Monday, April 20, 2026
Monday, April 20, 2026

ದಾರ್ಶನಿಕರನ್ನ ವೈಚಾರಿಕವಾಗಿ ನೋಡಬೇಕು.

Date:

ಬಸವಣ್ಣ, ಸಿದ್ದರಾಮ, ಅಲ್ಲಮಪ್ರಭು ಸೇರಿದಂತೆ ವಿವಿಧ ದಾರ್ಶನಿಕರ ನೀಡಿದ ತತ್ವಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಶಿಕಾರಿಪುರದ ಗುರುಭವನದಲ್ಲಿ ಜನಸ್ಪಂದನಾ ಟ್ರಸ್ಟ್ ಹಾಗೂ ಸುವ್ವಿ ಪಬ್ಲಿಕೇಷನ್ಸ್ ಆಶ್ರಯದಲ್ಲಿ ನಡೆದ ಉಪನ್ಯಾಸಕ ಪುಟ್ಟಪ್ಪ ಕೆ.ಎಚ್. ಬಿಳವಾಣಿ ಬರೆದ ಲೋಕ ಚಿಂತಕ ಸಿದ್ಧರಾಮ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಮಾಜ ಚಿಂತಕ ಸೊರಬದ ರಾಜಪ್ಪ ಮಾಸ್ತರ್, ಸಿದ್ದರಾಮರು ಸೇರಿದಂತೆ ಅನೇಕ ದಾರ್ಶನಿಕರು ಸಮಾಜದಲ್ಲಿರುವ ಮೌಡ್ಯವನ್ನು ತೊಲಗಿಸಲು ಶ್ರಮಿಸಿದ್ದರು. ಈ ದಾರ್ಶನಿಕರನ್ನು ಪೌರಾಣಿಕ ಹಿನ್ನೆಲೆಯಿಂದ ನೋಡದೇ ವೈಚಾರಿಕ ಮನೋಭಾವದಿಂದ ನೋಡಬೇಕು. ದಾರ್ಶನಿಕರ ತತ್ವ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಭೋವಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಚ್. ಜಯಪ್ಪ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಡಿ. ಮಧುಕೇಶವ, ಜಾನಪದ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ, ಸಾಹಿತಿ ಡಾ. ಸುಧಾಕರ ಹಿರೇಕಸವಿ, ಸುನಿಲ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

RM Manjunath Gowda ಹುಲಿಕಲ್ ಘಾಟಿ ಪ್ರಕರಣ.ಇಂಜಿನಿಯರುಗಳೇ ಹೊಣೆ. ಎಫ್ ಐ ಆರ್ ದಾಖಲಿಸಲು ಎಸ್ ಪಿ.ಅವರಿಗೆ ಮನವಿ ಮಾಡುವೆ- ಆರ್.ಎಂ.ಮಂಜುನಾಥ ಗೌಡ.

RM Manjunath Gowda ಹುಲಿಕಲ್ ಘಾಟಿ ಪ್ರಕರಣದಲ್ಲಿ ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಮಕೆನಾಡು...

Graduation Day ಮ್ಯಾನೇಜ್ಮೆಂಟ್ ಪದವೀಧರರು ಶೈಕ್ಷಣಿಕ ಮತ್ತು ಔದ್ಯಮಿಕ ರಂಗದ ನಡುವಿನ ಸೇತುವೆ- ವಿನಯ್ ಪಾಟೀಲ್.

Graduation Day "ಜ್ಞಾನವು ಕೌಶಲ್ಯವಾಗದಿದ್ದಲ್ಲಿ ನಿರರ್ಥಕ" -ಬಾಪೂಜಿ ಎಂಬಿಎ ಪದವಿ ಪ್ರದಾನದಲ್ಲಿ ವಿನಯ್...

Department of Labour ಕಾರ್ಮಿಕರಿಗೆ,ಆರ್ಥಿಕ ಹಿಂದುಳಿದವರಿಗೆ ಉಚಿತ ಕಿಡ್ನಿ, ಲಿವರ್ ,ಚಿಕಿತ್ಸೆ ನೀಡಲಾಗುತ್ತದೆ- ಡಾ.ಚಂದ್ರಶೇಖರ್.

Department of Labour ಭದ್ರಾವತಿಯ ಬೈಪಾಸ್ ಆಂಜನೇಯ ದೇವಸ್ಥಾನ ಆವರಣದಲ್ಲಿ ರಾಜ್ಯ ಕಾರ್ಮಿಕ...