Thursday, March 19, 2026
Thursday, March 19, 2026

Siddaramaiah ಕಲುಷಿತ ಕುಡಿಯುವ ನೀರಿನ ಸರಬರಾಜಾದರೆ ಅನಾಹುತಕ್ಕೆ ಸಂಬಂಧಿತ ಅಧಿಕಾರಿಗಳೇ ಹೊಣೆ- ಸಿದ್ಧರಾಮಯ್ಯ

Date:

Siddaramaiah ಕಲುಷಿತ ನೀರು ಸೇವನೆಯಿಂದ ಸಾವು ಸಂಭವಿಸಿದ ಕಾವಾಡಿಗರಹಟ್ಟಿಯ ಸಂತ್ರಸ್ಥ ಕುಟುಂಬಗಳನ್ನು ಭೇಟಿಮಾಡಿ, ಬಳಿಕ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದ ಮುಖ್ಯಮಂತ್ರಿ
ಸಿದ್ದರಾಮಯ್ಯ
ಅವರು, ಅವುಗಳ ಪರಿಹಾರಕ್ಕಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.

ಕಲುಷಿತ ನೀರು ಕುಡಿದು ಆರು ಮಂದಿ ಮೃತಪಟ್ಟಿದ್ದ ಕಾವಾಡಿಗರ ಹಟ್ಟಿಯ ಅಭಿವೃದ್ದಿಗೆ 3 ಎಕರೆ ಜಾಗ 4 ಕೋಟಿ ರೂಪಾಯಿ ನೀಡಿದ್ದೇವೆ.
ಸಂತ್ರಸ್ಥ ಕುಟುಂಬಗಳ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಲಿದೆ. ಈ ಕುಟುಂಬಗಳ ಸದಸ್ಯರಿಗೆ ಉದ್ಯೋಗವನ್ನೂ ಕೊಡುತ್ತೇವೆ, ಮನೆಯನ್ನೂ ಕಟ್ಟಿಸಿಕೊಡುತ್ತೇವೆ.

ಶುದ್ಧ ಕುಡಿಯುವ ನೀರು ಕೊಡುವುದು ನಮ್ಮ ಕರ್ತವ್ಯ. ಘಟನೆ ಘಟಿಸಿದ ತಕ್ಷಣ ಸ್ಥಳೀಯ ಶಾಸಕರು, ಜಿಲ್ಲಾ ಮಂತ್ರಿಗಳು ಮತ್ತು ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ಕೊಟ್ಟು, ತಕ್ಷಣಕ್ಕೆ 10 ಲಕ್ಷ ಪರಿಹಾರ ನೀಡಲಾಗಿತ್ತು.

Siddaramaiah ಮೊದಲೇ ಶುದ್ಧ ನೀರಿನ ವ್ಯವಸ್ಥೆ ಇದ್ದಿದ್ದರೆ ಈ ಅನಾಹುತ ನಡೆಯುತ್ತಿರಲಿಲ್ಲ. ಘಟನೆ ಬಳಿಕ ಶುದ್ಧ ಕುಡಿಯುವ ನೀರಿಗೆ ತೊಂದರೆ ಆಗದಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಂದೆ ಇಂತಹ ಅನಾಹುತ ನಡೆದರೆ ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...