Wednesday, October 2, 2024
Wednesday, October 2, 2024

Zika virus ಝಿಕಾ ವೈರಸ್ ಸೋಂಕು-ಭಯಬೇಡ ಎಚ್ಚರವಿರಲಿ: ಡಾ.ಆರ್ ಸೆಲ್ವಾಮಣಿ

Date:

Zika virus ಝಿಕಾ ಎಂಬುದು ಒಂದು ವೈರಸ್ ಸೋಂಕು. ಡೆಂಗೀ, ಚಿಕೂನ್‍ಗುನ್ಯ ರೋಗ ಹರಡುವ ಈಡಿಸ್ ಜಾತಿಯ ಸೊಳ್ಳೆಗಳು ಝಿಕಾ ವೈರಸ್ ಸೋಂಕನ್ನು ಸಹ ಹರಡುತ್ತವೆ. ಈ ರೋಗದ ಬಗ್ಗೆ ಭಯ ಬೇಡ. ಆದರೆ ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿದ್ದಾರೆ.

ಜ್ವರ, ತಲೆನೋವು, ಕಣ್ಣು ಕೆಂಪಾಗುವಿಕೆ, ಗಂಧೆಗಳು, ಕೀಲು ಮತ್ತು ಸ್ನಾಯುಗಳಲ್ಲಿ ನೋವು ಹಾಗೂ ಇತರೆ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಬಹುತೇಕ ಝಿಕಾ ಸೋಂಕಿತರಿಗೆ ರೋಗ ಲಕ್ಷಣಗಳು ಕಂಡುಬರುವುದಿಲ್ಲ. ಉಳಿದಂತೆ ರೋಗಲಕ್ಷಣಗಳ ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದ್ದು, 2 ರಿಂದ 7 ದಿನಗಳವರೆಗೆ ಇರುತ್ತದೆ.

ಗರ್ಭಾವಸ್ಥೆಯಲ್ಲಿ ಝಿಕಾ ಸೋಂಕು ಕಾಣಿಸಿಕೊಂಡಲ್ಲಿ ಜನಿಸಿದ ಶಿಶುವಿನ ತಲೆಯ ಗಾತ್ರದಲ್ಲಿ ಕಡಿಮೆ ಬೆಳವಣಿಗೆ ದೋಷ ಕಂಡುಬರಬಹುದು.

ಝಿಕಾ ವೈರಸ್ ಪತ್ತೆ ಹಚ್ಚುವ ವಿಧಾನ :

ರೋಗ ಲಕ್ಷಣಗಳು ಕಂಡು ಬಂದವರ ರಕ್ತದ ಮಾದರಿ ಹಾಗೂ ಮೂತ್ರದ ಮಾದರಿ ಸಂಗ್ರಹಿಸಿ ಪರೀಕ್ಷಿಸುವ ಮೂಲಕ ಪತ್ತೆ ಹಚ್ಚಬಹುದು.
ಝಿಕಾ ವೈರಸ್ ಸೋಂಕು ದೃಢಪಟ್ಟಲ್ಲಿ ತೆಗೆದುಕೊಳ್ಳುವ ಕ್ರಮ :

• ಝಿಕಾ ವೈರಸ್ ಸೋಂಕಿಗೆ ನಿರ್ದಿಷ್ಟ ಚಿಕಿತ್ಸೆ ಹಾಗೂ ಲಸಿಕೆ ಲಭ್ಯವಿರುವುದಿಲ್ಲ.

• ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುವುದು. ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಹುದು. ಸಾಕಷ್ಟು ವಿಶ್ರಾಂತಿ ಪಡೆಯುವುದು.

• ನಿರ್ಜಲೀಕರಣ ತಪ್ಪಿಸಲು ಹೆಚ್ಚು ನೀರಿನ ಅಂಶವುಳ್ಳ ಆಹಾರ ಪದಾರ್ಥಗಳನ್ನು ಬಳಸುವುದು.

• ರೋಗ ಲಕ್ಷಣಗಳಿಗೆ ಅನುಗುಣವಾಗಿ ವೈದ್ಯರ ಸಲಹೆಯಂತೆ ನೀಡುವ ಔಷಧಗಳನ್ನು ಸೇವಿಸಬೇಕು ಹಾಗೂ ರೋಗ ಲಕ್ಷಣಗಳು ಹೆಚ್ಚಾದರೆ ವೈದ್ಯಕೀಯ ಚಿಕಿತ್ಸೆ ಪಡೆಯಬೇಕು.

  • ಝಿಕಾ ವೈರಸ್ ಸೋಂಕಿತರು ಬೇರೆಯವರಿಗೆ ರೋಗ ಹರಡದಂತೆ ತಡೆಯಲು ಸೊಳ್ಳೆ ಪರದೆಯನ್ನು ಬಳಸುವುದು.
    ಝಿಕಾ ವೈರಸ್ ಸೋಂಕು ಬರದಂತೆ ತಡೆಯಲು ಮುಂಜಾಗ್ರತಾ ಕ್ರಮ :
  1. ಸ್ವಚ್ಛ ನಿಂತ ನೀರು ಸೊಳ್ಳೆಗಳ ಉತ್ಪತ್ತಿ ತಾಣಗಳಾಗಿದ್ದು, ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸುವುದು.
  2. ಈ ಸೊಳ್ಳೆಗಳು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ಮನೆಯ ಒಳಾಂಗಣ ಹಾಗೂ ಹೊರಾಂಗಣವನ್ನು ಸ್ವಚ್ಛವಾಗಿಡುವುದು.
  3. ನೀರು ಸಂಗ್ರಹಣಾ ಪರಿಕರಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸುವುದು ಹಾಗೂ ಮುಚ್ಚಳದಿಂದ ಮುಚ್ಚುವುದು.
  4. ನಮ್ಮ ಸುತ್ತ-ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಹಾಗೂ ನೀರು ನಿಲ್ಲದಂತೆ ಎಚ್ಚರವಹಿಸುವುದು.
  5. Zika virus ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸುವುದು. ಸೊಳ್ಳೆ ಪರದೆ, ಸೊಳ್ಳೆ ನಿರೋಧಕಗಳನ್ನು ಉಪಯೋಗಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...