Friday, February 6, 2026
Friday, February 6, 2026

ಸಾಮಾಜಿಕ ಜಾಲತಾಣ: ಯುವಜನರೇ ಜಾಗೃತೆ ವಹಿಸಿ

Date:

ಯುವಕ-ಯುವತಿಯರನ್ನು ಮೋಸಗೊಳಿಸಲು ಸಮಾಜದಲ್ಲಿ ಲೆಕ್ಕವಿಲ್ಲದಷ್ಟು ಮೋಸಗಾರರು ಹುಟ್ಟಿಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಯುವತಿಯರನ್ನು ಅವರ ಗಮನಕ್ಕೆ ಬರದೇ ಸಂಪರ್ಕಿಸುತ್ತಿದ್ದಾರೆ. ಮೋಸದ ಬಲೆಗೆ ಸೆಳೆಯುತ್ತಿದ್ದಾರೆ. ಇದರ ಬಗ್ಗೆ ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಕೋಟಿ ಪೊಲೀಸ್ ಠಾಣೆಯ ಡಿವೈಎಸ್ ಪಿ ಗಜಾನನ ಸುತಾರಾ ಸಲಹೆ ನೀಡಿದ್ದಾರೆ.
ಶಿವಮೊಗ್ಗದ ಕಮಲಾ ನೆಹರು ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ಸ್ವಯಂ ರಕ್ಷಣೆ ಕುರಿತು ಅರಿವು ಕಾರ್ಯಕ್ರಮವನ್ನು ಡಿವೈಎಸ್ಪಿ ಗಜಾನನ ಅವರು ಉದ್ಘಾಟಿಸಿದರು.
ಸೈಬರ್ ಅಪರಾಧದ ಕಡಿವಾಣಕ್ಕೆ ಸಂಬಂಧಿಸಿದ ಸರ್ಕಾರಗಳು ಹತ್ತು ಹಲವು ಕಾನೂನುಗಳನ್ನು ಜಾರಿಗೆ ತಂದಿದೆ. ಆದರೂ ಕಾನೂನುಗಳ ಕೆಳಗೆ ನುಸುಳಿ ಸೈಬರ್ ಕ
ಖದೀಮರು ಜನರನ್ನು ಯಾಮಾರಿಸುತ್ತಿದ್ದಾರೆ. ಅಪರಿಚಿತರಿಗೆ ಯಾವುದೇ ಓಟಿಪಿ, ಆಧಾರ್ ಕಾರ್ಡ್ ಸಂಖ್ಯೆ, ಈ ತಿಂಗಳ ಮಾಹಿತಿ ನೀಡದಂತೆ ಮಾಹಿತಿ ನೀಡಿದರು.
ಅಭಿವೃದ್ಧಿ ಹೊಂದುತ್ತಿರುವ ವಿಜ್ಞಾನ-ತಂತ್ರಜ್ಞಾನದ ಸಮಾಜದಲ್ಲಿ ಕಾಲೇಜು ಯುವತಿಯರು ಅತ್ಯಂತ ಜಾಗೃತರಾಗಿ ಸ್ಪಂದಿಸಬೇಕು ಎಂದು ಎಚ್ಚರಿಸಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ. ಎಚ್‌.ಎಸ್. ನಾಗಭೂಷಣ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮಾಧಿಕಾರಿ ಡಾ. ಬಾಲಕೃಷ್ಣ ಹೆಗಡೆ, ವಿ. ದೀಪಿಕಾ, ಐಕ್ಯೂಎಸಿ ಸಂಯೋಜಕ ಡಾ.ಓಂಕಾರಪ್ಪ, ಎನ್.ನಾಗವೇಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ambedkar Bhavan Shivamogga ಫೆಬ್ರವರಿ 14. ” ಹ್ಯಾಪಿ ಫೀಟ್- 2026″ ವಿಶೇಷ ನೃತ್ಯ ಪ್ರದರ್ಶನ

Ambedkar Bhavan Shivamogga ನೃತ್ಯಸಿರಿ ಡ್ಯಾನ್ಸ್ ಸ್ಟುಡಿಯೋ ವತಿಯಿಂದ “ಹ್ಯಾಪಿ ಫೀಟ್-2026”...

Dharmasthala Rural Development Project ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ವಾತ್ಸಲ್ಯ ಕಿಟ್ ವಿತರಣೆ

Dharmasthala Rural Development Project ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ...

ಕರವೇ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ

ಕನ್ನಡ ರಕ್ಷಣಾ ವೇದಿಕೆ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಅಧಿಕಾರದ ಪ್ರಮಾಣ...