Wednesday, June 24, 2026
Wednesday, June 24, 2026

Cauvery Water Dispute 3000 ಕ್ಯೂಸೆಕ್ ನೀರು ಹರಿಸುವ ಆದೇಶ ,ಕರ್ನಾಟಕದ ಪಾಲಿಗೆ ಕರಾಳ ಶಾಸನ- ಬಿ.ವೈ.ವಿಜಯೇಂದ್ರ

Date:

Cauvery Water Dispute ಬದ್ಧತೆ, ಇಚ್ಛಾಶಕ್ತಿ ಇಲ್ಲದ ಸರ್ಕಾರವೊಂದು ಜನರ ಸಂಕಷ್ಟದೊಂದಿಗೆ ಹೇಗೆ ಚೆಲ್ಲಾಟವಾಡಬಹುದು ಎಂಬುದಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರ ಅತ್ಯುತ್ತಮ ಉದಾಹರಣೆಯಾಗಿದೆ ಎಂದು ಶಿಕಾರಿಪುರ ಶಾಸಕರಾದ ಬಿ ವೈ ವಿಜಯೇಂದ್ರ ಅವರು ಹೇಳಿದ್ದಾರೆ.

ಮಳೆ ಇಲ್ಲದೆ ಬೆಳೆ ಇಲ್ಲದೆ, ಕುಡಿಯುವ ನೀರಿಗೂ ಸಂಚಕಾರ ಬಂದೊದಗಿರುವ ಕಠೋರ ಪರಿಸ್ಥಿತಿಯನ್ನು ಕಾವೇರಿ ಜಲ ನಿಯಂತ್ರಣ ಸಮಿತಿಯ ಮುಂದೆ ಪರಿಣಾಮಕಾರಿಯಾಗಿ ಮನವರಿಕೆ ಮಾಡಿಕೊಡುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರ ‘ಗಾಯದ ಮೇಲೆ ಬರೆ’ ಎಳೆದಂತೆ ಮತ್ತೆ 3000 ಕ್ಯೂಸೆಕ್ ನೀರು ಬಿಡುವ ಆದೇಶ ಪಡೆದು ಕರ್ನಾಟಕದ ಪಾಲಿಕೆ ಕರಾಳ ಶಾಸನ ಬರೆಸಿಕೊಂಡಿದೆ ಎಂದು ತಿಳಿಸಿದ್ದಾರೆ.

Cauvery Water Dispute ಕರುನಾಡು ಉದ್ವಿಗ್ನ ಗೊಂಡಿದೆ, ಜನರ ಆಕ್ರೋಶ ಮುಗಿಲು ಮುಟ್ಟಿದೆ, ರೈತ ಬಂಧುಗಳು ಕಂಗಾಲಾಗಿದ್ದಾರೆ ಇಷ್ಟಾದರೂ ಕಾವೇರಿ ಉಳಿಸಲು ನ್ಯಾಯಾಂಗ ವ್ಯವಸ್ಥೆಯಲ್ಲಿ ಸಮರ್ಥವಾಗಿ ಹೋರಾಡಲು ಕನಿಷ್ಟ ಕಾಳಜಿಯೂ ತೋರದೇ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಉಡಾಫೆಯ ಮಾತನಾಡಿಕೊಂಡು ಕನ್ನಡಿಗರ ಕತ್ತು ಹಿಸುಕುತ್ತಿದ್ದಾರೆ, ಕಾವೇರಿ ಪರ ಹೋರಾಟವನ್ನು ಹತ್ತಿಕ್ಕುತ್ತಿದ್ದಾರೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...