Thursday, March 19, 2026
Thursday, March 19, 2026

Gowri Ganesha Festival ಯುವಪೀಳಿಗೆಗೆ ನಮ್ಮ ಸಂಸ್ಕೃತಿ ಪರಂಪರೆ ಪರಿಚಯಿಸಬೇಕು- ವಿಜಯ್ ಕುಮಾರ್

Date:

Gowri Ganesha Festival ಜಾನಪದ ಸಂಸ್ಕೃತಿ ಸಾವಿರಾರು ವರ್ಷದ ಇತಿಹಾಸ ಹೊಂದಿದ್ದು, ನಮ್ಮ ಕಲೆ ಸಂಸ್ಕೃತಿ ಉಳಿಸುವ ಕಾರ್ಯ ಹಾಗೂ ಯುವ ಪೀಳಿಗೆಗೆ ಸಂಸ್ಕೃತಿ ಪರಂಪರೆ ಪರಿಚಯಿಸುವ ಅವಶ್ಯಕತೆ ಇದೆ ಎಂದು ರೋಟರಿ ಮಾಜಿ ಸಹಾಯಕ ಗವರ್ನರ್, ಗಾಯಕ ಜಿ.ವಿಜಯ್‌ಕುಮಾರ್ ಹೇಳಿದರು.

ಶಿವಮೊಗ್ಗದ ಬಸವೇಶ್ವರ ನಗರ 2ನೇ ಹಂತದಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಮಹಿಳೆಯರು, ಮಕ್ಕಳು ಹಾಗೂ ಪುರುಷರಿಗೆ ಹಮ್ಮಿಕೊಳ್ಳಲಾದ ವಿವಿಧ ಸ್ಪರ್ಧೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬಡಾವಣೆಯಲ್ಲಿ ಇಂತಹ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆಯುವುದರಿಂದ ಪರಸ್ಪರ ಒಡನಾಟ ವಿಶ್ವಾಸ ವೃದ್ಧಿಯಾಗುತ್ತದೆ. ಒಂದು ಒಳ್ಳೆಯ ಸಂಘಟನೆ ಬೆಳವಣಿಗೆ ಹೊಂದುತ್ತದೆ. ಸಂಘಟನೆಯಿಂದ ಬಡಾವಣೆಯ ಅಭಿವೃದ್ಧಿ ಕೆಲಸಗಳು ಸುಲಲಿತವಾಗಿ ಸಾಗುತ್ತದೆ. ಆದ್ದರಿಂದ ಮೊದಲು ನಮ್ಮ ನಮ್ಮ ಬಡಾವಣೆಗಳು ಸದೃಢ ಆಗಬೇಕು ಎಂದು ತಿಳಿಸಿದರು.

ಬಸವೇಶ್ವರ ನಗರ ಎರಡನೇ ಹಂತದ ನಿವಾಸಿಗಳ ಸಂಘದ ಅಧ್ಯಕ್ಷ ಜೇತೇಂದ್ರ ಮಾತನಾಡಿ, ಸಾಂಸ್ಕೃತಿಕ ಕಾರ್ಯಕ್ರಮಗಳು ನಮ್ಮ ವ್ಯಕ್ತಿತ್ವವನ್ನು ಬಿಂಬಿಸುತ್ತದೆ ಹಾಗೂ ಮಾನಸಿಕ ನೆಮ್ಮದಿ ತರುತ್ತದೆ. ಸಾರ್ವಜನಿಕರು ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚು ಭಾಗವಹಿಸಬೇಕು ಎಂದರು.

ಬಸವೇಶ್ವರ ನಗರ 2ನೆ ಹಂತದಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಆಯೋಜಿಸಿದ್ದ ಸಾಂಸ್ಕೃತಿಕ ಸ್ಪರ್ಧೆ, ಫ್ಯಾಶನ್ ಶೋ, ನೃತ್ಯ, ಹಾಡುಗಾರಿಕೆ, ಗ್ರಾಮೀಣ ಕನ್ನಡ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

Gowri Ganesha Festival ಇದೇ ಸಂದರ್ಭದಲ್ಲಿ ಜಿ.ವಿಜಯ್‌ಕುಮಾರ್ ಅವರು ಅನೇಕ ಜಾನಪದ ಗೀತೆಗಳು, ಹಳೆಯ ಚಿತ್ರಗೀತೆಗಳು, ತತ್ವಪದಗಳು, ಶಾಯಿರಿ ಹಾಗೂ ಜೋಕ್ಸ್ ಗಳಿಂದ ಅಪಾರ ಜನರನ್ನು ಮೆಚ್ಚಿಸಿದರು. ಬಡಾವಣೆ ಅಧ್ಯಕ್ಷರು ಕಾರ್ಯದರ್ಶಿ, ಪದಾಧಿಕಾರಿಗಳು ಜಿ.ವಿಜಯ್ ಕುಮಾರ್ ದಂಪತಿಗಳಿಗೆ ಅಭಿನಂದನೆ ಸಲ್ಲಿಸಿ ಗೌರವಿಸಿದರು.
ವೇದಿಕೆಯಲ್ಲಿ ಕಾರ್ಯದರ್ಶಿ ಬಸವರಾಜ್, ಭಜಂತ್ರಿ ಸುರೇಶ್, ನಿರ್ದೇಶಕರಾದ ಡಾ. ಶರತ್, ಡಾ. ಲಿಂಗರಾಜ್, ದೇವರಾಜ್, ಕೊಟ್ರೇಶ್, ರಾಜೇಶ್, ಪ್ರದೀಪ್, ರುದ್ರಪ್ಪ, ಡಾ. ಕಲ್ಲೇಶ್, ವಲ್ಸರಾಜ್, ಇನ್ನರ್ ವ್ಹೀಲ್ ಮಾಜಿ ಅಧ್ಯಕ್ಷೆ ಬಿಂದು ವಿಜಯ ಕುಮಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...