Monday, December 8, 2025
Monday, December 8, 2025

ಸಾಮಾಜಿಕ ಜಾಲತಾಣ: ಯುವಜನರೇ ಜಾಗೃತೆ ವಹಿಸಿ

Date:

ಯುವಕ-ಯುವತಿಯರನ್ನು ಮೋಸಗೊಳಿಸಲು ಸಮಾಜದಲ್ಲಿ ಲೆಕ್ಕವಿಲ್ಲದಷ್ಟು ಮೋಸಗಾರರು ಹುಟ್ಟಿಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಯುವತಿಯರನ್ನು ಅವರ ಗಮನಕ್ಕೆ ಬರದೇ ಸಂಪರ್ಕಿಸುತ್ತಿದ್ದಾರೆ. ಮೋಸದ ಬಲೆಗೆ ಸೆಳೆಯುತ್ತಿದ್ದಾರೆ. ಇದರ ಬಗ್ಗೆ ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಕೋಟಿ ಪೊಲೀಸ್ ಠಾಣೆಯ ಡಿವೈಎಸ್ ಪಿ ಗಜಾನನ ಸುತಾರಾ ಸಲಹೆ ನೀಡಿದ್ದಾರೆ.
ಶಿವಮೊಗ್ಗದ ಕಮಲಾ ನೆಹರು ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ಸ್ವಯಂ ರಕ್ಷಣೆ ಕುರಿತು ಅರಿವು ಕಾರ್ಯಕ್ರಮವನ್ನು ಡಿವೈಎಸ್ಪಿ ಗಜಾನನ ಅವರು ಉದ್ಘಾಟಿಸಿದರು.
ಸೈಬರ್ ಅಪರಾಧದ ಕಡಿವಾಣಕ್ಕೆ ಸಂಬಂಧಿಸಿದ ಸರ್ಕಾರಗಳು ಹತ್ತು ಹಲವು ಕಾನೂನುಗಳನ್ನು ಜಾರಿಗೆ ತಂದಿದೆ. ಆದರೂ ಕಾನೂನುಗಳ ಕೆಳಗೆ ನುಸುಳಿ ಸೈಬರ್ ಕ
ಖದೀಮರು ಜನರನ್ನು ಯಾಮಾರಿಸುತ್ತಿದ್ದಾರೆ. ಅಪರಿಚಿತರಿಗೆ ಯಾವುದೇ ಓಟಿಪಿ, ಆಧಾರ್ ಕಾರ್ಡ್ ಸಂಖ್ಯೆ, ಈ ತಿಂಗಳ ಮಾಹಿತಿ ನೀಡದಂತೆ ಮಾಹಿತಿ ನೀಡಿದರು.
ಅಭಿವೃದ್ಧಿ ಹೊಂದುತ್ತಿರುವ ವಿಜ್ಞಾನ-ತಂತ್ರಜ್ಞಾನದ ಸಮಾಜದಲ್ಲಿ ಕಾಲೇಜು ಯುವತಿಯರು ಅತ್ಯಂತ ಜಾಗೃತರಾಗಿ ಸ್ಪಂದಿಸಬೇಕು ಎಂದು ಎಚ್ಚರಿಸಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ. ಎಚ್‌.ಎಸ್. ನಾಗಭೂಷಣ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮಾಧಿಕಾರಿ ಡಾ. ಬಾಲಕೃಷ್ಣ ಹೆಗಡೆ, ವಿ. ದೀಪಿಕಾ, ಐಕ್ಯೂಎಸಿ ಸಂಯೋಜಕ ಡಾ.ಓಂಕಾರಪ್ಪ, ಎನ್.ನಾಗವೇಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddaramaiah ವಿಧಾನಸಭೆ ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿ ಸಜ್ಜು.

CM Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಳಿಗಾಲದ ಅಧಿವೇಶನದ ಪ್ರಯುಕ್ತ ಸುವರ್ಣ...

Shimoga News ಜೀವರಕ್ಷಣಾ ಕೌಶಲ್ಯವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು- ಸೀಮಾ ಆನಂದ್

Shimoga News ಜೀವ ರಕ್ಷಿಸುವ ಕೌಶಲ್ಯವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳುವುದು ಅತ್ಯಂತ...

Gurudutt Hegde ಧ್ವಜವಂತಿಗೆ ನೀಡುವ ಮೂಲಕ ನಿವೃತ್ತ ಸೈನಿಕರಿಗೆ & ಅವರ ಅವಲಂಬಿತರಿಗೆ ನೆರವಾಗೋಣ- ಗುರುದತ್ತ ಹೆಗಡೆ

Gurudutt Hegde ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಿದ ಸೈನಿಕರನ್ನು ಗೌರವಿಸುವ ಉದ್ದೇಶದಿಂದ...

D S Arun ರಾಜ್ಯ ಕ್ರಿಕೆಟ್ ಸಂಸ್ಥೆಯ ನಿರ್ದೇಶಕರಾಗಿ ಶಾಸಕ ಡಿ.ಎಸ್.ಅರುಣ್ ಆಯ್ಕೆ.

D S Arun ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಶಿವಮೊಗ್ಗ ವಲಯ...