Wednesday, December 17, 2025
Wednesday, December 17, 2025

Sports News ನಿರಂತರ ಅಭ್ಯಾಸದಿಂದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಸಾಧ್ಯ-ಚನ್ನಪ್ಪ

Date:

Sports News ಕ್ರೀಡೆಯಿಂದ ಶಿಸ್ತು, ಏಕಾಗ್ರತೆ ಬೆಳೆಯುವುದು ಎಂದು ಭದ್ರಾವತಿಯ ಮಾಜಿ ನಗರಸಭಾ ಅಧ್ಯಕ್ಷರು ಹಾಲಿ ಸದಸ್ಯರಾದ ಚನ್ನಪ್ಪ ಕ್ರೀಡಾಪಟುಗಳಿಗೆ ತಿಳಿಸಿದರು.

ಭದ್ರಾವತಿ ನಗರದ ಶ್ರೀ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಭದ್ರಾವತಿ. ಹಾಗೂ ಶ್ರೀ ಜ್ಞಾನಶ್ರೀ ವಿದ್ಯಾಸಂಸ್ಥೆ ದೊಡ್ಡ ಗೋಪಿನಹಳ್ಳಿ,ಭದ್ರಾವತಿ. ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ 14 ಮತ್ತು 17 ವರ್ಷ ವಯೋಮಿತಿಯೊಳಗಿನ ಬಾಲಕರ ಜಿಲ್ಲಾಮಟ್ಟದ ನೇರ ಕ್ರಿಕೆಟ್ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿದ ಅವರು, ಓದಿನ ಜೊತೆಗೆ ಕ್ರೀಡೆಗೂ ಹೆಚ್ಚು ಒತ್ತು ಕೊಟ್ಟಾಗ ಕ್ರೀಡೆ ಬೆಳೆಯಲು ಸಾಧ್ಯವಾಗುತ್ತದೆ.

ಕ್ರೀಡೆಯಲ್ಲಿ ಕ್ರೀಡಾ ಮನೋಭಾವದಿಂದ ಭಾಗವಹಿಸಿ, ಸೋಲು – ಗೆಲುವನ್ನು ಸಮಾನವಾಗಿ ಸ್ವೀಕರಿಸಿ,ನಿರಂತರ ಅಭ್ಯಾಸದಿಂದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಕ್ರೀಡಾಪಟುಗಳಿಗೆ ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಹಿರಿಯ ದೈಹಿಕ ಶಿಕ್ಷಣ ನಿರ್ದೇಶಕರಾದ ಶಿವಲಿಂಗೇಗೌಡ ಮಾತನಾಡುತ್ತಾ, ಸೋಲು ಗೆಲುವು ಮುಖ್ಯವಲ್ಲ,ಕ್ರೀಡಾ ಕೂಟದಲ್ಲಿ ಭಾಗವಹಿಸುವುದು ಮುಖ್ಯ. ಕ್ರೀಡೆಯಲ್ಲಿ ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳಿಗೂ ಶುಭ ಹಾರೈಸಿದರು.

Sports News ಭದ್ರಾವತಿ ತಾಲ್ಲೂಕಿನ ದೈಹಿಕ ಶಿಕ್ಷಣ ಪರಿವೀಕ್ಷರಾದ ಪ್ರಭು ಜಿ. ಎಚ್., ಅನುದಾನ ರಹಿತ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ರಾ. ಹ. ತಿಮ್ಮೇನಹಳ್ಳಿ, ಕ್ರಿಕೆಟ್ ತೀರ್ಪುಗಾರರಾದ ರಘುವೀರ್ ಮತ್ತು ಅನಿಲ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 18. ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ,...

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...