Thursday, April 16, 2026
Thursday, April 16, 2026

ದೇಶ ನಿರ್ಮಾಣದಲ್ಲಿ ವಕೀಲರ ಪಾತ್ರ ಮಹತ್ತರ

Date:

ದೇಶದ ನಿರ್ಮಾಣದಲ್ಲಿ ವಕೀಲರ ಮಹತ್ವವನ್ನು ಎಂದಿಗೂ ಅಲ್ಲಗಳೆಯಲಾಗದು. ಅಧ್ಯಯನ ಶೀಲತೆ ಇದ್ದಾಗ ಮಾತ್ರ ವಕೀಲ ವೃತ್ತಿಯಲ್ಲಿ ಯಶಸ್ಸು ಕಾಣಬಹುದು ಎಂದು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಮಹಾಂತಪ್ಪ ಎ.ಡಿ ಅವರು ತಿಳಿಸಿದ್ದಾರೆ.
ಸಾಗರದ ಕೋರ್ಟ್ ಆವರಣದಲ್ಲಿ ವಕೀಲರ ಸಂಘ ಏರ್ಪಡಿಸಿದ್ದ ವಕೀಲರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಕೀಲ ವೃತ್ತಿಗೆ ತನ್ನದೇ ಆದ
ಪಾವಿತ್ರ್ಯ, ಘನತೆಯಿದೆ. ವೃತ್ತಿಯಲ್ಲಿ ವಕೀಲರು ನೈತಿಕತೆ ಕಾಪಾಡಿಕೊಳ್ಳಬೇಕಾದದ್ದು ಅತ್ಯಂತ ಪ್ರಮುಖ ಸಂಗತಿಯಾಗಿದೆ ಎಂದು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಮಹಾಂತಪ್ಪ ಎ.ಡಿ. ಹೇಳಿದರು.
ಕಿರಿಯ ವಿಭಾಗದ ಸಿವಿಲ್ ನ್ಯಾಯಾಧೀಶರಾದ ರಹೀಂ ಅಲಿ ನದಾಫ್, ವಕೀಲರಿಗೆ ಜ್ಞಾನವೇ ಸಂಪತ್ತು. ಈ ಕ್ಷೇತ್ರದಲ್ಲಿ ಸಾಧನೆಗೆ ಮಿತಿ ಎಂಬುದೇ ಇಲ್ಲ. ವೃತ್ತಿಯ ಬಗ್ಗೆ ಅಸಡ್ಡೆ ಮನೋಭಾವ ತೋರದೇ ಇರುವುದು ಪ್ರಮುಖವಾದ ಸಂಗತಿಯಾಗಿದೆ ಎಂದರು.
ಹಿರಿಯ ವಿಭಾಗದ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ರೆಹೆನಾ ಸುಲ್ತಾನ ಅವರು, ಒಳ್ಳೆಯ ವಕೀಲರು ಇರುವಲ್ಲಿ ಮಾತ್ರ ಸಮಾಜದ ಸ್ವಾಸ್ಥ್ಯ ಸುಸ್ಥಿರವಾಗಿರುತ್ತದೆ. ವಕೀಲರಿಗೆ ಸಮಾಜದ ಜೊತೆ ನೇರ ಸಂಪರ್ಕ ಇರುವುದರಿಂದ ಸಾಮಾಜಿಕ ಬದಲಾವಣೆಯಲ್ಲಿ ಅವರು ಆಸಕ್ತಿ ತೋರುವ ಅವಕಾಶ ಮುಖ್ಯವಾಗಿರುತ್ತದೆ ಎಂದರು.
ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷರು ರವೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ವಕೀಲರಾದ ಎಂ.ಬಿ. ಪುಟ್ಟಸ್ವಾಮಿ, ಕೆ.ಎನ್. ಶ್ರೀಧರ್, ಎಚ್.ಎನ್. ದಿವಾಕರ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಗುಡ್ ಲಕ್ ಆರೈಕೆ ಕೇಂದ್ರದಲ್ಲಿನ ಅನಾಥ ಮಹಿಳೆಯರಿಗೆ ಭಾವನಾ ಜೆಸಿಐನಿಂದ ಉಡುಪು ವಿತರಣೆ

JCI Shivamogga ಶಿವಮೊಗ್ಗ ನಗರದ ಜೆಸಿಐ ಶಿವಮೊಗ್ಗ ಭಾವನದಿಂದ ಗುಡ್...

Brahmakumari Ishwariya University ಆಧ್ಯಾತ್ಮ , ಧ್ಯಾನ ಮತ್ತು ಯೋಗ ಮನುಷ್ಯನ ನೈಜ ಸಂಪತ್ತು-ಬ್ರಹ್ಮಕುಮಾರಿ ಸ್ವಾತಿ

Brahmakumari Ishwariya University ಒತ್ತಡ ಮತ್ತು ಅಶಾಂತಿಯ ಜೀವನಶೈಲಿಯಲ್ಲಿ ಬದುಕುತ್ತಿರುವ ಜನರಿಗೆ...

Dr. B.R. Ambedkar ಡಾ.ಅಂಬೇಡ್ಕರ್ ಜಯಂತಿ ಪ್ರಯುಕ್ತ 19 ಜನಕ್ಕೆ ಜೀವ ವಿಮಾ ಬಾಂಡ್ ವಿತರಣೆ

Dr. B.R. Ambedkar ಶಿವಮೊಗ್ಗ ಜಿಲ್ಲೆಯ ಹೊಳೆ ಬೆನವಲ್ಲಿ ಗ್ರಾಮದಲ್ಲಿ ಸಂವಿಧಾನ...

VISL ಡಾ.ಅಂಬೇಡ್ಕರ್ ಮತ್ತು ವಿಶ್ವೇಶ್ವರಯ್ಯನವರ ಜೀವನದ ವಿಚಾರಗಳು ಮಕ್ಕಳಿಗೆ ಅಗತ್ಯ- ಬಿ.ವಿಶ್ವನಾಥ್

VISL ವಿಐಎಸ್‌ಎಲ್ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ದ ಆಯೋಜಿಸಲಾಗಿತ್ತು. ಈ...