Tuesday, August 25, 2026
Tuesday, August 25, 2026

Belur Gopalakrishna ಬಗರ್ ಹುಕುಂ & ಅರಣ್ಯ ಭೂಮಿ ಒತ್ತುವರಿ ತೆರವಿಗೆ ಅರಣ್ಯ ಇಲಾಖೆ ಕಾರ್ಯಾಚರಣೆ

Date:

Belur Gopalakrishna ಶಿವಮೊಗ್ಗದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ ಮುಂದುವರೆದಿದೆ.

ಒಂದೆಡೆ ವನ್ಯಜೀವಿ ಸಂಬಂಧಿತ ವಸ್ತು ಬಳಕೆ & ಸಂಗ್ರಹ ವಿಚಾರವಾಗಿ ದಾಳಿ ನಡೆಸಲಾಗುತ್ತಿದೆ. ಇನ್ನೊಂದೆಡೆ ಮಲೆನಾಡು ಭಾಗದಲ್ಲಿ ಒತ್ತುವರಿ ತೆರವಿಗೆ ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ.

ಬಗರ್ ಹುಕುಂ & ಅರಣ್ಯ ಭೂಮಿ ಒತ್ತುವರಿ ತೆರವಿಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಹೊಸನಗರ ತಾಲೂಕಿನ ಬೆಳ್ಳೂರು ಗ್ರಾ.ಪಂ ವ್ಯಾಪ್ತಿಯ ಬುಕ್ಕಿವರೆ ಹಾಗೂ ಗುಬ್ಬಿಗ ಗ್ರಾಮದಲ್ಲಿ ತೆರವಿಗೆ ಕಾರ್ಯಾಚರಣೆ ನಡೆಸಲಾಗಿದೆ.

ಶಿವಮೊಗ್ಗದ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾ.ಪಂ.
ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ದ ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ ಫುಲ್ ಗರಂ ಆಗಿದ್ದಾರೆ.

ಅರಣ್ಯ ಅಧಿಕಾರಿಗಳ ಕಾರ್ಯಾಚರಣೆಗೆ ಶಾಸಕ ಬೇಳೂರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ನೋಟಿಸ್ ನೀಡಿ, ತೆರವಿಗೆ ಮುಂದಾಗಿದ್ದ ಅರಣ್ಯಾಧಿಕಾರಿಗಳ ವಿರುದ್ದ ಶಾಸಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರ ಕಿರುಕುಳ ನೀಡುವುದನ್ನು ನಮ್ಮ ಸರ್ಕಾರ ಒಪ್ಪಲ್ಲ.
ಶರಾವತಿ ಸಂತ್ರಸ್ಥರು ನಾಡಿಗೆ ಬೆಳಕು ಕೊಟ್ಟು ಈ ಭಾಗದಲ್ಲಿ ವಾಸವಾಗಿದ್ದಾರೆ.ಅವರಿಗೆ ಹಕ್ಕುಪತ್ರ ಕೊಡುವುದಾಗಿ ಸರ್ಕಾರ ಭರವಸೆ ಕೊಟ್ಟಿದೆ ನಾವು ಮಾಡುತ್ತವೆ ಎಂದು ಹೇಳಿದರು.

Belur Gopalakrishna ಐದಾರು ದಶಕದಿಂದ ಬದುಕು ಕಟ್ಟಿಕೊಂಡ ರೈತರಿಗೆ ಕಿರುಕುಳ ನೀಡಿದ್ರೆ ಒಪ್ಪಲ್ಲ. ರೈತರ ಒತ್ತುವರಿ ತೆರವು ಸಂಬಂಧ ನನ್ನ ಗಮನಕ್ಕೆ ತಂದು ಕೆಲಸ ಮಾಡಿ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...