Saturday, December 6, 2025
Saturday, December 6, 2025

Samanvaya Trust Shivamogga ಶಿಕ್ಷಣ ಕಲಿತ ವಿದ್ಯಾರ್ಥಿಗಳು ಸಮಾಜದ ಪ್ರಗತಿಗೆಸೇವೆ ಸಲ್ಲಿಸಬೇಕು-ಸತ್ಯನಾರಾಯಣ

Date:

Samanvaya Trust Shivamogga ವಿದ್ಯಾರ್ಥಿಗಳು ಶಿಕ್ಷಣ ಚೆನ್ನಾಗಿ ಕಲಿತು ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬೇಕು. ಉನ್ನತ ಅಧಿಕಾರಿಗಳಾಗಿ ಸಮಾಜದ ಪ್ರಗತಿಗೆ ಸೇವೆ ಸಲ್ಲಿಸಬೇಕು ಎಂದು ಉಪ ವಿಭಾಗಾಧಿಕಾರಿ ಸತ್ಯನಾರಾಯಣ ಹೇಳಿದರು.

ಶಿವಮೊಗ್ಗ ತಾಲೂಕಿನ ಒಡ್ಡಿನಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮನ್ವಯ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ಸಮವಸ್ತ್ರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಕ್ಕಳಿಗೆ ಬಾಲ್ಯದಿಂದಲೇ ಉತ್ತಮ ಶಿಕ್ಷಣ ನೀಡುವ ಜತೆಯಲ್ಲಿ ಅವರ ಆಸಕ್ತಿ ಕ್ಷೇತ್ರಗಳನ್ನು ಶಿಕ್ಷಕರು ಹಾಗೂ ಪೋಷಕರು ಗುರುತಿಸುವ ಕೆಲಸ ಮಾಡಬೇಕು. ಸರಿಯಾದ ಮಾರ್ಗದರ್ಶನ ನೀಡುವ ಮೂಲಕ ದೊಡ್ಡ ಕನಸುಗಳನ್ನು ಕಂಡು ಸಾಕಾರಗೊಳಿಸಲು ಪ್ರೇರಣೆ ನೀಡಬೇಕು ಎಂದು ತಿಳಿಸಿದರು.

ಸಮನ್ವಯ ಟ್ರಸ್ಟ್ ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದ್ದು, ಸರ್ಕಾರಿ ಶಾಲೆ ಮಕ್ಕಳಿಗೆ ಮಾರ್ಗದರ್ಶನ ನೀಡುವ ಕೆಲಸ ಮಾಡುತ್ತಿದೆ. ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದರು.

Samanvaya Trust Shivamogga ಸಮನ್ವಯ ಟ್ರಸ್ಟ್ನ ಸಮನ್ವಯ ಕಾಶಿ ಮಾತನಾಡಿ, ನಮ್ಮ ಟ್ರಸ್ಟ್ ವತಿಯಿಂದ ಒಡ್ಡಿನಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ಸ್ವೀಕರಿಸಿದ್ದು, ಮಕ್ಕಳಿಗೆ ಸಮವಸ್ತ್ರ ವಿತರಿಸಲಾಗುತ್ತಿದೆ. ಶೈಕ್ಷಣಿಕ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಲು ವಿವಿಧ ರೀತಿ ತರಬೇತಿ ನೀಡಲಾಗುತ್ತಿದೆ. ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧಿಸಲು ಪ್ರೋತ್ಸಾಹಿಸುವ ಕೆಲಸ ಟ್ರಸ್ಟ್ ಮಾಡುತ್ತಿದೆ ಎಂದು ತಿಳಿಸಿದರು.

ಭದ್ರಾವತಿ ಬಿಇಒ ನಾಗೇಂದ್ರ, ಉಪ ತಹಸೀಲ್ದಾರ್ ಗಿರಿರಾಜ್, ಶಾಲೆಯ ಶಿಕ್ಷಕಿ ತ್ರಿವೇಣಿ, ಸಮನ್ವಯ ಟ್ರಸ್ಟ್ ವಿಜಯ್‌ಕುಮಾರ್, ಸಮನ್ವಯ ಟ್ರಸ್ಟ್ ಸ್ವಯಂ ಸೇವಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...