Thursday, March 19, 2026
Thursday, March 19, 2026

Youth Hostel Association of India ಚಾರಣ ಬದುಕಿನಲ್ಲಿ ವಿಶೇಷ ಅನುಭವ ನೀಡುತ್ತದೆ ಎಸ್.ಎಸ್.ವಾಗೇಶ್

Date:

Youth Hostel Association of India ಕನ್ನಡ ನಾಡಿನಲ್ಲಿ ಅನೇಕ ಪವಿತ್ರ ಸ್ಥಳಗಳಿದ್ದು, ಪ್ರವಾಸಕ್ಕಾಗಿ ಕರ್ನಾಟಕ ರಾಜ್ಯದಲ್ಲಿ ನೂರಾರು ಪ್ರಸಿದ್ಧ ಸ್ಥಳಗಳಿವೆ. ಕೊಲ್ಲೂರು ಸಮೀಪ ಇರುವ ಬೆಳಕಲ್ ತೀರ್ಥ ಆಧ್ಯಾತ್ಮಿಕ ಸ್ಥಳವಾಗಿದೆ ಎಂದು ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾ ತರುಣೋದಯ ಘಟಕ ಅಧ್ಯಕ್ಷ ಎಸ್.ಎಸ್.ವಾಗೇಶ್ ಹೇಳಿದರು.

ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾ ತರುಣೋದಯ ಘಟಕದಿಂದ ಶಿವಮೊಗ್ಗ ನಗರದಿಂದ ಆಯೋಜಿಸಿದ್ದ ಚಾರಣಕ್ಕೆ ಚಾಲನೆ ನೀಡಿ ಮಾತನಾಡಿ, ಮಳೆ, ನದಿ, ತೊರೆ, ಕಾಡು, ಪ್ರಕೃತಿಯೊಂದಿಗೆ ಬೆರೆತು ನಡೆದಾಡುವ ಚಾರಣ ಬದುಕಿನಲ್ಲಿ ವಿಶೇಷ ಅನುಭವ ನೀಡುತ್ತದೆ. ಇದರಿಂದ ಮನಸ್ಸು ಸಂತೋಷಗೊಂಡು ಹೊಸ ಹುಮ್ಮಸ್ಸು ದೊರೆಯುತ್ತದೆ ಎಂದು ತಿಳಿಸಿದರು.

ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾ ರಾಜ್ಯ ಮಾಜಿ ಉಪಾಧ್ಯಕ್ಷ ಜಿ. ವಿಜಯ ಕುಮಾರ್ ಮಾತನಾಡಿ, ಹೊಸ ಹೊಸ ಸ್ನೇಹಿತರನ್ನು ಇಂದಿನ ದಿನಗಳಲ್ಲಿ ಹೊಂದಲು ಚಾರಣ ಉತ್ತಮ ಮಾರ್ಗ. ಸ್ನೇಹದ ಸವಿ ಜೇನಿಗಿಂತ ಹೆಚ್ಚು ಅದನ್ನು ಸವಿದವರಿಗೆ ಗೊತ್ತಿರುತ್ತದೆ. ಚಾರಣದಿಂದ ದೇಹ ಮನಸ್ಸು ಸದೃಢ ಆಗುತ್ತದೆ ಎಂದು ಹೇಳಿದರು.

Youth Hostel Association of India ಕಾರ್ಯದರ್ಶಿ ಸುರೇಶ್ ಕುಮಾರ್ ಮಾತನಾಡಿ, ದೇಹ ದಂಡಿಸಿದರೆ ಪ್ರಕೃತಿಯ ಹಲವಾರು ವಿಸ್ಮಯ ಕಾಣಲು ಸಾಧ್ಯ. ಪ್ರತಿಯೊಬ್ಬರು ಕಾಲ ಕಾಲಕ್ಕೆ ಚಾರಣದಂತಹ ಪ್ರಕ್ರಿಯೆಗಳಲ್ಲಿ ಪಾಲ್ಗೊಳ್ಳಬೇಕು. ಇದರಿಂದ ಹೆಚ್ಚು ಜನರ ಓಡನಾಟದ ಜತೆಯಲ್ಲಿ ಮನನಸ್ಸಿಗೆ ಸಂತೋಷ ಸಿಗುತ್ತದೆ ಎಂದು ತಿಳಿಸಿದರು.

ಕೆಲ ಶತಮಾನಗಳ ಹಿಂದೆ ಜಲಪಾತದ ಸಮೀಪ ಪೂರ್ವಜರು ನಿರ್ಮಿಸಿದ ದೇವಸ್ಥಾನಕ್ಕೆ ಹೋಗಿ ಬರುವ ದಾರಿ ದುರ್ಗಮ ವಾಗಿರುವುದರಿಂದ ಪ್ರತಿ ದಿನ ಹೋಗಿ ಪೂಜೆ ಮಾಡಲು ಸಾಧ್ಯವಾಗಿಲ್ಲ. ಊರಿನ ಸಮೀಪ ದೇವಸ್ಥಾನ ವರ್ಗಾಯಿಸಿ ಮೂಲ ಸ್ಥಾನಕ್ಕೆ ವರ್ಷಕ್ಕೊಮ್ಮೆ ಜಾತ್ರೆ ಮಾಡಿ ಊರಿನ ಎಲ್ಲರೂ ಭಾಗವಹಿಸುತ್ತಾರೆ. ಸಹ್ಯಾದ್ರಿ ಮಡಿಲಿನ ಬೆಟ್ಟದ ಸಾಲಿನ ತುಟ್ಟ ತುದಿಯಿಂದ ಧುಮುಕುವ ಜಲಪಾತ ನೋಡುವುದು ವಿಶೇಷ ಅನುಭವ.
ಕೊಲ್ಲೂರಿನ ಸಮೀಪಕ್ಕೆ ಆಯೋಜಿಸಿದ್ದ ಚಾರಣದಲ್ಲಿ 77 ಚಾರಣಿಗರು ಪಾಲ್ಗೊಂಡಿದ್ದರು. ನಿರ್ದೇಶಕರಾದ ಮಲ್ಲಿಕಾರ್ಜುನ ಕಾನೂರು, ಭಾರತಿ ಗುರುಪಾದಪ್ಪ, ನಾಗರಾಜ್, ಮಮತಾ, ರೇವಣ್ಣ, ಪೂರ್ಣಿಮಚಂದ್ರಶೇಖರ್, ವೇಣುಗೋಪಾಲ್, ಉಮೇಶ್, ಮುಂತಾದವರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...