Thursday, September 17, 2026
Thursday, September 17, 2026

Breaking News ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕುಗಳೂ ತೀವ್ರ ಬರಪೀಡಿತ ಪ್ರದೇಶ : ಸರ್ಕಾರಿ ಆದೇಶ

Date:

Breaking News

ಸರ್ಕಾರದ ಆದೇಶದ ಸಂಖ್ಯೆ ಕಂ. ಇ. 449 ಟಿ ಎನ್ ಆರ್ 2023, ಸೆಪ್ಟೆಂಬರ್ 13 ರ 2023ರ ಪ್ರಕಾರ ಕೇಂದ್ರ ಸರ್ಕಾರ ಬರ ನಿರ್ವಹಣಾ ಕೈಪಿಡಿ 2020 ರ ಘೋಷಣೆ ಮಾರ್ಗಸೂಚಿಯಂತೆ ಮಾನದಂಡಗಳ ಅನ್ವಯ ಜಿಲ್ಲಾಧಿಕಾರಿಗಳಿಂದ ಬೆಳೆ ಹಾನಿ ಸಮೀಕ್ಷೆಯ ವರದಿ ಅನುಸಾರವಾಗಿ 2023 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲೂಕುಗಳ ಪೈಕಿ, 195 ತಾಲೂಕಿನಲ್ಲಿ ಬರ ಪರಿಸ್ಥಿತಿ ಕಂಡುಬಂದಿದೆ.

ಈ ಪೈಕಿ 161 ತಾಲೂಕುಗಳನ್ನ ತೀವ್ರ ಬರಪೀಡಿತ ತಾಲೂಕುಗಳು ( ಅನುಬಂಧ -1) ಹಾಗೂ 34 ತಾಲ್ಲೂಕುಗಳನ್ನು ಸಾಧಾರಣ ಬರಪೀಡಿತ ತಾಲೂಕು (ಅನುಬಂಧ -2) ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆರು ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದ ವರೆಗೆ ಯಾವುದೋ ಮೊದಲು ಅಲ್ಲಿಯವರೆಗೂ ಘೋಷಿಸಿ ಆದೇಶಿಸಿದೆ. ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಬರ ನಿರ್ವಹಣೆಯ ಕಾರ್ಯಕ್ರಮಗಳನ್ನು ಕೈಗೊಳ್ಳಲು ಸರ್ಕಾರದಿಂದ ಕಾಲಕಾಲಕ್ಕೆ SDRF/ NDRF ನಿಯಮಗಳ ಅನ್ವಯ ಮಾರ್ಗಸೂಚಿಗಳನ್ನು ನೀಡಲಾಗುತ್ತದೆ ಎಂದು ಕಂದಾಯ ಇಲಾಖೆಯ 20 ನಿರ್ವಹಣೆ ಜಂಟಿ ಕಾರ್ಯದರ್ಶಿ ಟಿ.ಸಿ. ಕಾಂತರಾಜ್ ಅವರು ಆದೇಶ ಹೊರಡಿಸಿದ್ದಾರೆ.

Breaking News ಅನುಬಂಧ-1ರಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ಹೊಸನಗರ, ಸಾಗರ, ತೀರ್ಥಹಳ್ಳಿ, ಶಿಕಾರಿಪುರ, ಶಿವಮೊಗ್ಗ, ತಾಲೂಕುಗಳನ್ನ ಸೇರಿಸಿ, ತೀವ್ರ ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...