Saturday, September 28, 2024
Saturday, September 28, 2024

District Consumer Disputes Redressal Commission ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ: ಪರಿಹಾರ ನೀಡಲು ಆದೇಶ

Date:

District Consumer Disputes Redressal Commission ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರ ಪೀಠವು ರವಿಕುಮಾರ್ ವೈ.ಎಲ್ ಎಂಬುವವರು ಮಹಂತ ಮೋಟಾರ್ಸ್, ಶಿವಮೊಗ್ಗ ವಿರುದ್ದ ಸೇವಾನ್ಯೂನ್ಯತೆ ಕುರಿತು ದಾಖಲಿಸಿದ್ದ ಪ್ರಕರಣದಲ್ಲಿ ಪರಿಹಾರ ಒದಗಿಸಿ ಆದೇಶಿಸಿದೆ.
ಅರ್ಜಿದಾರ ರವಿಕುಮಾರ್ ವೈ.ಎಲ್ ರವರು ಎದುರಾರ ಮಹಿಂದ್ರಾ ಕಂಪನಿಗೆ ಸೇರಿದ ಸ್ಕಾರ್ಪಿಯೋ ಎನ್ ಝಡ್ 6 ಡೀಸೆಲ್ ಎಂಟಿ ವೈಟ್ ಕಲರ್ ಮಾದರಿಯ ಕಾರನ್ನು ರೂ.21,000 ಪಾವತಿಸಿ ದಿ: 06-08-2023 ರಂದು ಮುಂಗಡ ಬುಕ್ಕಿಂಗ್ ಮಾಡಿರುತ್ತಾರೆ. ಉತ್ಪಾದನಾ ಘಟಕದಲ್ಲಿ ತೊಂದರೆ ಉಂಟಾಗಿದೆ ಎಂದು ಕಾರಣ ನೀಡಿ ಎದುರುದಾರರು ವಾಹನ ನೀಡಿರುವುದಿಲ್ಲ. ಹಾಗೂ ಮುಂಗಡ ಹಣವನ್ನು ಕೂಡ ಮರಳಿ ನೀಡಿರುವುದಿಲ್ಲ.
ಈ ಕುರಿತು ಆಯೋಗದ ಮುಂದೆ ಸೂಕ್ತ ಪರಿಹಾರ ಕೋರಿ ಪ್ರಕರಣ ದಾಖಲಿಸಿದ್ದು, ಆಯೋಗದಿಂದ ಜಾರಿಗೊಳಿಸಿದ ನೋಟಿಸ್ಸಿಗೆ ಸಹ ಎದುರುದಾರರು ಕಲಾಪಕ್ಕೆ ಹಾಜರಾಗಿರದ ಕಾರಣ ಏಕಪಕ್ಷೀಯವಾಗಿ ವಿಚಾರಿಸಲಾಗಿರುತ್ತದೆ.
District Consumer Disputes Redressal Commission ಪ್ರಕರಣದ ಅಂಶಗಳು ಮತ್ತು ಅರ್ಜಿದಾರರು ಹಾಜರುಪಡಿಸಿದ ದಾಖಲೆಗಳನ್ನು ಪರಿಗಣಿಸಿ, ಪರಿಶೀಲಿಸಿದಾಗ ಎದುರುದಾರರ ಸೇವಾನ್ಯೂನ್ಯತೆ ಕಂಡುಬಂದಿದ್ದು ಪ್ರಸ್ತುತ ಪ್ರಕರಣವನ್ನು ಭಾಗಶಃ ಪುರಸ್ಕರಿಸಲಾಗಿರುತ್ತದೆ.
ಎದುರುದಾರರು ದೂರುದಾರರಿಂದ ಪಡೆದ ಮುಂಗಡ ಹಣ ರೂ.21,000 ಗಳನ್ನು ಶೇ.9 ಬಡ್ಡಿ ಸಮೇತ ಪಾವತಿಸಲು ಮತ್ತು ರೂ. 10,000 ಗಳನ್ನು ಮಾನಸಿಕ ಹಿಂಸೆ ಹಾಗೂ ಇತ್ಯಾದಿಗಳಿಗೆ ಸಂಬಂಧಿಸಿದಂತೆ ಪರಿಹಾರವಾಗಿ ಹಾಗೂ ವ್ಯಾಜ್ಯದ ಖರ್ಚು ವೆಚ್ಚಗಳ ಬಾಬ್ತು ರೂ.10,000 ಗಳನ್ನು ಪಾವತಿಸಬೇಕೆಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಟಿ. ಶಿವಣ್ಣ, ಸದಸ್ಯರಾದ ಸವಿತಾ ಬಿ ಪಟ್ಟಣಶೆಟ್ಟಿ ಮತ್ತು ಬಿ.ಡಿ.ಯೋಗಾನಂದ ಇವರು ಪೀಠವು ದಿ: 3-10-2023 ರಂದು ಆದೇಶಿಸಿದೆ ಎಂದು ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shikaripura News ಅಹಿಂದ ಸಂಘಟನೆ ಕರೆ ನೀಡಿದ್ದ ಶಿಕಾರಿಪುರ ಬಂದ್ ಯಶಸ್ವಿ

Shikaripura News ನಾಡಿನ ಅಹಿಂದ ವರ್ಗಕ್ಕೆ ಸೇರಿದ ಜನರ ಹಿತ ಕಾಯುವ...

New Delhi News ಅಪಹರಣಕ್ಕೊಳಗಾಗಿದ್ದ ಬಾಲಕನೇ ಇಂದು ವಕೀಲನಾಗಿ ಅದೇ ಕಿಡ್ನಾಪರ್ಸ್ ಗೆ ಶಿಕ್ಷೆ ಕೊಡಿಸಿದ

New Delhi News ಈ ಹಿಂದೆ 7 ವರ್ಷದವನಾಗಿದ್ದಾಗ ಅಪಹರಣಕ್ಕೊಳಗಾಗಿದ್ದ ಬಾಲಕ...

Kasturi Rangan Comittee Report ಕಸ್ತೂರಿ ರಂಗನ್ ವರದಿ ತಿರಸ್ಕಾರ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

Kasturi Rangan Comittee Report ಜುಲೈನಲ್ಲಿ ಕೇಂದ್ರ ಸರ್ಕಾರ 6ನೇ ಕರಡು...

Hosanagara News ಇಸ್ಪೀಟ್ ಅಡ್ಡೆಗೆ ಪೊಲೀಸರ ದಾಳಿ – 11 ಜನರ ಬಂಧನ 17,640 ರೂಪಾಯಿ ವಶ

Hosanagara News ಹೊಸನಗರ ತಾಲ್ಲೂಕು ಮಾರುತೀಪುರ ಗ್ರಾಮ ಪಂಚಾಯಿತಿಯ ಹಳೆಬಾಣಿಗ ರಸ್ತೆಯ...