Friday, March 20, 2026
Friday, March 20, 2026

District Chamber of Commerce ಪ್ರತಿಯೊಬ್ಬರೂ ಸಿರಿಧಾನ್ಯಗಳ ಮಹತ್ವ ಅರಿತು ಬಳಸಬೇಕು- ಚಂದ್ರಹಾಸ ಶೆಟ್ಟಿ

Date:

District Chamber of Commerce ಸಿರಿಧಾನ್ಯಗಳ ಬಗ್ಗೆ ಹೆಚ್ಚು ಅರಿವು ಮೂಡಿಸುವ ಅಗತ್ಯವಿದ್ದು, ಆರೋಗ್ಯ ಸದೃಢತೆ ಕಾಪಾಡಿಕೊಳ್ಳಲು ಸಿರಿಧಾನ್ಯಗಳ ಬಳಕೆ ಸಹಕಾರಿಯಾಗುತ್ತದೆ ಎಂದು ಉದ್ಯಮಿ ಚಂದ್ರಹಾಸ್ ಶೆಟ್ಟಿ ಹೇಳಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಸಿರಿಧಾನ್ಯದಿಂದ ಆಹಾರ ತಯಾರಿಸುವ ಸ್ಪರ್ಧೆ ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ಮಾರುಕಟ್ಟೆಯಲ್ಲಿ ಸಿರಿಧಾನ್ಯಗಳು ಹೆಚ್ಚು ಲಭ್ಯವಿದ್ದು, ಪ್ರತಿಯೊಬ್ಬರು ಸಿರಿಧಾನ್ಯಗಳ ಮಹತ್ವ ಅರಿತುಕೊಂಡು ಬಳಸಬೇಕು ಎಂದು ಸಲಹೆ ನೀಡಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ವಸಂತ ಹೋಬಳಿದಾರ್ ಮಾತನಾಡಿ, ಸಿರಿಧಾನ್ಯಗಳಿಂದ ಪ್ರತಿ ನಿತ್ಯ ತಿಂಡಿ ತಿನಿಸುವ ಮಾಡಿಕೊಳ್ಳುವ ದೃಷ್ಠಿಯಿಂದ ಸ್ಪರ್ಧೆಯು ಅತ್ಯಂತ ಉಪಯುಕ್ತ ಆಗಿದ್ದು, ಮುಂದಿನ ಪೀಳಿಗೆಗೆ ಸಿರಿಧಾನ್ಯದ ಅಡುಗೆಗಳ ಬಗ್ಗೆ ಹೆಚ್ಚು ಕಲಿಸಿಕೊಡಬೇಕು ಎಂದು ತಿಳಿಸಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನಿರ್ದೇಶಕ ಗಣೇಶ ಅಂಗಡಿ ಮಾತನಾಡಿ, 2023ನೇ ವರ್ಷವನ್ನು ವಿಶ್ವ ಸಿರಿಧಾನ್ಯ ವರ್ಷ ಘೋಷಿಸಿರುವ ಹಿನ್ನೆಲೆ ಹಾಗೂ ವಿಶ್ವ ಆಹಾರ ದಿನಾಚರಣೆ ಪ್ರಯುಕ್ತ ಸಂಘದ ವತಿಯಿಂದ ವಿಶೇಷ ಸ್ಪರ್ಧೆ ಹಮ್ಮಿಕೊಂಡು ಅರಿವು ಮೂಡಿಸುವ ಕಾರ್ಯ ನಡೆಸಲಾಗುತ್ತಿದೆ ಎಂದರು.
ರುಚಿ ಶುಚಿಯಾಗಿ ಸಿರಿಧಾನ್ಯ ಆಹಾರ ತಯಾರಿಸುವ ಸ್ಪರ್ಧೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಉತ್ತಮವಾಗಿ ಆಹಾರ ತಯಾರಿಸಿದವರಿಗೆ ಬಹುಮಾನ ವಿತರಿಸಲಾಯಿತು.

District Chamber of Commerce ನಂದಿನಿ ನಾಗರಾಜ್, ಡಾ. ಪಲ್ಲವಿ ಹಾಗೂ ಸೋಮಶೇಖರ್ ತೀರ್ಪುಗಾರರಾಗಿ ಭಾಗವಹಿಸಿದ್ದರು.
ಎಫ್‌ಕೆಸಿಸಿಐ ಮ್ಯಾನೇಜಿಂಗ್ ಕಮಿಟಿ ಸದಸ್ಯ ಡಿ.ಎಂ.ಶಂಕರಪ್ಪ, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ಸವಿತಾ ಮಾಧವ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...