MP Raghavendra ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಹಬ್ಬದ ಮೆರವಣಿಗೆಯಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ . ಪ್ರಕರಣದ ಸಂಬಂಧ ಶಿವಮೊಗ್ಗದಲ್ಲಿ ಸೆಕ್ಷನ್ 144 ಜಾರಿಯಾಗಿದೆ.
ಗಲಭೆಯ ಹಿನ್ನೆಲೆಯಲ್ಲಿ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಕೋಮುಗಲಭೆಯಲ್ಲಿ ಬೇಳೆ ಬೇಯಿಸಿಕೊಳ್ಳುವ ಕೆಲಸವನ್ನು ಯಾರೂ ಮಾಡಬಾರದು.
ನೆನ್ನೆ ಶಿವಮೊಗ್ಗದ ಕೆಲವು ಪ್ರದೇಶಗಳಲ್ಲಿ ನಡೆದ ಈದ್ ಆಚರಣೆಯ ವೇಳೆ ಕೆಲವು ಕಿಡಿಗೇಡಿಗಳು ಕೋಮು ಸೌಹಾರ್ದ ಹಾಳುಗೆಡವುವಂಥ ಕೃತ್ಯ ನಡೆಸಿದ್ದಾರೆ. ಅಂಥವರನ್ನು ಕೂಡಲೇ ಬಂಧಿಸಬೇಕು, ಅವರು ಯಾವ ಧರ್ಮದವರೇ ಆದರೂ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ.
MP Raghavendra ಕೋಮು ಸೌಹಾರ್ದ ಪದೇಪದೆ ಕದಡದೆ ಇರುವ ಹಾಗೆ ಒಂದು ಶಾಶ್ವತ ಪರಿಹಾರ ಕಂಡುಕೊಳ್ಳುವುದೂ ತುಂಬಾ ಅವಶ್ಯಕ ಎಂದು ತಿಳಿಸಿದ್ದಾರೆ.