Sunday, April 19, 2026
Sunday, April 19, 2026

ಬೇಕು ಸ್ಪೀಡ್ ಬ್ರೇಕರ್- ಸಾಗರ ವಿದ್ಯಾರ್ಥಿ ಒಕ್ಕೂಟ

Date:

ಸಾಗರದ ವಿದ್ಯಾರ್ಥಿ ಒಕ್ಕೂಟದ ಪ್ರಮುಖರು ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಬರುವ ಶಾಲೆ-ಕಾಲೇಜುಗಳು ಎದುರಿನ ರಸ್ತೆಗೆ ಸ್ಪೀಡ್ ಬ್ರೇಕರ್ ಅಳವಡಿಸುವಂತೆ ಒತ್ತಾಯಿಸಿ ಉಪವಿಭಾಗಧಿಕಾರಿ ಮನವಿ ಸಲ್ಲಿಸಿದ್ದಾರೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಇಂದಿರಾ ಗಾಂಧಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಸರ್ಕಾರಿ ಪದವಿ ಪೂರ್ವ ಕಾಲೇಜು, ಎಲ್ ಬಿ ಇನ್ನು ಮುಂತಾದ ಕಾಲೇಜುಗಳ ಎದುರಿನ ರಸ್ತೆ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲೇ ಇದೆ. ವಿದ್ಯಾರ್ಥಿಗಳ ಗುಂಪು ಹೆಚ್ಚಿರುವ ಕಾರಣ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಮನವಿಯಲ್ಲಿ ಹೇಳಲಾಗಿದೆ.

ಹೆದ್ದಾರಿಗೆ ಹೊಂದಿಕೊಂಡಂತೆ ಕೆಲವು ಕಾಲೇಜುಗಳ ಎದುರಿನ ರಸ್ತೆ ಬರುವುದರಿಂದ ವಿದ್ಯಾರ್ಥಿಗಳು ರಸ್ತೆದಾಟಲು ತೊಂದರೆ ಉಂಟಾಗುತ್ತಿದೆ. ಹೆದ್ದಾರಿಯಲ್ಲಿ ವಾಹನ ಚಾಲಕರು ಮಿತಿಮೀರಿದ ವೇಗದಲ್ಲಿ ವಾಹನ ಚಲಾಯಿಸುತ್ತಿದ್ದಾರೆ. ಇದರಿಂದಾಗಿ ಕಾಲೇಜಿನ ಎದುರಿನ ರಸ್ತೆಗೆ ಸ್ಪೀಡ್ ಬ್ರೇಕರ್ ಅಳವಡಿಸುವುದು ಅಗತ್ಯವಾಗಿದೆ ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bhadravati Police ಭದ್ರಾವತಿಯಿಂದ ವ್ಯಕ್ತಿ ನಾಪತ್ತೆ, ಹಳೇನಗರ ಪೊಲೀಸ್ ಠಾಣೆ ಪ್ರಕಟಣೆ

Bhadravati Police ಭದ್ರಾವತಿ ಹಳೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್...

MESCOM ಏಪ್ರಿಲ್ 19. ಶಿವಮೊಗ್ಗ ದುರ್ಗಿಗುಡಿ‌ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ...

Sri Shankaracharya Jayanti ಏ.21ರಂದು ಶ್ರೀ ಶಂಕರಾಚಾರ್ಯ ಜಯಂತಿ

Sri Shankaracharya Jayanti ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ...