Friday, February 6, 2026
Friday, February 6, 2026

ಗೈರುಹಾಜರಿಯಾದ ಸಂಸದರಿಗೆ ಪ್ರಧಾನಿ ಮೃದು ಚಾಟಿ

Date:

ಸಂಸತ್ ಅಧಿವೇಶನಕ್ಕೆ ಗೈರುಹಾಜರಾಗುವ ಸಂಸದರಿಗೆ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

‘ನೀವು ನಿಮ್ಮ ವರ್ತನೆಯನ್ನು ಬದಲಾಯಿಸಿಕೊಳ್ಳಿ. ಇಲ್ಲದೆ ಹೋದರೆ ಮುಂದಿನ ಚುನಾವಣೆಯಲ್ಲಿ ನಿಮ್ಮನ್ನು ಬದಲಿಸುತ್ತೇವೆ’ ಎಂದು ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ.

ಸಂಸದರಿಗೆ ಸ್ವಯಂ ಶಿಸ್ತು ಬೇಕು. ಅಧಿವೇಶನ ಒಂದು ಗಂಭೀರವಾದ ವಿಷಯ. ಕಲಾಪದಲ್ಲಿ ಪಾಲ್ಗೊಳ್ಳದೇ ಇರುವುದಕ್ಕಿಂತಲೂ ಮುಖ್ಯವಾದ ಕೆಲಸ ಸಂಸದರಿಗೆ ಮತ್ತೇನು ಇರುತ್ತದೆ. ಗೈರು ಆಗಬೇಡಿ ಎಂದು ಎಷ್ಟು ಬಾರಿ ಹೇಳಬೇಕು? ನೀವು ಸಣ್ಣ ಮಕ್ಕಳಲ್ಲ, ಸಂಸದರು. ಪ್ರಸ್ತುತ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ನೀವು ಬದಲಾಗಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ನಿಮ್ಮನ್ನು ಬದಲಿಸಲಾಗುತ್ತದೆ ಪ್ರಧಾನಿ ಎಚ್ಚರಿಕೆ ಸಂದೇಶವನ್ನು ಬಿಜೆಪಿ ಸಂಸದರರೊಬ್ಬರಿಗೆ ಹೇಳಿದ್ದಾರೆ.

ಅಧಿವೇಶನಕ್ಕೆ ಸಂಸದರೆಲ್ಲರೂ ಹಾಜರಾಗಿ ಚರ್ಚೆಯಲ್ಲಿ ಪಾಲ್ಗೊಳ್ಳಬೇಕು ಎಂದು ಎಲ್ಲಾ ಪಕ್ಷಗಳು ಫರ್ಮಾನು
ಹೊರಡಿಸುತ್ತವೆ. ಆದರೂ ಅನೇಕ ಸಂಸದರು ಒಂದಲ್ಲ ಒಂದು ಕಾರಣಕ್ಕೆ ಗೈರು ಹಾಜರಾಗುತ್ತಿದ್ದಾರೆ. ಇದಕ್ಕೆ ಆಡಳಿತಾರೂಢ ಬಿಜೆಪಿ ಸಂಸದರೂ ಹೊರತಲ್ಲ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ambedkar Bhavan Shivamogga ಫೆಬ್ರವರಿ 14. ” ಹ್ಯಾಪಿ ಫೀಟ್- 2026″ ವಿಶೇಷ ನೃತ್ಯ ಪ್ರದರ್ಶನ

Ambedkar Bhavan Shivamogga ನೃತ್ಯಸಿರಿ ಡ್ಯಾನ್ಸ್ ಸ್ಟುಡಿಯೋ ವತಿಯಿಂದ “ಹ್ಯಾಪಿ ಫೀಟ್-2026”...

Dharmasthala Rural Development Project ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ವಾತ್ಸಲ್ಯ ಕಿಟ್ ವಿತರಣೆ

Dharmasthala Rural Development Project ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ...

ಕರವೇ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ

ಕನ್ನಡ ರಕ್ಷಣಾ ವೇದಿಕೆ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಅಧಿಕಾರದ ಪ್ರಮಾಣ...