Kerebete Kannada Movie ಕೆರೆಬೇಟೆ’ ಎಂಬ ಸಿನಿಮಾ ಟೈಟಲ್ ಮೂಲಕವೇ ಸ್ಯಾಂಡಲ್ವುಡ್ನಲ್ಲಿ ಬಾರಿ ಕುತೂಹಲ ಮೂಡಿಸಿದೆ. ಸಿನಿಮಾ ತಂಡ ಇದೀಗ ಮೋಷನ್ ಪೋಸ್ಟರ್ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ.
ಕೆರೆ ಬೇಟೆ ಮಲೆನಾಡು ಭಾಗದ ಮೀನು ಬೇಟೆಯಾಗುವ ಒಂದು ಪದ್ಧತಿ. ಮೊದಲ ಬಾರಿಗೆ ಮೀನು ಬೇಟೆಯನ್ನು ತೆರೆಮೇಲೆ ತರುತ್ತಿದ್ದಾರೆ ನಿರ್ದೇಶಕ ರಾಜ್ಗುರು. ನಾಯಕನಾಗಿ ಗೌರಿಶಂಕರ್ ಎಸ್ಆರ್ಜಿ ಕಾಣಿಸಿಕೊಂಡಿದ್ದಾರೆ.
ಈಗಾಗಲೇ ಎರಡು ಸಿನಿಮಾಗಳನ್ನು ಮಾಡಿರುವ ಗೌರಿಶಂಕರ್ ಇದೀಗ ವಿಭಿನ್ನವಾದ ಒಂದೊಳ್ಳೆ ಹಳ್ಳಿ ಸೊಗಡಿನ ಸಿನಿಮಾ ಮೂಲಕ ತೆರೆಮೇಲೆ ಮಿಂಚಲು ಸಜ್ಜಾಗಿದ್ದಾರೆ.
ಸದ್ಯ ರಿಲೀಸ್ ಆಗಿರುವ ಮೋಷನ್ ಪೋಸ್ಟರ್ನಲ್ಲಿ ನಾಯಕ ಗೌರಿಶಂಕರ್ ಕೂಣಿ ಹಿಡಿದು ಕೆರೆಯಲ್ಲಿ ಮೀನು ಬೇಟೆಯಾಡುತ್ತಿದ್ದಾರೆ.
Kerebete Kannada Movie ನಿರ್ದೇಶಕ ರಾಜ್ಗುರು ಮತ್ತು ತಂಡ ಈಗಾಗಲೇ ಶಿವಮೊಗ್ಗ ಜಿಲ್ಲೆಯ ಸಿಗಂದೂರ ಹಾಗೂ ಸೊರಬ ಸುತ್ತ-ಮುತ್ತ ಚಿತ್ರೀಕರಣ ಮಾಡಲಾಗಿದೆ. ಸದ್ಯ ಮೋಷನ್ ಪೋಸ್ಟರ್ ಮೂಲಕ ಕುತೂಹಲ ಹೆಚ್ಚಿಸಿದ್ದು ಮುಂದಿನ ವರ್ಷದ ಪ್ರಾರಂಭದಲ್ಲಿ ಚಿತ್ರ ತೆರೆಮೇಲೆ ಕಾಣಲಿದೆ.