Friday, April 3, 2026
Friday, April 3, 2026

Sharanya Care Center of DSL Trust ರೋಗಿಗಳ ಆರೈಕೆ ಮಾಡುತ್ತಿರುವ ಶರಣ್ಯ ಸಂಸ್ಥೆಯ ಕಾರ್ಯ ಶ್ಲಾಘನೀಯ – ಡಾ.ಆರ್. ಸೆಲ್ವಮಣಿ

Date:

Sharanya Care Center of DSL Trust ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳ ಸೇವೆ ಮಾಡುವ ಜತೆಯಲ್ಲಿ ಅಗತ್ಯ ಸೌಕರ್ಯಗಳನ್ನು ಒದಗಿಸುತ್ತಿರುವ ಶರಣ್ಯ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.

ಶಿವಮೊಗ್ಗ ತಾಲೂಕಿನ ಗಾಜನೂರು ಅಗ್ರಹಾರದಲ್ಲಿರುವ ಡಿಎಸ್‌ಎಲ್ ಟ್ರಸ್ಟ್ ನ ಶರಣ್ಯ ಆರೈಕೆ ಕೇಂದ್ರ ವತಿಯಿಂದ ಆಯೋಜಿಸಿದ್ದ ಶ್ರೀ ಮಾತೆ ಚೌಡೇಶ್ವರಿ ಮತ್ತು ಶ್ರೀ ಭೂತೇಶ್ವರ ದೇವರುಗಳ ನವೀಕೃತ ದೇಗುಲದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಮಾನವೀಯ ನೆಲೆಯಲ್ಲಿ ಶರಣ್ಯ ಸಂಸ್ಥೆಯು ವಿಶೇಷ ಕಾರ್ಯ ನಡೆಸುವ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತಿದೆ ಎಂದು ತಿಳಿಸಿದರು.

ಶಿವಮೊಗ್ಗ ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಮಾತನಾಡಿ, ಶರಣ್ಯ ಸಂಸ್ಥೆಯು ಸಮಾಜಮುಖಿಯಾಗಿ ಕೆಲಸ ಮಾಡುತ್ತಿದ್ದು, ರೋಗಿಗಳ ಆರೈಕೆಯಲ್ಲಿ ವಿಶೇಷ ಕಾಳಜಿ ವಹಿಸುತ್ತಿದೆ. ರೋಗಿಗಳ ಕಷ್ಟದ ದಿನಗಳಲ್ಲಿ ಅವರಿಗೆ ಉಚಿತ ಸೇವೆ ಮಾಡುತ್ತಿರುವುದು ಅಭಿನಂದನೀಯ ಕಾರ್ಯ ಎಂದು ತಿಳಿಸಿದರು.

ಶರಣ್ಯ ಆರೈಕೆ ಕೇಂದ್ರದ ಆವರಣದಲ್ಲಿ ಇರುವ ಶ್ರೀ ಮಾತೆ ಚೌಡೇಶ್ವರಿ ಮತ್ತು ಶ್ರೀ ಭೂತೇಶ್ವರ ದೇವರುಗಳ ನವೀಕೃತ ದೇಗುಲದ ಲೋಕಾರ್ಪಣೆ ಸಂದರ್ಭದ ಪ್ರಯುಕ್ತ ದುರ್ಗಾ ಹೋಮ ನಡೆಸಲಾಯಿತು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ, ಎಸ್‌ಪಿ ಜಿ.ಕೆ.ಮಿಥುನ್ ಕುಮಾರ್ ಅವರು ವಾರ್ಡ್ ಗಳಿಗೆ ಭೇಟಿ ನೀಡಿ ವೀಕ್ಷಿಸಿದರು. ವಿಡಿಯೋ ಮುಖಾಂತರ ಸಂಸ್ಥೆಯ ವಿವರ ವೀಕ್ಷಿಸಿದರು. ಎರಡು ಬಿಲ್ವಪತ್ರೆಯ ಗಿಡಗಳನ್ನು ಆವರಣದಲ್ಲಿ ನೆಡಲಾಯಿತು.

Sharanya Care Center of DSL Trust ರೋಗಿಗಳು ಗುಣಪಡಿಸಲಾಗದೇ ಇರುವ ಉಲ್ಭಣ ಸ್ಥಿತಿಯಲ್ಲಿ ಬಂದವರಿಗೂ ಉತ್ತಮ ಶುಶ್ರೂಷೆಯ ನಂತರದಲ್ಲಿ ಗುಣಮುಖರಾದ ಅನೇಕ ಉದಾಹರಣೆ ಶರಣ್ಯ ಸಂಸ್ಥೆಯಿಂದ ಆಗಿದೆ.

ಶರಣ್ಯ ಸಂಸ್ಥೆಯ ಗೌರವಾಧ್ಯಕ್ಷ, ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಶರಣ್ಯ ಸಂಸ್ಥೆ ಅಧ್ಯಕ್ಷ ಟಿ.ಆರ್.ಅಶ್ವತ್ಥ್ ನಾರಾಯಣ ಶೆಟ್ಟಿ, ಮ್ಯಾನೇಜಿಂಗ್ ಟ್ರಸ್ಟಿ ಡಿ.ಎಲ್.ಮಂಜುನಾಥ್, ಸಹ ಕಾರ್ಯದರ್ಶಿ ಬಿ.ಎನ್.ಮಂಜುನಾಥ್, ಸಂದೀಪ್, ಶ್ವೇತಾ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Hanuman Jayanti ಪಾರಂಪರಿಕ ಶ್ರದ್ದಾಭಕ್ತಿಗಳಿಂದ ದಾವಣಗೆರೆಯಲ್ಲಿ ಹನುಮ ಜಯಂತಿ

Hanuman Jayanti  ದಾವಣಗೆರೆ.ಏ.2. ನಗರದ ಜಯದೇವ ವೃತ್ತದಲ್ಲಿರುವ ಅಧ್ಯಾತ್ಮ ಮಂದಿರದಲ್ಲಿ ಶ್ರೀ...

Shivamogga Minority Welfare Department ಜಿಲ್ಲೆಯಲ್ಲಿನ ಬೌದ್ಧವಿಹಾರಗಳ ಧಮ್ಮಾಚಾರಿಗಳಿಗೆ ಮಾಸಿಕ ಗೌರವಧನ ಬಗ್ಗೆ ಸರ್ಕಾರದ ಪ್ರಕಟಣೆ.

Shivamogga Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ...

Sandalwood Trees ಶಿವಮೊಗ್ಗದ ಎಲ್ ಬಿ ಎಸ್ ನಗರದಲ್ಲಿ ಶ್ರೀಗಂಧ ಮರ ಕಡಿತಲೆ. ಕ್ರಮ ಕೈಗೊಳ್ಳಲು ನಿವಾಸಿಗಳ ಆಕ್ರೋಶ.

Sandalwood Trees ಶಿವಮೊಗ್ಗ ಎಲ್‌ಬಿಎಸ್ ನಗರದಲ್ಲಿರುವ ಶ್ರೀ ಚೌಡೇಶ್ವರಿ ದೇವಾಲಯದ ಆವರಣದಲ್ಲಿದ್ದ...

Shivaganga Yoga Center ಪ್ರತಿಯೊಬ್ಬರಿಗೂ ಧ್ಯಾನ ಮತ್ತು ಯೊಇಗ್ದ ಅವಶ್ಯಕತೆ ಇದೆ- ಎಸ್.ಎಸ್.ಜ್ಯೋತಿಪ್ರಕಾಶ್

Shivaganga Yoga Center ಶಿವಮೊಗ್ಗದ ವಿನೋಬನಗರ -ಕಾಶಿಪುರದ ಕಲ್ಲಳ್ಳಿ ಶ್ರೀ ಶಿವಗಂಗಾ ಯೋಗ...