Friday, April 3, 2026
Friday, April 3, 2026

Scout and Guide ಜೀವನ ಮೌಲ್ಯಗಳ ಬೆಳವಣಿಗೆಗೆ ಸ್ಕೌಟ್ ಸಹಕಾರಿ- ಪಿ.ಜಿ.ಆರ್.ಸಿಂಧ್ಯಾ

Date:

Scout and Guide ಉತ್ತಮ ವ್ಯಕ್ತಿತ್ವ ನಿರ್ಮಾಣ ಮಾಡುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಹಕಾರಿ. ಪ್ರತಿಯೊಂದು ಮನೆಯಲ್ಲೂ ಮಕ್ಕಳಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ಕಲಿಸಲು ಪೋಷಕರು ಮುಂದಾಗಬೇಕು. ಸ್ಕೌಟ್ಸ್ ಮತ್ತು ಗೈಡ್ಸ್ ಚಳವಳಿಯಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಅವರು ಹೇಳಿದರು.

ಶಿವಮೊಗ್ಗ ನಗರದ ಬಿಎಚ್ ರಸ್ತೆಯಲ್ಲಿರುವ ಜಿಲ್ಲಾ ಸ್ಕೌಟ್ ಭವನದಲ್ಲಿ ಆಯೋಜಿಸಿದ್ದ ಅಧಿಕಾರಿಗಳ ಅಭಿವೃದ್ಧಿ ಸಮಾಲೋಚನಾ ಸಭೆಯಲ್ಲಿ ಮಾತನಾಡಿ, ಸ್ಕೌಟ್ ಮತ್ತು ಗೈಡ್ ಚಳವಳಿ ಅಂತರಾಷ್ಟ್ರೀಯ ಯುವ ಸಂಘಟನೆ ನಾಲ್ಕು ಕೋಟಿಗೂ ಮೀರಿದ್ದು, ಪ್ರಪಂಚದ 216 ದೇಶಗಳಲ್ಲಿ ತನ್ನ ಅಸ್ತಿತ್ವ ಹೊಂದಿದೆ ಎಂದು ತಿಳಿಸಿದರು.

ಯುವ ಸಮುದಾಯಕ್ಕೆ ಸಾಮಾಜಿಕ ಹೊಣೆಗಾರಿಕೆ ಹಾಗೂ ಜೀವನ ಮೌಲ್ಯಗಳ ಬೆಳವಣಿಗೆಗೆ ಸ್ಕೌಟ್ ಸಂಪೂರ್ಣ ಸಹಕಾರಿಯಾಗುತ್ತದೆ. ಸ್ಕೌಟ್ ಮತ್ತು ಗೈಡ್ ಚಳವಳಿಯನ್ನು ಉತ್ತಮ ರೀತಿಯಲ್ಲಿ ಸಮಾಜದಲ್ಲಿ ಮುನ್ನಡೆಸಬೇಕು ಎಂದರು.

ಶಿವಮೊಗ್ಗ ಜಿಲ್ಲಾ ಭಾರತ್ ಸ್ಕೌಟ್ ಮತ್ತು ಗೈಡ್ ಮುಖ್ಯ ಆಯುಕ್ತ ಎಚ್.ಡಿ.ರಮೇಶ್ ಶಾಸ್ತ್ರೀ ಮಾತನಾಡಿ, ಶಾಲೆ ಮತ್ತು ಮನೆಯ ಶಿಕ್ಷಣ ಜತೆಯಲ್ಲಿ ಜೀವನಕ್ಕೆ ಅವಶ್ಯವಿರುವ ಮೌಲ್ಯಗಳನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಕಲಿಸುತ್ತದೆ. ಯುವಜನರಿಗೆ ಪರಿಣಾಮಕಾರಿಯಾಗಿ ತಲುಪಿಸಬೇಕಿದೆ. ರಾಜ್ಯ ಶಾಖೆಯ ಅನುಮತಿಯೊಂದಿಗೆ ಎಲ್ಲ ಅಧಿಕಾರಿಗಳ ಸಹಕಾರದಿಂದ ಶಿವಮೊಗ್ಗ ಶಾಖೆಯಿಂದ ಉತ್ತಮ ಕೆಲಸ ನಡೆಸುತ್ತಿದೆ ಎಂದು ಹೇಳಿದರು.

Scout and Guide ಜಿಲ್ಲಾ ಸ್ಕೌಟ್ ಆಯುಕ್ತ ಕೆ.ಪಿ.ಬಿಂದುಕುಮಾರ್, ಜಿಲ್ಲಾ ಕಾರ್ಯದರ್ಶಿ ಎಚ್.ಪರಮೇಶ್ವರ್, ಜಿಲ್ಲಾ ಜಂಟಿ ಕಾರ್ಯದರ್ಶಿ ವೈ.ಆರ್.ವೀರೇಶಪ್ಪ, ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭಾರತಿ ಡಯಾಸ್, ಸ್ಥಳಿಯ ಸಂಸ್ಥೆ ಕಾರ್ಯದರ್ಶಿ ರಾಜೇಶ ವಿ ಅವಲಕ್ಕಿ, ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯ್‌ಕುಮಾರ್, ಜಿಲ್ಲಾ ಖಜಾಂಚಿ ಚೂಡಾಮಣಿ ಪವಾರ್, ದೇವಪ್ಪ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Hanuman Jayanti ಪಾರಂಪರಿಕ ಶ್ರದ್ದಾಭಕ್ತಿಗಳಿಂದ ದಾವಣಗೆರೆಯಲ್ಲಿ ಹನುಮ ಜಯಂತಿ

Hanuman Jayanti  ದಾವಣಗೆರೆ.ಏ.2. ನಗರದ ಜಯದೇವ ವೃತ್ತದಲ್ಲಿರುವ ಅಧ್ಯಾತ್ಮ ಮಂದಿರದಲ್ಲಿ ಶ್ರೀ...

Shivamogga Minority Welfare Department ಜಿಲ್ಲೆಯಲ್ಲಿನ ಬೌದ್ಧವಿಹಾರಗಳ ಧಮ್ಮಾಚಾರಿಗಳಿಗೆ ಮಾಸಿಕ ಗೌರವಧನ ಬಗ್ಗೆ ಸರ್ಕಾರದ ಪ್ರಕಟಣೆ.

Shivamogga Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ...

Sandalwood Trees ಶಿವಮೊಗ್ಗದ ಎಲ್ ಬಿ ಎಸ್ ನಗರದಲ್ಲಿ ಶ್ರೀಗಂಧ ಮರ ಕಡಿತಲೆ. ಕ್ರಮ ಕೈಗೊಳ್ಳಲು ನಿವಾಸಿಗಳ ಆಕ್ರೋಶ.

Sandalwood Trees ಶಿವಮೊಗ್ಗ ಎಲ್‌ಬಿಎಸ್ ನಗರದಲ್ಲಿರುವ ಶ್ರೀ ಚೌಡೇಶ್ವರಿ ದೇವಾಲಯದ ಆವರಣದಲ್ಲಿದ್ದ...

Shivaganga Yoga Center ಪ್ರತಿಯೊಬ್ಬರಿಗೂ ಧ್ಯಾನ ಮತ್ತು ಯೊಇಗ್ದ ಅವಶ್ಯಕತೆ ಇದೆ- ಎಸ್.ಎಸ್.ಜ್ಯೋತಿಪ್ರಕಾಶ್

Shivaganga Yoga Center ಶಿವಮೊಗ್ಗದ ವಿನೋಬನಗರ -ಕಾಶಿಪುರದ ಕಲ್ಲಳ್ಳಿ ಶ್ರೀ ಶಿವಗಂಗಾ ಯೋಗ...