Thursday, June 18, 2026
Thursday, June 18, 2026

Cauvery Water Dispute ಕಾವೇರಿ ಹೋರಾಟಕ್ಕೆ ಬಿಜೆಪಿ & ಜೆಡಿಎಸ್ ಸಾಥ್: ಸೆ 26 ಬೆಂಗಳೂರು ಬಂದ್

Date:

Cauvery Water Dispute ಕರ್ನಾಟಕದಲ್ಲಿ ಕಾವೇರಿ ನೀರಿಗಾಗಿ ಹೋರಾಟ ತೀವ್ರವಾಗಿದೆ. ಬರ ಪರಿಸ್ಥಿತಿಯ ನಡುವೆಯೂ ಕೂಡ ಪ್ರತಿದಿನ 5000 ಕ್ಯೂಸೆಕ್ ನೀರು ಹರಿಸುವುದನ್ನ ಮುಂದುವರಿಸಬೇಕೆಂಬ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶವನ್ನು ಖಂಡಿಸಿ ಮತ್ತು ರಾಜ್ಯ ಸರ್ಕಾರದ ಧೋರಣೆಯನ್ನ ವಿರೋಧಿಸಿ ವಿವಿಧ ಸಂಘಟನೆಗಳು ಒಗ್ಗಟ್ಟಿನ ಹೋರಾಟಕ್ಕೆ ಮುಂದಾಗಿವೆ. ಇದರ ಹಿನ್ನಲೆಯಲ್ಲಿ ಸೆಪ್ಟೆಂಬರ್ 26ರಂದು ಬೆಂಗಳೂರಿನಲ್ಲಿ ಬಂದ್ ಗೆ ಕರೆ ನೀಡಲಾಗಿದೆ. ಈಗಾಗಲೇ ಕಾವೇರಿ ನೀರಿಗಾಗಿ ರೈತರ ಪ್ರತಿಭಟನೆ ಮತ್ತಷ್ಟು ಜೋರಾಗಿದೆ. ಸೆ. 23ರಂದು ಮಂಡ್ಯದಲ್ಲಿ ಬಂದ್ ಮಾಡಲಾಗಿತ್ತು. ಈ ಬಂದ್ ಗೆ ಉತ್ತಮ ಪ್ರತಿಕ್ರಿಯೆ ಕೂಡ ದೊರಕಿದೆ. ರಾಜ್ಯದ ರೈತರ ಅಳಿವು ಉಳಿವಿನ ಜೊತೆಗೆ ರಾಜಧಾನಿ ಬೆಂಗಳೂರಿಗೆ ಕುಡಿಯುವ ನೀರಿನ ಪ್ರಶ್ನೆಯೂ ಎದುರಾಗಿದೆ. ಹೋರಾಟಕ್ಕೆ Cauvery Water Dispute ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸಹ ಬೆಂಬಲ ನೀಡಿರುವ ಹಿನ್ನೆಲೆಯಲ್ಲಿ ಕಾವೇರಿ ಸಮರದ ಸ್ವರೂಪ ತೀವ್ರ ವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...