Thursday, March 19, 2026
Thursday, March 19, 2026

CM Siddharamaih ಶಾಲೆಯ ಸನಿಹ ತಂಬಾಕು ಮಾರಾಟ ವಿಷಯ ತಿಳಿಸಿ ಪತ್ರ ಮುಖೇನ ಸಿಎಂ ಗಮನ ಸೆಳೆದ ಬಾಲಕಿ ಅಯಾರ

Date:

CM Siddharamaih ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕು ಕೈಕಂಬದ 3ನೇ ತರಗತಿಯಲ್ಲಿ ಓದುವ ಪುಟ್ಟ ಬಾಲಕಿ ಅಯಾರ ತನ್ನ ಶಾಲೆಯ ಸಮೀಪದ ಅಂಗಡಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರುತ್ತಿದ್ದಾರೆ, ಇದನ್ನು ನಿಲ್ಲಿಸಬೇಕು ಎಂದು ನಮಗೆ ಪತ್ರ ಬರೆದು ಮನವಿ ಮಾಡಿದ್ದಳು.

ಬಾಲಕಿಯ ಸಮಸ್ಯೆ ಚಿಕ್ಕದಾದರೂ ಕಾನೂನಿನ ಬಗ್ಗೆ ಆಕೆಗಿರುವ ಅರಿವು ಮತ್ತು ಅಕ್ರಮದ ವಿರುದ್ಧ ಧ್ವನಿಯೆತ್ತುವ ಧೈರ್ಯ ಕಂಡು ಖುಷಿಯಾಯಿತು. ಬಾಲಕಿಯ ಪತ್ರ ತಲುಪಿದ ಕೆಲವೇ ಕೆಲವು ಗಂಟೆಗಳ ಒಳಗೆ ನಮ್ಮ ಕಚೇರಿಯ ಸಾರ್ವಜನಿಕ ಕುಂದುಕೊರತೆಗಳ ವಿಭಾಗದ ವಿಶೇಷಾಧಿಕಾರಿಗಳು ಸಮಸ್ಯೆಯನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದ್ದಾರೆ.

CM Siddharamaih ಕೂಡಲೆ ಅಧಿಕಾರಿಗಳ ತಂಡ ಅಕ್ರಮವಾಗಿ ತಂಬಾಕು ಉತ್ಪನ್ನಗಳನ್ನು ಮಾರುತ್ತಿದ್ದ ಸ್ಥಳಕ್ಕೆ ತೆರಳಿ, ತಪ್ಪಿತಸ್ಥನಿಗೆ ದಂಡ ವಿಧಿಸಿ, ಎಚ್ಚರಿಕೆ ನೀಡಿದೆ.

ಬಾಲಕಿಯ ಕೋರಿಕೆ ಚಿಕ್ಕದಾದರೂ ಸರ್ಕಾರ ತಮ್ಮ ಅಹವಾಲನ್ನೂ ಆಲಿಸಿ, ಸಮಸ್ಯೆ ಬಗೆಹರಿಸುತ್ತದೆ ಎಂಬ ವಿಶ್ವಾಸ ಮಕ್ಕಳಲ್ಲಿ ಬಂದರೆ ತಮ್ಮ ಸುತ್ತಮುತ್ತ ನಡೆಯುವ ಅಕ್ರಮ, ಅನ್ಯಾಯಗಳನ್ನು ಖಂಡಿಸುತ್ತಾರೆ. ಅವರಲ್ಲಿ ಈ ಆತ್ಮಸ್ಥೈರ್ಯ ತುಂಬುವುದು ನಮ್ಮ ಜವಾಬ್ದಾರಿಯಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...