Friday, March 20, 2026
Friday, March 20, 2026

Central Government ಬ್ಯಾಂಕ್ ಸಿಬ್ಬಂದಿಗೆ ಶೇ15 ವೇತನ ಹೆಚ್ಚಳಕ್ಕೆ ಕೇಂದ್ರದ ಚಿಂತನೆ?

Date:

Central Government ಇತ್ತೀಚಿಗಷ್ಟೇ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿದ್ದು, ಇದೀಗ ಕೇಂದ್ರ ಸರ್ಕಾರ, ಬ್ಯಾಂಕ್ ಉದ್ಯೋಗಿಗಳಿಗೂ ಗುಡ್ ನ್ಯೂಸ್ ನೀಡಲು ಮುಂದಾಗಿದೆ ಎಂದು ತಿಳಿದುಬಂದಿದೆ.

ಶೇಕಡಾ 15 ರಷ್ಟು ವೇತನ ಹೆಚ್ಚಳದ ಜೊತೆಗೆ ವಾರಕ್ಕೆ ಐದು ದಿನ ಕೆಲಸ ಮಾಡುವ ಅವಕಾಶವನ್ನು ನೀಡುವ ಸಾಧ್ಯತೆ ಇದೆ.

ಈ ಹಿಂದೆ 2020ರಲ್ಲಿ ಬ್ಯಾಂಕ್ ಉದ್ಯೋಗಿಗಳ ವೇತನವನ್ನು ಏರಿಕೆ ಮಾಡಲಾಗಿದ್ದು, ಮುಂದಿನ ವರ್ಷ ಲೋಕಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬ್ಯಾಂಕ್ ಉದ್ಯೋಗಿಗಳ ಮನೆಗೆಲ್ಲುವ ಸಲುವಾಗಿ ಕೇಂದ್ರ ಸರ್ಕಾರ ಅವರುಗಳ ಬೇಡಿಕೆಯನ್ನು ಈಡೇರಿಸಲು ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ. ಬ್ಯಾಂಕ್ ಹಾಗೂ ನೌಕರರ ಒಕ್ಕೂಟದ ನಡುವಿನ ಮಾತುಕತೆ ಫಲಪ್ರದವಾದ ಬಳಿಕ ದೀಪಾವಳಿ ವೇಳೆಗೆ ಕೇಂದ್ರ ಸರ್ಕಾರ ವೇತನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ ನೀಡಲಿದೆ ಎಂದು ತಿಳಿದು ಬಂದಿದೆ.

Central Government ಶೇಕಡ 15ರಷ್ಟು ವೇತನ ಹೆಚ್ಚಳ ಕುರಿತಂತೆ ಈಗಾಗಲೇ ಭಾರತೀಯ ಬ್ಯಾಂಕುಗಳ ಸಂಘ ಪ್ರಸ್ತಾವನೆ ಸಲ್ಲಿಸಿದ್ದು, ಬ್ಯಾಂಕುಗಳು ಮತ್ತು ನೌಕರರ ಒಕ್ಕೂಟದ ನಡುವೆ ಈ ನಿಟ್ಟಿನಲ್ಲಿ ಮಾತುಕತೆ ನಡೆಯುತ್ತಿದೆ ಎಂದು ಮೂಲಗಳು ಹೇಳಿವೆ. ಈ ಬೆಳವಣಿಗೆಯನ್ನು ಗಮನಿಸುತ್ತಿರುವ ಕೇಂದ್ರ ಹಣಕಾಸು ಸಚಿವಾಲಯ ಅಂತಿಮವಾಗಿ ಇದಕ್ಕೆ ಅಧಿಕೃತ ಮುದ್ರೆ ನೀಡಲಿದೆ ಎಂದು ಹೇಳಲಾಗುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...