Sunday, May 17, 2026
Sunday, May 17, 2026

KSRTC Bus ಯಗಟಿ ಹೋಬಳಿ ಕೆ.ಎಸ್.ಆರ್.ಟಿ.ಸಿ ಬಸ್ ವ್ಯವಸ್ಥೆ ಕಲ್ಪಿಸಲು ಕರವೇ ಒತ್ತಾಯ

Date:

KSRTC Bus ಕಡೂರು ತಾಲ್ಲೂಕಿನ ಯಗಟಿ ಹೋಬಳಿಗೆ ಸೂಕ್ತ ಸಮಯಕ್ಕೆ ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಕರವೇ ಮುಖಂಡರುಗಳು ಕಡೂರು ಕೆ.ಎಸ್.ಆರ್.ಟಿ.ಸಿ. ಘಟಕದ ವ್ಯವಸ್ಥಾಪಕ ಪುಟ್ಟಸ್ವಾಮಿ ಅವರಿಗೆ ಗುರುವಾರ ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ಕರವೇ ಕಡೂರು ಅಧ್ಯಕ್ಷ ಎಂ.ಸತೀಶ್ ಈಗಾಗಲೇ ಹಲವು ತಿಂಗಳಿನಿoದ ಯಗಟಿಗೆ ಸರ್ಕಾರಿ ಬಸ್ ವ್ಯವಸ್ಥೆಯಿಲ್ಲದೇ ಪ್ರತಿನಿತ್ಯ ಸಂಚರಿಸುವ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗಿದೆ. ಇದೀಗ ಕೆಲವು ದಿನಗಳ ಬಳಿಕ ಶಾಲಾ-ಕಾಲೇಜುಗಳು ರಜೆಗಳು ಮುಗಿಯುವ ಹಂತಕ್ಕೆ ತಲುಪಿಸಿದ್ದು ಈ ಸಮಯದಲ್ಲಿ ಬಸ್ ವ್ಯವಸ್ಥೆ ಕಲ್ಪಿಸಿದರೆ ಬಹಳಷ್ಟು ಅನುಕೂಲವಾಗಲಿದೆ ಎಂದರು.

ಬಹುತೇಕ ಯಗಟಿ ಹೋಬಳಿಯ ವ್ಯಾಪ್ತಿಯಲ್ಲಿರುವ ಗ್ರಾಮಸ್ಥರಿಗೆ ಸಂಚರಿಸುವ ಯಗಟಿ ಮುಖ್ಯದ್ವಾರವಾ ಗಿದೆ. ಇಲ್ಲಿಂದ ಕಡೂರು, ತರೀಕೆರೆ, ಶಿವಮೊಗ್ಗ ಹಾಗೂ ಬೆಂಗಳೂರಿಗೆ ತೆರಳಲು ಇದೇ ಯಗಟಿ ಗ್ರಾಮಕ್ಕೆ ಬಂದು ತೆರಳಬೇಕಾಗಿದೆ. ಆದರೆ ಇಂತಹ ಹೋಬಳಿಗೆ ಸರ್ಕಾರಿ ಬಸ್ ವ್ಯವಸ್ಥೆಯಿಲ್ಲದೇ ಸಾರ್ವಜನಿಕರು ಖಾಸಗೀ ಬಸ್ ಗಳ ಮೋರೆ ಹೋಗಬೇಕಾಗಿದೆ ಎಂದು ಹೇಳಿದರು.

ಸೂಕ್ತ ಸಮಯಕ್ಕೆ ಸರ್ಕಾರಿ ಬಸ್‌ಗಳು ಬಾರದಿರುವುದು ಹಾಗೂ ಕಾಟಾಚಾರಕ್ಕೆ ಬಿಡುವ ಸ್ಥಿತಿ ಯಗಟಿ ಹೋಬಳಿಗೆ ನಿರ್ಮಾಣವಾಗಿದ್ದನ್ನು ಗಮನಿಸಿ ತಾಲ್ಲೂಕು ಕರವೇ ವತಿಯಿಂದ ಸಂಬoಧಪಟ್ಟ ಕೆ.ಎಸ್.ಆರ್. ಟಿ.ಸಿ. ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಸಮಾ ಧಾನ ಹೊರಹಾಕಿದರು.

ಇದೇ ವೇಳೆ ಕಡೂರು, ಬೀರೂರು ಮತ್ತು ಯಗಟಿ ಮಾರ್ಗವಾಗಿ ಉಡುಗೆರೆಗೆ ಸಂಪರ್ಕ ಕಲ್ಪಿಸುವ ಹಾಗೂ ಸ್ಥಗಿತಗೊಂಡಿದ್ದ ಯಗಟಿ, ಬೆಂಗಳೂರು ರಾತ್ರಿ ಸಮಯದ ಬಸ್ಸನ್ನು ಪ್ರಯಾಣಿಕರ ಅನುಕೂಲಕ್ಕಾಗಿ ಪುನರಾರಂ ಭಿಸುವಂತೆ ಒತ್ತಾಯಿಸಲಾಯಿತು.

KSRTC Bus ಸಂದರ್ಭದಲ್ಲಿ ಕರವೇ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಟಿ.ಎಂ.ಭರತ್, ಸದಸ್ಯರಾದ ವೈ ಜೆ ಪ್ರೃಥ್ವಿ. ಮಂಜುನಾಥ್ ವೈ ಹೆಚ್., ನಾಗರಾಜ್ ವೈ ಟಿ. ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...