳ್ಳಬೇಕು ಎಂದರು.

ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷೆ ಸುಷ್ಪಾ ಹಿರೇಮಠ್ ಮಾತನಾಡಿ, ಜೆಸಿಐ ಸಪ್ತಾಹದ ಪ್ರಯುಕ್ತ ಶಾಲಾ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳು ಜೀವನದಲ್ಲಿ ದುಶ್ಚಟಗಳಿಂದ ದೂರ ಇರಬೇಕು. ಯಾವುದೇ ಕೆಟ್ಟ ಅಭ್ಯಾಸಗಳನ್ನು ಕಲಿಯಬಾರದು ಎಂದು ಹೇಳಿದರು.

ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಮಾತನಾಡಿ, ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಇಂತಹ ಕಾರ್ಯಕ್ರಮಗಳ ಆಯೋಜನೆ ಮಾಡಿರುವುದು ಶ್ಲಾಘನೀಯ ಕಾರ್ಯ. ವಿದ್ಯಾರ್ಥಿಗಳು ಮಾದಕ ವ್ಯಸನಕ್ಕೆ ಬಲಿಯಾಗಬಾರದು ಎಂದು ತಿಳಿಸಿದರು.

Jci Shimoga Sahyadri ಶಿವಮೊಗ್ಗ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಉಚಿತ ಸಲಹೆ, ಆಪ್ತ ಸಮಾಲೋಚನೆ ಚಿಕಿತ್ಸೆ ದೊರೆಯುತ್ತದೆ. ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಜೆಸಿಐ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...