Thursday, September 17, 2026
Thursday, September 17, 2026

CM Siddharamaih ಶಿವಮೊಗ್ಗ ಗಲಾಟೆಗೆ ಕಾರಣರಾದ 43 ದುಷ್ಕರ್ಮಿಗಳನ್ನ ಬಂಧಿಸಿ ಮೊಕದ್ದಮೆ ಕ್ರಮ ನಡೆಸಲಾಗಿದೆ – ಸಿದ್ಧರಾಮಯ್ಯ

Date:

CM Siddharamaih ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಹಬ್ಬದ ಮೆರವಣಿಗೆಯಲ್ಲಿ ಎರಡು ಗುಂಪುಗಳ ನಡುವೆ ಗಲಭೆ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿಕ್ರಿಯೆ ನೀಡಿದ್ದಾರೆ.

ಯಾವುದೇ ಧಾರ್ಮಿಕ ಕಾರ್ಯಕ್ರಮಕ್ಕೆ ಧಕ್ಕೆ ತರುವುದು, ಕಲ್ಲು ತೂರುವುದು ಕಾನೂನು ಬಾಹಿರ. ಇಂಥ ಚಟುವಟಿಕೆಗಳನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ, ಇಂತಹ ಕೃತ್ಯಗಳನ್ನು ಖಂಡಿತಾ ಹತ್ತಿಕ್ಕುತ್ತೇವೆ.

CM Siddharamaih ಶಿವಮೊಗ್ಗ ನಗರ ಸಂಪೂರ್ಣ ನಿಯಂತ್ರಣದಲ್ಲಿದೆ. ಪೊಲೀಸರು ಕ್ಷಿಪ್ರ ಕ್ರಮ ಕೈಗೊಂಡಿದ್ದರಿಂದ ನಗರದಲ್ಲಿ ಶಾಂತಿ ನೆಲೆಸಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ.

ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆಯಲ್ಲಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರ ಮೇಲೂ ಕಲ್ಲು ಎಸೆದಿದ್ದು, ಅನಿವಾರ್ಯವಾಗಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಗಲಾಟೆಗೆ ಕಾರಣಕರ್ತರಾಗಿರುವ 43 ದುಷ್ಕರ್ಮಿಗಳನ್ನು ಬಂದಿಸಿದ್ದು ಅವರ ಮೇಲೆ ಮೊಕದ್ದಮೆಗಳನ್ನು ಹೂಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...